Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...