Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...