Homeಕರ್ನಾಟಕಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

ಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

- Advertisement -
- Advertisement -

ದಶಕಗಳ ಕಾಲ ಸಾಮಾಜಿಕ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜನಪರ ಚಳವಳಿಗಳ ಸಂಗಾತಿ, ಯುವ ಹೋರಾಟಗಾರ ತ್ರಿಮೂರ್ತಿ ಮಂಡ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಶಕ್ತಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ, ಜನಚಿಂತನಾ ಕೇಂದ್ರ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಅವರು, ಇತ್ತೀಚಿಗಿನ ದಲಿತರ ಸಾಂಸ್ಕೃತಿಕ ಪ್ರತಿರೋಧ, ಒಳಮೀಸಲಾತಿ ಹೋರಾಟದಲ್ಲಿಯೂ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟದ ಪ್ರಚಾರದ ಕೆಲಸದಲ್ಲಿ ನಿರತರಾಗಿದ್ದರು.

ಮೂಲತಃ ಕುಂಬಳಗೋಡು ಬಳಿಯ ದೇವಗೆರೆಯವರಾದ ತ್ರಿಮೂರ್ತಿಯವರು 2010-11 ರಲ್ಲಿ ಚಳವಳಿಗೆ ತೆರೆದುಕೊಂಡಿದ್ದರು. ಆನಂತರ ಭೂಮಿ- ವಸತಿ ಹೋರಾಟ, ಕೋಮು ಸೌಹಾರ್ದ ಚಳವಳಿ, ದಲಿತ ಚಳವಳಿ ಮತ್ತು ಮಹಿಳಾ ಚಳವಳಿಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದರು. ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದರು, ಪರಿಶ್ರಮ ಹಾಕಿ ಕೆಲಸ ಮಾಡುತ್ತಿದ್ದರು ಎಂಬ ಹೆಗ್ಗಳಿಕೆ ಅವದ್ದಾಗಿತ್ತು.

ವಯಕ್ತಿಕ ಕಾರಣಗಳಿಂದ ಬೇಸತ್ತು ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜನಪರ ಚಳವಳಿಗಳ ಪರವಾಗಿ ತುಡಿಯುತ್ತಿದ್ದ ಅವರ ಅಕಾಲಿಕ ನಿಧನಕ್ಕೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಪರ ಚಳವಳಿಗಳ ಸಂಗಾತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಹೋರಾಟದ ಸ್ಥಳದಲ್ಲಿ ಇಂದು ತ್ರಿಮೂರ್ತಿ ನೆನಪಿನ ಶ್ರದ್ಧಾಂಜಲಿ ಸಭೆ ನಡೆಸಿದೆ.

“ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಹೋರಾಟ ಹುರಿಗೊಳ್ಳುತ್ತಿದ್ದಾಗ ಬೆಳಂಬೆಳಗ್ಗೆ ಶ್ರಮಿಕರ ವಸತಿ ಮತ್ತು ಕೆಲಸದ ಪ್ರದೇಶಗಳಲ್ಲಿ ಅಲೆದೆಲೆದು ಸಂಘಟನೆ ಬಲಪಡಿಸಲು ಶ್ರಮಿಸಿದವರು. ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಚಟುವಟಿಕೆಗಳು ಸಕ್ರಿಯವಾಗಿದ್ದಾಗ ಅದರ ದಕ್ಷ ಸಂಘಟಕರಾಗಿ ದುಡಿದವರು. ಮಂಗಳೂರಿನ ಸಹಬಾಳ್ವೆ ಸಾಗರ ಸಮಾವೇಶ ಸಂಘಟಿಸುವುದರಲ್ಲಿ ಮುಖ್ಯ ಜವಬ್ದಾರಿ ನಿರ್ವಹಿಸಿದವರು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಅಭಿಯಾನ ಶುರುವಾದಾಗ ಅದರ ಸೋಷಿಯಲ್ ಮೀಡಿಯಾ ಕೆಲಸವನ್ನು ಮೈಮೇಲೆ ಹೊತ್ತು ಮಾಡಿದವರು. ಪೆಡೆಸ್ಟ್ರಿಯನ್ ಪಿಚ್ಚರ್ಸಸ್ ನ ಕಾರ್ಯಚಟುವಟಿಕೆಗಳಲ್ಲಿ, ಲಗೋರಿ ಗುಂಪಿನ ಚಾಲನೆಯಲ್ಲಿ ಮನಸ್ಸಿಟ್ಟು ಕೆಲಸ ಮಾಡಿದವರು. ವೈಚಾರಿಕ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ವೈಚಾರಿಕ ಗ್ರಹಿಕೆಯನ್ನು ಬೆಳೆಸಬೇಕು ಎಂಬ ಉತ್ಕಟ ಬಯಕೆಯೊಂದಿಗೆ ಜನ ಚಿಂತನಾ ಕೇಂದ್ರದ ಕೇಂದ್ರ ತಂಡದ ಭಾಗವಾಗಿ ಅನೇಕ ಜವಬ್ದಾರಿಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡವರು, ಮಾತ್ರವಲ್ಲದೆ ಕರ್ನಾಟಕದ ಸಮಸ್ತ ಚಳವಳಿಗಳೂ ತನ್ನವೆಂದು ತೊಡಗಿಸಿಕೊಂಡವರು…. ಇಂತಹ ದಿಟ್ಟ ಸಂಗಾತಿಯ ಅಗಲಿಕೆ ಸಂಘಟನೆಗೆ ಮತ್ತು ಹೋರಾಟದ ವಲಯಕ್ಕೆ ಅಘಾತ ನೀಡಿದೆ” ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

“ಸಾಮಾಜಿಕ ಮತ್ತು ಚಳವಳಿಯ ಕಾರಣಗಳಷ್ಟೇ ಅಲ್ಲದೇ ಕೌಟುಂಬಿಕ ಕಾರಣಗಳಿಗೂ ಬಂದೊದಗುತ್ತಿದ್ದ ತ್ರಿಮೂರ್ತಿಯ ದಿಢೀರ್ ಅಗಲಿಕೆ ನಮ್ಮ ಮನೆಯವರಿಗೆಲ್ಲಾ ಆಘಾತದ ಮತ್ತು ನೋವಿನ ಸಂಗತಿಯೇ. ಹೆಚ್ಚು ಹೇಳಲು ತೋಚುತ್ತಲೂ ಇಲ್ಲ, ಕಷ್ಟವಾಗುತ್ತಲೂ ಇದೆ. ಆದರೆ ನಾವ್ಯಾರೂ ಯಾಕೆ ತ್ರಿಮೂರ್ತಿಗೆ ನೆನಪಿಗೆ ಬರಲೇ ಇಲ್ಲ. ನಮ್ಮ ಸಂಬಂಧಗಳ ಆಪ್ತತೆಯನ್ನು ಮತ್ತು ಆತ್ಮೀಯತೆಯನ್ನು ಅನುಮಾನಿಸುವಷ್ಟು ’ನಾನು’ ಅಪ್ರಮಾಣಿಕವಾಗಿ ಅವನಿಗೆ ಕಂಡೆನೇ ಎಂಬುದಂತೂ ಪದೇ ಪದೇ ಅನ್ನಿಸುತ್ತಿದೆ. ನಾನು ಇನ್ನೆಷ್ಟು ಮುಕ್ತವಾಗಿ ಕಾಣಿಸಿಕೊಳ್ಳಬೇಕಿತ್ತೋ?” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಲ್ಲರಿಗೂ ಆಪ್ತ ಸಮಾಲೋಚನೆಯ ಅಗತ್ಯವಿದೆ. ಅದನ್ನು ಕಡೆಗಣಿಸಬೇಡಿ. ಮನಸ್ಸು ಸೂಕ್ಷ್ಮ ಮತ್ತು ಭಾವುಕ. ಅದಕ್ಕೆ ಪದೇ ಪದೇ ಸಮಾಲೋಚನೆಯ ಮೂಲಕ ಅದರ ಬಲವನ್ನು ಹೆಚ್ಚಿಸಬೇಕಾಗುತ್ತದೆ.
ನೊಂದವರ ಮತ್ತು ಶೋಷಿತರ ಪರ ಹೋರಾಡುತ್ತಿದ್ದ, ಸಾಮಾಜಿಕ ನ್ಯಾಯವನ್ನೊದಗಿಸಲು ಹೆಣಗಾಡುತ್ತಾ ಅನ್ಯಾಯವಾಗಿ ಸಾವನ್ನು ತಂದುಕೊಂಡ ತ್ರಿಮೂರ್ತಿಗೆ ವಿದಾಯದ ವಂದನೆ ಸಲ್ಲಿಸಲು ನನ್ನಿಂದಂತೂ ಆಗುವುದಿಲ್ಲ. ಒಂದು ಹೋರಾಟದ ಜೀವದ ಕತೆ ಹೀಗೆ ಮುಗಿಯಕೂಡದಿತ್ತು ಎಂದು ಯೋಗೇಶ್ ಮಾಸ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸುಮಾರು ವರ್ಷಗಳಿಂದ ಜನ ಚಳವಳಿಯಲ್ಲಿ ತೊಡಗಿಸಿಕೊಂಡ ಕರ್ನಾಟಕ ಜನಶಕ್ತಿಯ ಹೋರಾಟದ ಒಡನಾಡಿ, ಗೆಳೆಯ ತ್ರಿಮೂರ್ತಿ ಅವರು ಅಕಾಲಿಕವಾಗಿ ನಮ್ಮನ್ನಗಲಿರುವುದು ಅತೀವ ನೋವು ತಂದಿದೆ. ಜನಪರ ಕಾಳಜಿಯೊಂದಿಗೆ ಹಲವಾರು ಚಳವಳಿಗಳಲ್ಲಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಹಲವರ ಮನಸ್ಸಲ್ಲಿ ಮನೆಮಾಡಿದ್ದರು. ಸೂಕ್ಷ್ಮ-ಸೌಜನ್ಯದ, ಸಹೃದಯಿ ಗೆಳೆಯರೊಬ್ಬರ ಅಗಲಿಕೆ ನಂಬಲಸಾಧ್ಯವಾಗಿದೆ. 2014ರ ಸಂದರ್ಭದಲ್ಲಿ ತಿಂಥಿಣಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸಂದರ್ಭದಲ್ಲಿನ ಸ್ಮರಣೀಯ ಕ್ಷಣಗಳನ್ನು ಇಂದಿಗೂ ಮರೆಯಲಾಗದು. ಗೆಳೆಯ ನಮ್ಮೊಂದಿಗೆ ಭೌತಿಕವಾಗಿ ಇಲ್ಲದಿದ್ದರೂ, ಮಾನಸಿಕವಾಗಿ ಜೊತೆಗಿರುತ್ತಾರೆ. ಬದ್ಧತೆ, ಸಮರ್ಪಣಾ ಮನೋಭಾವ, ಜನಪರ ಕಾಳಜಿಯ ಮೂಲಕ ನಮ್ಮಲ್ಲಿ ತ್ರಿಮೂರ್ತಿಯವರು ಎಚ್ಚರ ಪ್ರಜ್ಞೆಯಾಗಿರುತ್ತಾರೆ” ಎಂದು ಹೋರಾಟಗಾರ ನಾಗರಾಜ ಪೂಜಾರ್ ಬರೆದಿದ್ದಾರೆ.

ತ್ರಿಮೂರ್ತಿಯವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ದೇವಗೆರೆಗೆ ತರುತ್ತಿದ್ದು ಸಂಜೆ 4 ಗಂಟೆ ಹೊತ್ತಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...