Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...