Homeಕರ್ನಾಟಕದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ.

- Advertisement -
- Advertisement -

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿದೆ.

ಹಲ್ಲೆರೆ ಗ್ರಾಮದಲ್ಲಿ ಮಲ್ಲಿಕಾರ್ಜುನ ಶೆಟ್ಟಿ ಎಂಬುವವರು ಬಹಳ ವರ್ಷಗಳಿಂದ ಕ್ಷೌರಿಕ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಗ್ರಾಮದ ಎಲ್ಲರಿಗೂ ಕಟಿಂಗ್ ಮತ್ತು ಸೇವಿಂಗ್ ಮಾಡುವುದು ಅವರ ಕಾಯಕ. ಆದರೆ ಕೆಲದಿನಗಳ ಹಿಂದೆ ನಾಯಕ ಸಮುದಾಯಕ್ಕೆ ಸೇರಿದ ಕೆಲವರು ಗ್ರಾಮದ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮತ್ತು ಸೇವಿಂಗ್ ಮಾಡಬಾರದು ಎಂದು ಆದೇಶಿಸಿದ್ದರು. ಅಲ್ಲದೆ ಅದುವರೆಗೂ ಮಾಡಿದ್ದಕ್ಕೆ ಎರಡು ಬಾರಿ 5000 ರೂ ದಂಡ ಕಟ್ಟಿಸಿಕೊಂಡಿದ್ದಾರೆ.

ಆದರೆ ಆ ಸಮಯದಲ್ಲಿ ತಾಲ್ಲೂಕು ಕಚೇರಿಯ ಕೆಲ ಅಧಿಕಾರಿಗಳು ಎಲ್ಲರಿಗೂ ಕಟಿಂಗ್ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಒತ್ತಡ ಹಾಕಿದ್ದರು. ಅದರಂತೆ ನಾನು ಎಲ್ಲರಿಗೂ ಕಟಿಂಗ್ ಮಾಡುತ್ತಿದ್ದೆ. ಒಂದು ವೇಳೆ ಪರಿಶಿಷ್ಟ ಜಾತಿಯವರಿಗೆ ಕಟಿಂಗ್ ಮಾಡುವುದೇ ಆದರೆ 200-300ರೂ ಚಾರ್ಜ್ ಮಾಡಬೇಕೆಂದು ನಾಯಕ ಸಮುದಾಯದವರು ಧಮಕಿ ಹಾಕಿದ್ದಾರೆ. ಆದರೆ ಅದಕ್ಕೆ ಮಲ್ಲಿಕಾರ್ಜುನ ಶೆಟ್ಟಿಯವರು ಅದಕ್ಕೆ ಒಪ್ಪದೆ ಇಲ್ಲ ನಾನು 60-80 ರೂ ಮಾತ್ರ ತೆಗೆದುಕೊಳ್ಳುವುದು ಎಂದಿದ್ದಾರೆ. ಇದರಿಂದ ಕುಪಿತರಾದ ನಾಯಕ ಸಮುದಾಯದ ಚನ್ನನಾಯಕ ಎಂಬುವವರು 50000 ದಂಡ ಕಟ್ಟುವಂತೆ ಆದೇಶಿಸಿದ್ದಾರೆ.

ಈ ಕುರಿತು ಮಲ್ಲಿಕಾರ್ಜುನ ಶೆಟ್ಟಿಯವರು ಪೊಲೀಸ್ ಠಾಣೆ, ತಹಶೀಲ್ದಾರ್‌ರವರ ಬಳಿ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿದರೂ ಸಹ ಅವರ್ಯಾರು ಸ್ಪಂದಿಸಿಲ್ಲ ಎಂಬುದು ಅವರ ಅಳಲಾಗಿದೆ. ಈ ನಡುವೆ ನಾಯಕ ಸಮುದಾಯದ ಕೆಲವರು ಮಲ್ಲಿಕಾರ್ಜುನ ಶೆಟ್ಟಿಯ ಮಗನನ್ನು ಪುಸಲಾಯಿಸಿ ಆತನಿಗೆ ಮದ್ಯ ಕುಡಿಸಿದ್ದು, ಮದ್ಯದ ಅಮಲಿನಲ್ಲಿ ಅವನನ್ನು ನಗ್ನಗೊಳಿಸಿ ಅದನ್ನು ವಿಡಿಯೋ ಮಾಡಿಕೊಂಡು ತಮ್ಮ ವಿರುದ್ಧ ದೂರು ನೀಡಿದರೆ ಈ ವಿಡಿಯೋವನ್ನು ಎಲ್ಲಡೆ ಹಂಚಲಾಗುವುದು ಎಂದು ಬ್ಲಾಕ್‌ಮೇಲ್ ಮಾಡಿರುವುದಾಗಿಯೂ ಮಲ್ಲಿಕಾರ್ಜುನ ಶೆಟ್ಟಿ ಆರೋಪಿಸಿದ್ದಾರೆ.

ಸದ್ಯ ಕೆಲ ದಲಿತ ಮುಖಂಡರು ಇದನ್ನು ಗಂಭೀರವಾಗಿ ಪರಿಗಣಿಸಿ ನಂಜನಗೂಡು ತಹಶೀಲ್ದಾರ್ ಮಹೇಶ್ ಕುಮಾರ್‌ರವ‌ರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ತಹಶೀಲ್ದಾರ್ ಖುದ್ದಾಗಿ ಗ್ರಾಮಕ್ಕೆ ತೆರಳುವುದಾಗಿ, ಒಂದು ವೇಳೆ ಆರೋಪ ಸಾಬೀತಾದರೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವುದಾಗಿ ತಿಳಿಸಿದ್ದಾರೆ. ಪ್ರಕರಣ ಎಲ್ಲಿಗೆ ಸಾಗುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...