Homeಮುಖಪುಟಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

ಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

- Advertisement -
- Advertisement -

ಕೋವಿಡ್ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಈ ಕ್ರಮದಿಂದ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಆಗ್ರಹಿಸಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಬಿಎಸ್‌ವೈ ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.

ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಎಚ್‌ಡಿಕೆ ಹೇಳಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ನಾನು ಒತ್ತಾಯಿಸುತ್ತೇನೆ‌‌ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...