Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...