Homeಕರ್ನಾಟಕಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು.

ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ದ್ವೇಷ ಭಾಷಣ ವಿಧೇಯ ಅಂಗೀಕಾರ

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಕೂಡ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯಿತು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಈ ವಿಧೇಯಕವು ವ್ಯಕ್ತಿಗಳ, ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದು ತಿಳಿಸಿದರು.

ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ಮುದ್ರಿತ ಪುಸ್ತಕಗಳಿಗೂ ಅನ್ವಯ

ವಿಧೇಯಕದ ಕುರಿತು ಚರ್ಚಿಸುವಾಗ, ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಪರಮೇಶ್ವರ್, “ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೆ, ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ ಎಂದು ತಿಳಿಸಿದರು.

ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

ಪ್ರತಿಪಕ್ಷ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು ತೀವ್ರ ವಿರೋಧ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...