Homeಕರ್ನಾಟಕದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ.

- Advertisement -
- Advertisement -

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿದೆ.

ಹಲ್ಲೆರೆ ಗ್ರಾಮದಲ್ಲಿ ಮಲ್ಲಿಕಾರ್ಜುನ ಶೆಟ್ಟಿ ಎಂಬುವವರು ಬಹಳ ವರ್ಷಗಳಿಂದ ಕ್ಷೌರಿಕ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಗ್ರಾಮದ ಎಲ್ಲರಿಗೂ ಕಟಿಂಗ್ ಮತ್ತು ಸೇವಿಂಗ್ ಮಾಡುವುದು ಅವರ ಕಾಯಕ. ಆದರೆ ಕೆಲದಿನಗಳ ಹಿಂದೆ ನಾಯಕ ಸಮುದಾಯಕ್ಕೆ ಸೇರಿದ ಕೆಲವರು ಗ್ರಾಮದ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮತ್ತು ಸೇವಿಂಗ್ ಮಾಡಬಾರದು ಎಂದು ಆದೇಶಿಸಿದ್ದರು. ಅಲ್ಲದೆ ಅದುವರೆಗೂ ಮಾಡಿದ್ದಕ್ಕೆ ಎರಡು ಬಾರಿ 5000 ರೂ ದಂಡ ಕಟ್ಟಿಸಿಕೊಂಡಿದ್ದಾರೆ.

ಆದರೆ ಆ ಸಮಯದಲ್ಲಿ ತಾಲ್ಲೂಕು ಕಚೇರಿಯ ಕೆಲ ಅಧಿಕಾರಿಗಳು ಎಲ್ಲರಿಗೂ ಕಟಿಂಗ್ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಒತ್ತಡ ಹಾಕಿದ್ದರು. ಅದರಂತೆ ನಾನು ಎಲ್ಲರಿಗೂ ಕಟಿಂಗ್ ಮಾಡುತ್ತಿದ್ದೆ. ಒಂದು ವೇಳೆ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮಾಡುವುದೇ ಆದರೆ 200-300ರೂ ಚಾರ್ಜ್ ಮಾಡಬೇಕೆಂದು ನಾಯಕ ಸಮುದಾಯದವರು ಧಮಕಿ ಹಾಕಿದ್ದಾರೆ. ಆದರೆ ಅದಕ್ಕೆ ಮಲ್ಲಿಕಾರ್ಜುನ ಶೆಟ್ಟಿಯವರು ಅದಕ್ಕೆ ಒಪ್ಪದೆ ಇಲ್ಲ ನಾನು 60-80 ರೂ ಮಾತ್ರ ತೆಗೆದುಕೊಳ್ಳುವುದು ಎಂದಿದ್ದಾರೆ. ಇದರಿಂದ ಕುಪಿತರಾದ ನಾಯಕ ಸಮುದಾಯದ ಚನ್ನನಾಯಕ ಎಂಬುವವರು 50000 ದಂಡ ಕಟ್ಟುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ. ಈ ನಡುವೆ ನಾಯಕ ಸಮುದಾಯದ ಕೆಲವರು ಮಲ್ಲಿಕಾರ್ಜುನ ಶೆಟ್ಟಿಯ ಮಗನನ್ನು ಪುಸಲಾಯಿಸಿ ಆತನಿಗೆ ಮದ್ಯ ಕುಡಿಸಿದ್ದು, ಮದ್ಯದ ಅಮಲಿನಲ್ಲಿ ಅವನನ್ನು ನಗ್ನಗೊಳಿಸಿ ಅದನ್ನು ವಿಡಿಯೋ ಮಾಡಿಕೊಂಡು ತಮ್ಮ ವಿರುದ್ಧ ದೂರು ನೀಡಿದರೆ ಈ ವಿಡಿಯೋವನ್ನು ಎಲ್ಲಡೆ ಹಂಚಲಾಗುವುದು ಎಂದು ಬ್ಲಾಕ್‌ಮೇಲ್ ಮಾಡಿರುವುದಾಗಿಯೂ ಮಲ್ಲಿಕಾರ್ಜುನ ಶೆಟ್ಟಿ ಆರೋಪಿಸಿದ್ದಾರೆ.

ಸದ್ಯ ಕೆಲ ದಲಿತ ಮುಖಂಡರು ಇದನ್ನು ಗಂಭೀರವಾಗಿ ಪರಿಗಣಿಸಿ ನಂಜನಗೂಡು ತಹಶೀಲ್ದಾರ್ ಮಹೇಶ್ ಕುಮಾರ್‌ರವ‌ರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ತಹಶೀಲ್ದಾರ್ ಖುದ್ದಾಗಿ ಗ್ರಾಮಕ್ಕೆ ತೆರಳುವುದಾಗಿ, ಒಂದು ವೇಳೆ ಆರೋಪ ಸಾಬೀತಾದರೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವುದಾಗಿ ತಿಳಿಸಿದ್ದಾರೆ. ಪ್ರಕರಣ ಎಲ್ಲಿಗೆ ಸಾಗುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...