Homeಮುಖಪುಟಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್(80) ಇಂದು ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

“ಶುಕ್ರವಾರ ಅವರ ಸ್ಥಿತಿ ಹದಗೆಟ್ಟಿದ್ದು, ಸಂಜೆ 6:00 ಗಂಟೆಗೆ ಹೃದಯ ಸ್ತಂಭನವಾಯಿತು ಮತ್ತು ಸಂಜೆ 6:30 ಕ್ಕೆ ನಿಧನರಾದರು. ನಾವು ಎಷ್ಟೇ ಪ್ರಯತ್ನಿಸಿದ್ದರು ಅವರನ್ನು ಉಳಿಸಿಕೊಳ್ಳಲಾಗಲಿಲ್ಲ. ಪ್ರೀತಿಯ ನಾಯಕನ ನಷ್ಟಕ್ಕೆ ದೇಶದ ಜನರ ಶೋಕದಲ್ಲಿ ಆಸ್ಪತ್ರೆಯೂ ಸೇರುತ್ತದೆ” ಎಂದು ಆಸ್ಪತ್ರೆ ತಿಳಿಸಿದೆ.

1977 ರಲ್ಲಿ ಅಗ್ನಿವೇಶ್ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು ಮತ್ತು 1979 ರಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1981 ರಲ್ಲಿ, ಮಂತ್ರಿಯಾಗಿದ್ದಾಗ ’ಬಾಂಡೆಡ್‌ ಲೇಬರ್ ಲಿಬರೇಷನ್ ಫ್ರಂಟ್’ ಎನ್ನುವ ಎನ್‌ಗಿಒ ಅನ್ನು ಸ್ಥಾಪಿಸಿದ್ದರು.

ಸಾಮಾಜಿಕ ಕಾರ್ಯಕರ್ತ, ಧಾರ್ಮಿಕ ಮುಖಂಡ ಮತ್ತು ಹರಿಯಾಣ ಮಾಜಿ ಶಾಸಕ ಸ್ವಾಮಿ ಅಗ್ನಿವೇಶ್ ಸಾವಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಸಂಸದ ಶಶಿ ತರೂರ್‌ ಟ್ವೀಟ್ ಮಾಡಿ, “ಸ್ವಾಮಿ ಅಗ್ನಿವೇಶ್ ನಿಧನದಿಂದ ನಾನು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಹುರುಪಿನ ಮತ್ತು ದೃಢ ನಿಶ್ಚಯದ ವ್ಯಕ್ತಿಯಾಗಿದ್ದರು. ಶೋಷಿತರ ಪರ ಧ್ವನಿಯೆತ್ತಲು ಅವರೆಂದೂ ತಮ್ಮ ವಯಸ್ಸನ್ನು ಲೆಕ್ಕಿಸಲಿಲ್ಲ. ಲಕ್ಷಾಂತರ ಜನರ ಹಕ್ಕುಗಳನ್ನು ಎತ್ತಿಹಿಡಿಯಲು ಹೋರಾಡಿದ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ” ಎಂದಿದ್ದಾರೆ.

ಮಾನವೀಯತೆ ಮತ್ತು ಸಹಿಷ್ಣುತೆಗಾಗಿ ದಿಟ್ಟ ಹೋರಾಟ ನಡೆಸಿದ ಸ್ವಾಮಿ ಅಗ್ನಿವೇಶ್ ಅವರ ನಿಧನವು ಒಂದು ದೊಡ್ಡ ದುರಂತ. ಸಾರ್ವಜನಿಕ ಹಿತಕ್ಕಾಗಿ ದೊಡ್ಡ ಅಪಾಯಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದ ಅವರು ನನಗೆ ತಿಳಿದ ಧೈರ್ಯಶಾಲಿಗಳ ಪೈಕಿ ನಿಜವಾದ ಯೋಧ. 2 ವರ್ಷ ಹಿಂದೆ ಜಾರ್ಖಂಡ್‌ನಲ್ಲಿ ಬಿಜೆಪಿ / ಆರ್‌ಎಸ್‌ಎಸ್ ಗುಂಪಿನ ಕ್ರೂರ ದಾಳಿಯಿಂದ ಅವರ ಯಕೃತ್ತು ಹಾನಿಗೊಳಗಾಯಿತು. ಅವರಿಗೆ ಸಂತಾಪಗಳು” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು. ಅಂದು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ತಾನು ತಂಗಿದ್ದ ಹೋಟೆಲ್‌ನಿಂದ ಹೊರಬರುವಾಗ, “ಜೈ ಶ್ರೀ ರಾಮ್” ಬೊಬ್ಬೆ ಹೊಡೆಯುತ್ತಾ ಬಂದ ಜನಸಮೂಹವೊಂದು ಅವರ ಮೇಲೆ ಹಲ್ಲೆ ನಡೆಸಿತ್ತು.

ದಾಳಿಯ ನಂತರ ನಾನು ಯಾವುದೇ ರೀತಿಯ ಹಿಂಸಾಚಾರಕ್ಕೆ ವಿರೋಧಿಯಾಗಿದ್ದೇನೆ, ನನ್ನನ್ನು ಶಾಂತಿ ಪ್ರಿಯ ವ್ಯಕ್ತಿ ಎಂದು ಕರೆಯಲಾಗುತ್ತದೆ. ನನ್ನ ಮೇಲೆ ಏಕೆ ಹಲ್ಲೆ ನಡೆಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಸ್ವಾಮಿ ಅಗ್ನಿವೇಶ್ ಎನ್‌ಡಿಟಿವಿಗೆ ತಿಳಿಸಿದ್ದರು.

ಮೊದಲ ದಾಳಿಯ ಸಮಯದಲ್ಲಿ ಜಾರ್ಖಂಡ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಇದನ್ನು ಖಂಡಿಸಿ, ದಾಳಿಕೋರರು ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಿಳಿಸಿತ್ತು.

ಹಲ್ಲೆ ನಡೆದು ತಿಂಗಳ ನಂತರ ಅವರ ಮೇಲೆ ಮತ್ತೆ ದೆಹಲಿಯಲ್ಲಿ ಹಲ್ಲೆ ನಡೆಸಲಾಯಿತು. ಈ ಬಾರಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ತೆರಳುತ್ತಿದ್ದರು.

ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ “ಸ್ವತಂತ್ರ ತನಿಖೆ” ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದ 270 ಪ್ರಖ್ಯಾತ ವ್ಯಕ್ತಿಗಳ ಪೈಕಿ ಸ್ವಾಮಿ ಅಗ್ನಿವೇಶ್ ಕೂಡ ಒಬ್ಬರು.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...