Homeಮುಖಪುಟಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

ಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

- Advertisement -
- Advertisement -

ಕೋವಿಡ್ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಈ ಕ್ರಮದಿಂದ ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ, ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಆಗ್ರಹಿಸಿದ್ದಾರೆ.

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಬಿಎಸ್‌ವೈ ಗಮನ ಹರಿಸಲಿ ಎಂದು ಆಗ್ರಹಿಸಿದ್ದಾರೆ.

ಚಿಕಿತ್ಸೆ ನಿರಾಕರಿಸುವುದು ಯಾವುದೇ ಆಸ್ಪತ್ರೆಯ ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಎಚ್‌ಡಿಕೆ ಹೇಳಿದ್ದಾರೆ.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ನಾನು ಒತ್ತಾಯಿಸುತ್ತೇನೆ‌‌ ಎಂದಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...