Homeಕರ್ನಾಟಕಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

ಸುಳ್ಳು ಕೇಸುಗಳಿಂದ ಸಂಪೂರ್ಣ ಖುಲಾಸೆಯಾದ ನೂರ್‌ ಶ್ರೀಧರ್‌ರವರ ಮನದಾಳದ ಮಾತುಗಳು

- Advertisement -
- Advertisement -

ಇಲ್ಲಿಗೆ ನಾನು ಹಳೆಯ ಅಜ್ಞಾತದಿಂದ ಹೊರಬಂದು ಹೆಚ್ಚು ಕಡಿಮೆ ಐದು ವರ್ಷಗಳಾಗುತ್ತಿವೆ . 2014ರ ಡಿಸೆಂಬರ್‌ನಲ್ಲಿ ಹೊರಗೆ ಬಂದೆ. ಮುಖ್ಯವಾಗಿ ನಾವು ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಸರ್ಕಾರ ಮತ್ತು ನಮ್ಮ ಮಧ್ಯೆ ಇದ್ದು ಕೆಲಸ ಮಾಡಿದ ಸ್ವತಂತ್ರ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ಹಿರಿಯರಾದ ನಮ್ಮ ನಡುವೆ ಈಗ ಇಲ್ಲದ ಪತ್ರಕರ್ತೆ ಗೌರಿ ಲಂಕೇಶ್, ಎ.ಕೆ.ಸುಬ್ಬಯ್ಯನವರು ಕಾರಣವಾಗಿದ್ದಾರೆ.

ಇವರು ನಾವು ಮುಖ್ಯವಾಹಿನಿಗೆ ಬರಲು ಮುಖ್ಯಮಂತ್ರಿ ಮತ್ತು ಮಂತ್ರಿಗಳ ಸಭೆಯಲ್ಲಿ ಬಹಳ ಸಮರ್ಥವಾಗಿ ನಮ್ಮ ಮೇಲೆ ಹಾಕಿದ ಕೇಸುಗಳು ಸುಳ್ಳು ಕೇಸುಗಳು ಎಂದು ವಾದಿಸಿದ್ದರು. ನಮ್ಮ ಮೇಲೆ ಹಾಕಿರುವಂತಹ ಕೇಸುಗಳು 2006ರ ನಂತರದ್ದಾಗಿದೆ. ಆದರೆ ಅಷ್ಟೋತ್ತಿಗಾಗಲೆ ನಾವು ಸಂಘಟನೆ ತೊರೆದಿದ್ದೆವು. ನಾವು ಇದ್ದ ಪಕ್ಷವು ಸಹ ನಾವು ಪಕ್ಷ ಬಿಟ್ಟು ಬಂದ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿತ್ತು. ಆದರೆ ಪೋಲಿಸರು ಮಾತ್ರ ಬೇರೆ ಬೇರೆ ಕೇಸುಗಳಲ್ಲಿ ನಮ್ಮ ಹೆಸರನ್ನು ಸುಮ್ಮನೆ ಸೇರಿಸಿತ್ತು.

ಸಾಕೇತ್ ರಾಜನ್ ಹತ್ಯೆಯಾದ ನಂತರ ರಾಜ್ಯ ಸಮಿತಿಯ ನಾಯಕತ್ವವನ್ನು ನಾನು ವಹಿಸಬೇಕೆಂಬ ಮಾತು ಬಂದಾಗ ನಾನು ಈ ಹೋರಾಟದಲ್ಲಿ ಭಿನ್ನಾಭಿಪ್ರಾಯವಿದ್ದುದರಿಂದ ಅದಕ್ಕೆ ಒಪ್ಪಲಿಲ್ಲ. ಇದು ಹೇಗೋ ಮಾಹಿತಿ ಮಾಧ್ಯಮಗಳವರೆಗೂ ಬಂದು ಆಗಲೇ ನೂರ್ ಶ್ರೀಧರ್ ಎಂಬ ವ್ಯಕ್ತಿ ಇದಾನೆ ಅನ್ನುವುದು ಗೊತ್ತಾಗಿದ್ದು. ಅಲ್ಲಿಯವರೆಗೂ ಪೋಲಿಸರಿಗೂ ಸಹ ಈ ವಿಷಯ ಗೊತ್ತಿರಲಿಲ್ಲ. ನಾನು ಪಕ್ಷ ಬಿಟ್ಟರೂ ಕೂಡ ಹೇಗೆ ನನ್ನ ಸುಳ್ಳು ಕೇಸ್‍ಗಳು ದಾಖಲಾಗುತ್ತವೆ ಎನ್ನುವುದನ್ನು ಈ ಪ್ರಕರಣ ಸೂಚಿಸುತ್ತದೆ.

ಒಬ್ಬ ಯಾವುದೋ ಪ್ರಕರಣದಲ್ಲಿ ಕಾಣಿಸಿಕೊಂಡರೆ ಸಾಕು ಏನಾದರೂ ಘಟನೆ ನಡೆದಾಗ ಮನಸೋ ಇಚ್ಚೆ ಪೋಲಿಸರು ಇಂತಹ ಕೇಸುಗಳಲ್ಲಿ ಅನುಮಾನ ಬಂದವರನ್ನೆಲ್ಲ ಸೇರಿಸುತ್ತಾ ಹೋಗುತ್ತಾರೆ. ಈ ಮಾದರಿ ಬದಲಾಗಬೇಕಿದೆ. ನಮ್ಮ ಸ್ನೇಹಿತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಕೇಸು ಕೂಡ ಹಾಗೆ ಆಗಿದೆ.

ನರಸಿಂಹ ಮೂರ್ತಿಯವರು ಎಲ್ಲಾ ಸಂಘಟನೆಗಳ ಹೋರಾಟಗಳಿಗೂ ಬೆಂಬಲಿಸುತ್ತಿದ್ದರು. ಆದರೆ ಅವರಿಗೂ ನಕ್ಸಲ್ ಹೋರಾಟಕ್ಕೂ ನಂಟೇ ಇರಲಿಲ್ಲ. ಆದರೆ ನರಸಿಂಹ ಮೂರ್ತಿಯವರನ್ನು ಈಗ ಈ ರೀತಿ ಅನುಮಾನಿಸಲಾಗುತಿದೆ. ನರಸಿಂಹಮೂರ್ತಿಯವರು ಎಲ್ಲರ ಕಣ್ಣಮುಂದೆಯೇ ದೊಡ್ಡ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಆದರೂ ಅವರನ್ನು ತಲೆಮರೆಸಿಕೊಂಡಿದ್ದವರು ಎಂದು ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಇದೆಲ್ಲ ಸರ್ಕಾರ ನಡೆದುಕೊಳ್ಳುತ್ತಿರುವ ತಪ್ಪು ಮಾದರಿಯಾಗಿದೆ.

ನರಸಿಂಹ ಮೂರ್ತಿಯವರಿಗೆ ಒಂದು ಕುಟುಂಬವಿದೆ. ಆತನ ವ್ಯಾಪಾರ ವಹಿವಾಟು ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರದಿಂದ ಈ ರೀತಿ ಮಾಡುವುದು ಬರಿ ತಪ್ಪಲ್ಲ ದೊಡ್ಡ ಅಫರಾದವಾಗಿದೆ. ಇದ್ಕಕ್ಕೆ ಕರ್ನಾಟಕದ ನೆಲದಲ್ಲಿ ಬರುತ್ತಿರುವ ಪ್ರತಿರೋಧ, ಹೋರಾಟ ಎಲ್ಲಾ ಪ್ರಜಾತಾಂತ್ರಿಕ ದನಿಗಳು ನರಸಿಂಹಮೂರ್ತಿಯವರ ಜೊತೆ ನಿಂತುಕೊಂಡಿವೆ. ಈ ದನಿಯೇ ನಾವು ಮುಖ್ಯವಾಹಿನಿಗೆ ಬರಲು ಕೂಡ ಕಾರಣವಾದದ್ದು.

ಪ್ರಜಾತಾಂತ್ರಿಕ ಅವಕಾಶಗಳನ್ನ ಉಳಿಸಿಕೊಳ್ಳಲಿಕ್ಕೆ ಸುಧೀರ್ಘವಾದ ಸಂಘರ್ಷ ಮಾಡಲು ನಾವು ಸಿದ್ದರಿದ್ದೇವೆ. ನನ್ನ ಮೇಲೂ ಕೂಡ ಮುಂದೆ ಸುಳ್ಳು ಕೇಸುಗಳು ಮತ್ತೆ ಬೀಳಬಹುದು. ಅದರ ಬಗ್ಗೆ ನನಗೆ ಅನುಮಾನವೇ ಇಲ್ಲ. ಆದರೆ ಪ್ರಜಾತಾಂತ್ರಿಕ ದನಿ ಕರ್ನಾಟಕದಲ್ಲಿದೆ ಇದೇ ಹಾದಿಯೇಲ್ಲಿ ದಿಟ್ಟವಾದ ಹೋರಾಟವನ್ನು ಮುಂದುವರೆಸಬೇಕು ಅಂದುಕೊಂಡಿದ್ದೇನೆ.

ಸಾಕಷ್ಟು ಜನಕ್ಕೆ ಈ ಸಂಧರ್ಭದಲ್ಲಿ ಕೃತಜ್ಞತೆ ಹೇಳಬೇಕು, ಪಟ್ಟಿ ದೊಡ್ಡದಿದೆ. ಜಿ,ರಾಜಶೇಖರ್ ಅಂತಹವರು ಸಹ ನನ್ನ ಬೆಂಬಲಕ್ಕೆ ನಿಂತು ಪ್ರತಿ ಕೇಸಿದ್ದಾಗಲೂ ನಮ್ಮ ಜೊತೆ ಆರೋಪಿಯ ರೀತಿ ಬಂದು ಕೋರ್ಟ್‍ಲ್ಲಿ ನಿಂತಿದ್ದಾರೆ, ನನ್ನ ಕೇಸಿಗೆ ಬೇಲ್‌ ಕೊಟ್ಟಿದ್ದಾರೆ. ತುಂಬಾ ಜನ ನಮ್ಮ ಜೊತೆಗೆ ನಿಂತಿದ್ದಾರೆ ಈ ಎಲ್ಲರಿಗೂ ನನ್ನ ಮನದಾಳದ ಧನ್ಯವಾದಗಳು ಮತ್ತು ಒಂದು ದೊಡ್ಡ ಸಲಾಂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...