Homeಕರ್ನಾಟಕಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

ಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

- Advertisement -
- Advertisement -

ದಶಕಗಳ ಕಾಲ ಸಾಮಾಜಿಕ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜನಪರ ಚಳವಳಿಗಳ ಸಂಗಾತಿ, ಯುವ ಹೋರಾಟಗಾರ ತ್ರಿಮೂರ್ತಿ ಮಂಡ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಶಕ್ತಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ, ಜನಚಿಂತನಾ ಕೇಂದ್ರ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಅವರು, ಇತ್ತೀಚಿಗಿನ ದಲಿತರ ಸಾಂಸ್ಕೃತಿಕ ಪ್ರತಿರೋಧ, ಒಳಮೀಸಲಾತಿ ಹೋರಾಟದಲ್ಲಿಯೂ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟದ ಪ್ರಚಾರದ ಕೆಲಸದಲ್ಲಿ ನಿರತರಾಗಿದ್ದರು.

ಮೂಲತಃ ಕುಂಬಳಗೋಡು ಬಳಿಯ ದೇವಗೆರೆಯವರಾದ ತ್ರಿಮೂರ್ತಿಯವರು 2010-11 ರಲ್ಲಿ ಚಳವಳಿಗೆ ತೆರೆದುಕೊಂಡಿದ್ದರು. ಆನಂತರ ಭೂಮಿ- ವಸತಿ ಹೋರಾಟ, ಕೋಮು ಸೌಹಾರ್ದ ಚಳವಳಿ, ದಲಿತ ಚಳವಳಿ ಮತ್ತು ಮಹಿಳಾ ಚಳವಳಿಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದರು. ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದರು, ಪರಿಶ್ರಮ ಹಾಕಿ ಕೆಲಸ ಮಾಡುತ್ತಿದ್ದರು ಎಂಬ ಹೆಗ್ಗಳಿಕೆ ಅವದ್ದಾಗಿತ್ತು.

ವಯಕ್ತಿಕ ಕಾರಣಗಳಿಂದ ಬೇಸತ್ತು ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜನಪರ ಚಳವಳಿಗಳ ಪರವಾಗಿ ತುಡಿಯುತ್ತಿದ್ದ ಅವರ ಅಕಾಲಿಕ ನಿಧನಕ್ಕೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಪರ ಚಳವಳಿಗಳ ಸಂಗಾತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಹೋರಾಟದ ಸ್ಥಳದಲ್ಲಿ ಇಂದು ತ್ರಿಮೂರ್ತಿ ನೆನಪಿನ ಶ್ರದ್ಧಾಂಜಲಿ ಸಭೆ ನಡೆಸಿದೆ.

“ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಹೋರಾಟ ಹುರಿಗೊಳ್ಳುತ್ತಿದ್ದಾಗ ಬೆಳಂಬೆಳಗ್ಗೆ ಶ್ರಮಿಕರ ವಸತಿ ಮತ್ತು ಕೆಲಸದ ಪ್ರದೇಶಗಳಲ್ಲಿ ಅಲೆದೆಲೆದು ಸಂಘಟನೆ ಬಲಪಡಿಸಲು ಶ್ರಮಿಸಿದವರು. ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಚಟುವಟಿಕೆಗಳು ಸಕ್ರಿಯವಾಗಿದ್ದಾಗ ಅದರ ದಕ್ಷ ಸಂಘಟಕರಾಗಿ ದುಡಿದವರು. ಮಂಗಳೂರಿನ ಸಹಬಾಳ್ವೆ ಸಾಗರ ಸಮಾವೇಶ ಸಂಘಟಿಸುವುದರಲ್ಲಿ ಮುಖ್ಯ ಜವಬ್ದಾರಿ ನಿರ್ವಹಿಸಿದವರು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಅಭಿಯಾನ ಶುರುವಾದಾಗ ಅದರ ಸೋಷಿಯಲ್ ಮೀಡಿಯಾ ಕೆಲಸವನ್ನು ಮೈಮೇಲೆ ಹೊತ್ತು ಮಾಡಿದವರು. ಪೆಡೆಸ್ಟ್ರಿಯನ್ ಪಿಚ್ಚರ್ಸಸ್ ನ ಕಾರ್ಯಚಟುವಟಿಕೆಗಳಲ್ಲಿ, ಲಗೋರಿ ಗುಂಪಿನ ಚಾಲನೆಯಲ್ಲಿ ಮನಸ್ಸಿಟ್ಟು ಕೆಲಸ ಮಾಡಿದವರು. ವೈಚಾರಿಕ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ವೈಚಾರಿಕ ಗ್ರಹಿಕೆಯನ್ನು ಬೆಳೆಸಬೇಕು ಎಂಬ ಉತ್ಕಟ ಬಯಕೆಯೊಂದಿಗೆ ಜನ ಚಿಂತನಾ ಕೇಂದ್ರದ ಕೇಂದ್ರ ತಂಡದ ಭಾಗವಾಗಿ ಅನೇಕ ಜವಬ್ದಾರಿಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡವರು, ಮಾತ್ರವಲ್ಲದೆ ಕರ್ನಾಟಕದ ಸಮಸ್ತ ಚಳವಳಿಗಳೂ ತನ್ನವೆಂದು ತೊಡಗಿಸಿಕೊಂಡವರು…. ಇಂತಹ ದಿಟ್ಟ ಸಂಗಾತಿಯ ಅಗಲಿಕೆ ಸಂಘಟನೆಗೆ ಮತ್ತು ಹೋರಾಟದ ವಲಯಕ್ಕೆ ಅಘಾತ ನೀಡಿದೆ” ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

“ಸಾಮಾಜಿಕ ಮತ್ತು ಚಳವಳಿಯ ಕಾರಣಗಳಷ್ಟೇ ಅಲ್ಲದೇ ಕೌಟುಂಬಿಕ ಕಾರಣಗಳಿಗೂ ಬಂದೊದಗುತ್ತಿದ್ದ ತ್ರಿಮೂರ್ತಿಯ ದಿಢೀರ್ ಅಗಲಿಕೆ ನಮ್ಮ ಮನೆಯವರಿಗೆಲ್ಲಾ ಆಘಾತದ ಮತ್ತು ನೋವಿನ ಸಂಗತಿಯೇ. ಹೆಚ್ಚು ಹೇಳಲು ತೋಚುತ್ತಲೂ ಇಲ್ಲ, ಕಷ್ಟವಾಗುತ್ತಲೂ ಇದೆ. ಆದರೆ ನಾವ್ಯಾರೂ ಯಾಕೆ ತ್ರಿಮೂರ್ತಿಗೆ ನೆನಪಿಗೆ ಬರಲೇ ಇಲ್ಲ. ನಮ್ಮ ಸಂಬಂಧಗಳ ಆಪ್ತತೆಯನ್ನು ಮತ್ತು ಆತ್ಮೀಯತೆಯನ್ನು ಅನುಮಾನಿಸುವಷ್ಟು ’ನಾನು’ ಅಪ್ರಮಾಣಿಕವಾಗಿ ಅವನಿಗೆ ಕಂಡೆನೇ ಎಂಬುದಂತೂ ಪದೇ ಪದೇ ಅನ್ನಿಸುತ್ತಿದೆ. ನಾನು ಇನ್ನೆಷ್ಟು ಮುಕ್ತವಾಗಿ ಕಾಣಿಸಿಕೊಳ್ಳಬೇಕಿತ್ತೋ?” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಲ್ಲರಿಗೂ ಆಪ್ತ ಸಮಾಲೋಚನೆಯ ಅಗತ್ಯವಿದೆ. ಅದನ್ನು ಕಡೆಗಣಿಸಬೇಡಿ. ಮನಸ್ಸು ಸೂಕ್ಷ್ಮ ಮತ್ತು ಭಾವುಕ. ಅದಕ್ಕೆ ಪದೇ ಪದೇ ಸಮಾಲೋಚನೆಯ ಮೂಲಕ ಅದರ ಬಲವನ್ನು ಹೆಚ್ಚಿಸಬೇಕಾಗುತ್ತದೆ.
ನೊಂದವರ ಮತ್ತು ಶೋಷಿತರ ಪರ ಹೋರಾಡುತ್ತಿದ್ದ, ಸಾಮಾಜಿಕ ನ್ಯಾಯವನ್ನೊದಗಿಸಲು ಹೆಣಗಾಡುತ್ತಾ ಅನ್ಯಾಯವಾಗಿ ಸಾವನ್ನು ತಂದುಕೊಂಡ ತ್ರಿಮೂರ್ತಿಗೆ ವಿದಾಯದ ವಂದನೆ ಸಲ್ಲಿಸಲು ನನ್ನಿಂದಂತೂ ಆಗುವುದಿಲ್ಲ. ಒಂದು ಹೋರಾಟದ ಜೀವದ ಕತೆ ಹೀಗೆ ಮುಗಿಯಕೂಡದಿತ್ತು ಎಂದು ಯೋಗೇಶ್ ಮಾಸ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸುಮಾರು ವರ್ಷಗಳಿಂದ ಜನ ಚಳವಳಿಯಲ್ಲಿ ತೊಡಗಿಸಿಕೊಂಡ ಕರ್ನಾಟಕ ಜನಶಕ್ತಿಯ ಹೋರಾಟದ ಒಡನಾಡಿ, ಗೆಳೆಯ ತ್ರಿಮೂರ್ತಿ ಅವರು ಅಕಾಲಿಕವಾಗಿ ನಮ್ಮನ್ನಗಲಿರುವುದು ಅತೀವ ನೋವು ತಂದಿದೆ. ಜನಪರ ಕಾಳಜಿಯೊಂದಿಗೆ ಹಲವಾರು ಚಳವಳಿಗಳಲ್ಲಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಹಲವರ ಮನಸ್ಸಲ್ಲಿ ಮನೆಮಾಡಿದ್ದರು. ಸೂಕ್ಷ್ಮ-ಸೌಜನ್ಯದ, ಸಹೃದಯಿ ಗೆಳೆಯರೊಬ್ಬರ ಅಗಲಿಕೆ ನಂಬಲಸಾಧ್ಯವಾಗಿದೆ. 2014ರ ಸಂದರ್ಭದಲ್ಲಿ ತಿಂಥಿಣಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸಂದರ್ಭದಲ್ಲಿನ ಸ್ಮರಣೀಯ ಕ್ಷಣಗಳನ್ನು ಇಂದಿಗೂ ಮರೆಯಲಾಗದು. ಗೆಳೆಯ ನಮ್ಮೊಂದಿಗೆ ಭೌತಿಕವಾಗಿ ಇಲ್ಲದಿದ್ದರೂ, ಮಾನಸಿಕವಾಗಿ ಜೊತೆಗಿರುತ್ತಾರೆ. ಬದ್ಧತೆ, ಸಮರ್ಪಣಾ ಮನೋಭಾವ, ಜನಪರ ಕಾಳಜಿಯ ಮೂಲಕ ನಮ್ಮಲ್ಲಿ ತ್ರಿಮೂರ್ತಿಯವರು ಎಚ್ಚರ ಪ್ರಜ್ಞೆಯಾಗಿರುತ್ತಾರೆ” ಎಂದು ಹೋರಾಟಗಾರ ನಾಗರಾಜ ಪೂಜಾರ್ ಬರೆದಿದ್ದಾರೆ.

ತ್ರಿಮೂರ್ತಿಯವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ದೇವಗೆರೆಗೆ ತರುತ್ತಿದ್ದು ಸಂಜೆ 4 ಗಂಟೆ ಹೊತ್ತಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...