Homeಕರ್ನಾಟಕಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

ಜನಪರ ಚಳವಳಿಗಳ ಸಂಗಾತಿ ತ್ರಿಮೂರ್ತಿ ಇನ್ನಿಲ್ಲ

- Advertisement -
- Advertisement -

ದಶಕಗಳ ಕಾಲ ಸಾಮಾಜಿಕ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಜನಪರ ಚಳವಳಿಗಳ ಸಂಗಾತಿ, ಯುವ ಹೋರಾಟಗಾರ ತ್ರಿಮೂರ್ತಿ ಮಂಡ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಶಕ್ತಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ, ಜನಚಿಂತನಾ ಕೇಂದ್ರ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಅವರು, ಇತ್ತೀಚಿಗಿನ ದಲಿತರ ಸಾಂಸ್ಕೃತಿಕ ಪ್ರತಿರೋಧ, ಒಳಮೀಸಲಾತಿ ಹೋರಾಟದಲ್ಲಿಯೂ ಭಾಗಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹೋರಾಟದ ಪ್ರಚಾರದ ಕೆಲಸದಲ್ಲಿ ನಿರತರಾಗಿದ್ದರು.

ಮೂಲತಃ ಕುಂಬಳಗೋಡು ಬಳಿಯ ದೇವಗೆರೆಯವರಾದ ತ್ರಿಮೂರ್ತಿಯವರು 2010-11 ರಲ್ಲಿ ಚಳವಳಿಗೆ ತೆರೆದುಕೊಂಡಿದ್ದರು. ಆನಂತರ ಭೂಮಿ- ವಸತಿ ಹೋರಾಟ, ಕೋಮು ಸೌಹಾರ್ದ ಚಳವಳಿ, ದಲಿತ ಚಳವಳಿ ಮತ್ತು ಮಹಿಳಾ ಚಳವಳಿಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಂಡಿದ್ದರು. ಯಾವುದೇ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದರು, ಪರಿಶ್ರಮ ಹಾಕಿ ಕೆಲಸ ಮಾಡುತ್ತಿದ್ದರು ಎಂಬ ಹೆಗ್ಗಳಿಕೆ ಅವದ್ದಾಗಿತ್ತು.

ವಯಕ್ತಿಕ ಕಾರಣಗಳಿಂದ ಬೇಸತ್ತು ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜನಪರ ಚಳವಳಿಗಳ ಪರವಾಗಿ ತುಡಿಯುತ್ತಿದ್ದ ಅವರ ಅಕಾಲಿಕ ನಿಧನಕ್ಕೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಪರ ಚಳವಳಿಗಳ ಸಂಗಾತಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಹೋರಾಟದ ಸ್ಥಳದಲ್ಲಿ ಇಂದು ತ್ರಿಮೂರ್ತಿ ನೆನಪಿನ ಶ್ರದ್ಧಾಂಜಲಿ ಸಭೆ ನಡೆಸಿದೆ.

“ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಹೋರಾಟ ಹುರಿಗೊಳ್ಳುತ್ತಿದ್ದಾಗ ಬೆಳಂಬೆಳಗ್ಗೆ ಶ್ರಮಿಕರ ವಸತಿ ಮತ್ತು ಕೆಲಸದ ಪ್ರದೇಶಗಳಲ್ಲಿ ಅಲೆದೆಲೆದು ಸಂಘಟನೆ ಬಲಪಡಿಸಲು ಶ್ರಮಿಸಿದವರು. ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಚಟುವಟಿಕೆಗಳು ಸಕ್ರಿಯವಾಗಿದ್ದಾಗ ಅದರ ದಕ್ಷ ಸಂಘಟಕರಾಗಿ ದುಡಿದವರು. ಮಂಗಳೂರಿನ ಸಹಬಾಳ್ವೆ ಸಾಗರ ಸಮಾವೇಶ ಸಂಘಟಿಸುವುದರಲ್ಲಿ ಮುಖ್ಯ ಜವಬ್ದಾರಿ ನಿರ್ವಹಿಸಿದವರು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಅಭಿಯಾನ ಶುರುವಾದಾಗ ಅದರ ಸೋಷಿಯಲ್ ಮೀಡಿಯಾ ಕೆಲಸವನ್ನು ಮೈಮೇಲೆ ಹೊತ್ತು ಮಾಡಿದವರು. ಪೆಡೆಸ್ಟ್ರಿಯನ್ ಪಿಚ್ಚರ್ಸಸ್ ನ ಕಾರ್ಯಚಟುವಟಿಕೆಗಳಲ್ಲಿ, ಲಗೋರಿ ಗುಂಪಿನ ಚಾಲನೆಯಲ್ಲಿ ಮನಸ್ಸಿಟ್ಟು ಕೆಲಸ ಮಾಡಿದವರು. ವೈಚಾರಿಕ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ವೈಚಾರಿಕ ಗ್ರಹಿಕೆಯನ್ನು ಬೆಳೆಸಬೇಕು ಎಂಬ ಉತ್ಕಟ ಬಯಕೆಯೊಂದಿಗೆ ಜನ ಚಿಂತನಾ ಕೇಂದ್ರದ ಕೇಂದ್ರ ತಂಡದ ಭಾಗವಾಗಿ ಅನೇಕ ಜವಬ್ದಾರಿಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡವರು, ಮಾತ್ರವಲ್ಲದೆ ಕರ್ನಾಟಕದ ಸಮಸ್ತ ಚಳವಳಿಗಳೂ ತನ್ನವೆಂದು ತೊಡಗಿಸಿಕೊಂಡವರು…. ಇಂತಹ ದಿಟ್ಟ ಸಂಗಾತಿಯ ಅಗಲಿಕೆ ಸಂಘಟನೆಗೆ ಮತ್ತು ಹೋರಾಟದ ವಲಯಕ್ಕೆ ಅಘಾತ ನೀಡಿದೆ” ಎಂದು ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

“ಸಾಮಾಜಿಕ ಮತ್ತು ಚಳವಳಿಯ ಕಾರಣಗಳಷ್ಟೇ ಅಲ್ಲದೇ ಕೌಟುಂಬಿಕ ಕಾರಣಗಳಿಗೂ ಬಂದೊದಗುತ್ತಿದ್ದ ತ್ರಿಮೂರ್ತಿಯ ದಿಢೀರ್ ಅಗಲಿಕೆ ನಮ್ಮ ಮನೆಯವರಿಗೆಲ್ಲಾ ಆಘಾತದ ಮತ್ತು ನೋವಿನ ಸಂಗತಿಯೇ. ಹೆಚ್ಚು ಹೇಳಲು ತೋಚುತ್ತಲೂ ಇಲ್ಲ, ಕಷ್ಟವಾಗುತ್ತಲೂ ಇದೆ. ಆದರೆ ನಾವ್ಯಾರೂ ಯಾಕೆ ತ್ರಿಮೂರ್ತಿಗೆ ನೆನಪಿಗೆ ಬರಲೇ ಇಲ್ಲ. ನಮ್ಮ ಸಂಬಂಧಗಳ ಆಪ್ತತೆಯನ್ನು ಮತ್ತು ಆತ್ಮೀಯತೆಯನ್ನು ಅನುಮಾನಿಸುವಷ್ಟು ’ನಾನು’ ಅಪ್ರಮಾಣಿಕವಾಗಿ ಅವನಿಗೆ ಕಂಡೆನೇ ಎಂಬುದಂತೂ ಪದೇ ಪದೇ ಅನ್ನಿಸುತ್ತಿದೆ. ನಾನು ಇನ್ನೆಷ್ಟು ಮುಕ್ತವಾಗಿ ಕಾಣಿಸಿಕೊಳ್ಳಬೇಕಿತ್ತೋ?” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಎಲ್ಲರಿಗೂ ಆಪ್ತ ಸಮಾಲೋಚನೆಯ ಅಗತ್ಯವಿದೆ. ಅದನ್ನು ಕಡೆಗಣಿಸಬೇಡಿ. ಮನಸ್ಸು ಸೂಕ್ಷ್ಮ ಮತ್ತು ಭಾವುಕ. ಅದಕ್ಕೆ ಪದೇ ಪದೇ ಸಮಾಲೋಚನೆಯ ಮೂಲಕ ಅದರ ಬಲವನ್ನು ಹೆಚ್ಚಿಸಬೇಕಾಗುತ್ತದೆ.
ನೊಂದವರ ಮತ್ತು ಶೋಷಿತರ ಪರ ಹೋರಾಡುತ್ತಿದ್ದ, ಸಾಮಾಜಿಕ ನ್ಯಾಯವನ್ನೊದಗಿಸಲು ಹೆಣಗಾಡುತ್ತಾ ಅನ್ಯಾಯವಾಗಿ ಸಾವನ್ನು ತಂದುಕೊಂಡ ತ್ರಿಮೂರ್ತಿಗೆ ವಿದಾಯದ ವಂದನೆ ಸಲ್ಲಿಸಲು ನನ್ನಿಂದಂತೂ ಆಗುವುದಿಲ್ಲ. ಒಂದು ಹೋರಾಟದ ಜೀವದ ಕತೆ ಹೀಗೆ ಮುಗಿಯಕೂಡದಿತ್ತು ಎಂದು ಯೋಗೇಶ್ ಮಾಸ್ಟರ್ ಬೇಸರ ವ್ಯಕ್ತಪಡಿಸಿದ್ದಾರೆ.

“ಸುಮಾರು ವರ್ಷಗಳಿಂದ ಜನ ಚಳವಳಿಯಲ್ಲಿ ತೊಡಗಿಸಿಕೊಂಡ ಕರ್ನಾಟಕ ಜನಶಕ್ತಿಯ ಹೋರಾಟದ ಒಡನಾಡಿ, ಗೆಳೆಯ ತ್ರಿಮೂರ್ತಿ ಅವರು ಅಕಾಲಿಕವಾಗಿ ನಮ್ಮನ್ನಗಲಿರುವುದು ಅತೀವ ನೋವು ತಂದಿದೆ. ಜನಪರ ಕಾಳಜಿಯೊಂದಿಗೆ ಹಲವಾರು ಚಳವಳಿಗಳಲ್ಲಿ ಬದ್ಧತೆಯಿಂದ ಕೆಲಸ ಮಾಡುವ ಮೂಲಕ ಹಲವರ ಮನಸ್ಸಲ್ಲಿ ಮನೆಮಾಡಿದ್ದರು. ಸೂಕ್ಷ್ಮ-ಸೌಜನ್ಯದ, ಸಹೃದಯಿ ಗೆಳೆಯರೊಬ್ಬರ ಅಗಲಿಕೆ ನಂಬಲಸಾಧ್ಯವಾಗಿದೆ. 2014ರ ಸಂದರ್ಭದಲ್ಲಿ ತಿಂಥಿಣಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನದಲ್ಲಿ ಒಟ್ಟಿಗೆ ಕೆಲಸ ಮಾಡಿದ ಸಂದರ್ಭದಲ್ಲಿನ ಸ್ಮರಣೀಯ ಕ್ಷಣಗಳನ್ನು ಇಂದಿಗೂ ಮರೆಯಲಾಗದು. ಗೆಳೆಯ ನಮ್ಮೊಂದಿಗೆ ಭೌತಿಕವಾಗಿ ಇಲ್ಲದಿದ್ದರೂ, ಮಾನಸಿಕವಾಗಿ ಜೊತೆಗಿರುತ್ತಾರೆ. ಬದ್ಧತೆ, ಸಮರ್ಪಣಾ ಮನೋಭಾವ, ಜನಪರ ಕಾಳಜಿಯ ಮೂಲಕ ನಮ್ಮಲ್ಲಿ ತ್ರಿಮೂರ್ತಿಯವರು ಎಚ್ಚರ ಪ್ರಜ್ಞೆಯಾಗಿರುತ್ತಾರೆ” ಎಂದು ಹೋರಾಟಗಾರ ನಾಗರಾಜ ಪೂಜಾರ್ ಬರೆದಿದ್ದಾರೆ.

ತ್ರಿಮೂರ್ತಿಯವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ದೇವಗೆರೆಗೆ ತರುತ್ತಿದ್ದು ಸಂಜೆ 4 ಗಂಟೆ ಹೊತ್ತಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...