Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...