Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...