Homeಮುಖಪುಟಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್(80) ಇಂದು ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

“ಶುಕ್ರವಾರ ಅವರ ಸ್ಥಿತಿ ಹದಗೆಟ್ಟಿದ್ದು, ಸಂಜೆ 6:00 ಗಂಟೆಗೆ ಹೃದಯ ಸ್ತಂಭನವಾಯಿತು ಮತ್ತು ಸಂಜೆ 6:30 ಕ್ಕೆ ನಿಧನರಾದರು. ನಾವು ಎಷ್ಟೇ ಪ್ರಯತ್ನಿಸಿದ್ದರು ಅವರನ್ನು ಉಳಿಸಿಕೊಳ್ಳಲಾಗಲಿಲ್ಲ. ಪ್ರೀತಿಯ ನಾಯಕನ ನಷ್ಟಕ್ಕೆ ದೇಶದ ಜನರ ಶೋಕದಲ್ಲಿ ಆಸ್ಪತ್ರೆಯೂ ಸೇರುತ್ತದೆ” ಎಂದು ಆಸ್ಪತ್ರೆ ತಿಳಿಸಿದೆ.

1977 ರಲ್ಲಿ ಅಗ್ನಿವೇಶ್ ಹರಿಯಾಣ ವಿಧಾನಸಭೆಯ ಸದಸ್ಯರಾಗಿದ್ದರು ಮತ್ತು 1979 ರಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1981 ರಲ್ಲಿ, ಮಂತ್ರಿಯಾಗಿದ್ದಾಗ ’ಬಾಂಡೆಡ್‌ ಲೇಬರ್ ಲಿಬರೇಷನ್ ಫ್ರಂಟ್’ ಎನ್ನುವ ಎನ್‌ಗಿಒ ಅನ್ನು ಸ್ಥಾಪಿಸಿದ್ದರು.

ಸಾಮಾಜಿಕ ಕಾರ್ಯಕರ್ತ, ಧಾರ್ಮಿಕ ಮುಖಂಡ ಮತ್ತು ಹರಿಯಾಣ ಮಾಜಿ ಶಾಸಕ ಸ್ವಾಮಿ ಅಗ್ನಿವೇಶ್ ಸಾವಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಂಗನಾ v/s ಶಿವಸೇನೆ: ಸೋನಿಯಾ ಗಾಂಧಿ ಹೆಸರನ್ನೇಕೆ ಎಳೆದು ತರಲಾಯಿತು?

ಸಂಸದ ಶಶಿ ತರೂರ್‌ ಟ್ವೀಟ್ ಮಾಡಿ, “ಸ್ವಾಮಿ ಅಗ್ನಿವೇಶ್ ನಿಧನದಿಂದ ನಾನು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಹುರುಪಿನ ಮತ್ತು ದೃಢ ನಿಶ್ಚಯದ ವ್ಯಕ್ತಿಯಾಗಿದ್ದರು. ಶೋಷಿತರ ಪರ ಧ್ವನಿಯೆತ್ತಲು ಅವರೆಂದೂ ತಮ್ಮ ವಯಸ್ಸನ್ನು ಲೆಕ್ಕಿಸಲಿಲ್ಲ. ಲಕ್ಷಾಂತರ ಜನರ ಹಕ್ಕುಗಳನ್ನು ಎತ್ತಿಹಿಡಿಯಲು ಹೋರಾಡಿದ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಓಂ ಶಾಂತಿ” ಎಂದಿದ್ದಾರೆ.

ಮಾನವೀಯತೆ ಮತ್ತು ಸಹಿಷ್ಣುತೆಗಾಗಿ ದಿಟ್ಟ ಹೋರಾಟ ನಡೆಸಿದ ಸ್ವಾಮಿ ಅಗ್ನಿವೇಶ್ ಅವರ ನಿಧನವು ಒಂದು ದೊಡ್ಡ ದುರಂತ. ಸಾರ್ವಜನಿಕ ಹಿತಕ್ಕಾಗಿ ದೊಡ್ಡ ಅಪಾಯಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದ ಅವರು ನನಗೆ ತಿಳಿದ ಧೈರ್ಯಶಾಲಿಗಳ ಪೈಕಿ ನಿಜವಾದ ಯೋಧ. 2 ವರ್ಷ ಹಿಂದೆ ಜಾರ್ಖಂಡ್‌ನಲ್ಲಿ ಬಿಜೆಪಿ / ಆರ್‌ಎಸ್‌ಎಸ್ ಗುಂಪಿನ ಕ್ರೂರ ದಾಳಿಯಿಂದ ಅವರ ಯಕೃತ್ತು ಹಾನಿಗೊಳಗಾಯಿತು. ಅವರಿಗೆ ಸಂತಾಪಗಳು” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ಜುಲೈ 2018 ರಲ್ಲಿ ಸ್ವಾಮಿ ಅಗ್ನಿವೇಶ್  ಮೇಲೆ ಜಾರ್ಜಂಡ್‌ನ ಪಕೂರ್‌ನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕ್ರೂರವಾಗಿ ಹಲ್ಲೆ ಮಾಡಿದ್ದರು. ಅಂದು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ತಾನು ತಂಗಿದ್ದ ಹೋಟೆಲ್‌ನಿಂದ ಹೊರಬರುವಾಗ, “ಜೈ ಶ್ರೀ ರಾಮ್” ಬೊಬ್ಬೆ ಹೊಡೆಯುತ್ತಾ ಬಂದ ಜನಸಮೂಹವೊಂದು ಅವರ ಮೇಲೆ ಹಲ್ಲೆ ನಡೆಸಿತ್ತು.

ದಾಳಿಯ ನಂತರ ನಾನು ಯಾವುದೇ ರೀತಿಯ ಹಿಂಸಾಚಾರಕ್ಕೆ ವಿರೋಧಿಯಾಗಿದ್ದೇನೆ, ನನ್ನನ್ನು ಶಾಂತಿ ಪ್ರಿಯ ವ್ಯಕ್ತಿ ಎಂದು ಕರೆಯಲಾಗುತ್ತದೆ. ನನ್ನ ಮೇಲೆ ಏಕೆ ಹಲ್ಲೆ ನಡೆಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಸ್ವಾಮಿ ಅಗ್ನಿವೇಶ್ ಎನ್‌ಡಿಟಿವಿಗೆ ತಿಳಿಸಿದ್ದರು.

ಮೊದಲ ದಾಳಿಯ ಸಮಯದಲ್ಲಿ ಜಾರ್ಖಂಡ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಇದನ್ನು ಖಂಡಿಸಿ, ದಾಳಿಕೋರರು ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ತಿಳಿಸಿತ್ತು.

ಹಲ್ಲೆ ನಡೆದು ತಿಂಗಳ ನಂತರ ಅವರ ಮೇಲೆ ಮತ್ತೆ ದೆಹಲಿಯಲ್ಲಿ ಹಲ್ಲೆ ನಡೆಸಲಾಯಿತು. ಈ ಬಾರಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಂತಿಮ ನಮನ ಸಲ್ಲಿಸಲು ತೆರಳುತ್ತಿದ್ದರು.

ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ “ಸ್ವತಂತ್ರ ತನಿಖೆ” ಮಾಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದ 270 ಪ್ರಖ್ಯಾತ ವ್ಯಕ್ತಿಗಳ ಪೈಕಿ ಸ್ವಾಮಿ ಅಗ್ನಿವೇಶ್ ಕೂಡ ಒಬ್ಬರು.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...