Homeಕರ್ನಾಟಕ'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..'; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಹಕ್ಕಿಗಾಗಿ ಹೋರಾಟದ ಜೊತೆಗೆ ಕಾನೂನು ಸಂಘರ್ಷವನ್ನೂ ಮುಂದುವರೆಸುತ್ತೇವೆ'

- Advertisement -
- Advertisement -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ಶೇ.1 ಒಳಮೀಸಲಾತಿಯಂತೂ ಇಲ್ಲ, ಮುಖ್ಯಮಂತ್ರಿ ಈ ಹಿಂದೆ ಭರವಸೆ ಕೊಟ್ಟಂತೆ ಪ್ರತ್ಯೇಕ ನಿಗಮವೂ ಇಲ್ಲ, ಸಬಲೀಕರಣದ ವಿಶೇಷ ಪ್ಯಾಕೇಜೂ ಇಲ್ಲ. ಆಯವ್ಯಯದಲ್ಲಿ 4 ವಸತಿ ಶಾಲೆಗಳನ್ನು ಬಿಟ್ಟರೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಯಾವ ಬೇಡಿಕೆಗಳನ್ನೂ ಈಡೇರಿಸಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಬಲಾಢ್ಯ ಪರಿಶಿಷ್ಟ ಜಾತಿಗಳ ಲಾಬಿಗೆ ಮಣಿದು 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯೋಚಿತ ಪಾಲನ್ನು ಕರ್ನಾಟಕ ಸರ್ಕಾರ ನೀಡಲಿಲ್ಲ. ಪ್ರತಿಭಟನಾ ಸಮಾವೇಶ ನಡೆಸಿದರೂ ನಮ್ಮ ಅಹವಾಲನ್ನು ಸ್ವೀಕರಿಸಲು ಸರಕಾರದ ಯಾವ ಪ್ರತಿನಿಧಿಯೂ ನಮ್ಮ ಬಳಿ ಸುಳಿಯಲ್ಲಿ. ಆಗ ನಾವು ಅಕ್ಟೋಬರ್ 2ರಂದು ದೆಹಲಿಗೆ ತೆರಳಿ ಜಂತರ್ ಮಂತರ್‌ನಲ್ಲಿ ಮತ್ತು ಎಐಸಿಸಿ ಕಛೇರಿಯ ಬಳಿ ಧರಣಿ ನಡೆಸಿದೆವು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ‘ಅಲೆಮಾರಿಗಳಿಗೆ ಶೇ.1 ರಷ್ಟು ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ, ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ’ ಎಂದು ಭರವಸೆ ನೀಡಿ ದೆಹಲಿಯಿಂದ ನಮ್ಮನ್ನು ವಾಪಸ್ ಕರೆಯಿಸಿಕೊಂಡಿದ್ದರು. ನಂತರ ಅಕ್ಟೋಬರ್ 31ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಮಾನ್ಯ ಮುಖ್ಯಮಂತ್ರಿಗಳು ಸಭೆ ಕರೆದು ಶೇ.1 ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡುವ ಭರವಸೆಯನ್ನು ಸಭೆಯಲ್ಲಿ ನೀಡಿದ್ದರು. ಫೆ.5ರಂದು ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳನ್ನು ಕರೆದು 2026-27ನೇ ಸಾಲಿನ ಅಯವ್ಯಯದಲ್ಲಿ ಅಲೆಮಾರಿ ಸಮುದಾಯಗಳಿಗೆ ನೀಡಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಕುರಿತು ಚರ್ಚಿಸಿದರು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್, ರಾಕೇಶ್ ಕುಮಾರ್, ವೆಂಕಟಯ್ಯ ಮತ್ತು ಇತರೆ ಅಧಿಕಾರಿಗಳು ಇದ್ದರು” ಎಂದು ಹೇಳಿದ್ದಾರೆ.

ಅಲೆಮಾರಿ ಒಕ್ಕೂಟದ ಬೇಡಿಕೆಗಳು:

  1. ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಅನುಸಾರ 49 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ `ಎ’ನಲ್ಲಿ ಇರಿಸಿ ಶೇ 1%ರಷ್ಟು ಮೀಸಲಾತಿಯನ್ನು ನೀಡಬೇಕು.
  2. 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡಬೇಕು
  3. ಕರ್ನಾಟಕ ಸರಕಾರವು ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ 500 ಕೋಟಿಗಳನ್ನು ಮೀಸಲಾಗಿಟ್ಟು ಅಭಿವೃದ್ಧಿಯ ವಿಶೇಷ ಪ್ಯಾಕೇಜನ್ನು ರೂಪಿಸಬೇಕು.
  4. ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿಗಳಿಗೆ ತನ್ನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆಯ ಒಟ್ಟು ಮೊತ್ತದಲ್ಲಿ ಶೇ.5 ರಷ್ಟು ಹಣವನ್ನು 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಮೀಸಲಾಗಿಡಬೇಕು.
  5. ವಸತಿ: ಪ್ರತಿ ಜಿಲ್ಲೆಗೆ 500 ಮನೆಗಳಂತೆ 31 ಜಿಲ್ಲೆಗಳಿಗೆ 15,500 ಮನೆಗಳನ್ನು ನಿರ್ಮಾಣ ಮಾಡಬೇಕು. ಇದನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿ ಒಟ್ಟು 46,500 ಮನೆಗಳನ್ನು ಅಲೆಮಾರಿ ಸಮುದಾಯಗಳಿಗೆ ನಿರ್ಮಿಸಬೇಕು.
  6. ಭೂಒಡೆತನ ಯೋಜನೆ: ಅಲೆಮಾರಿ ಸಮುದಾಯಗಳಿಗೆ ಸರಕಾರವು ಕೃಷಿಭೂಮಿಯನ್ನು ನೀಡಿ ಅವರಿಗೆ ನಿರ್ದಿಷ್ಟ ಆರ್ಥಿಕ ಮೂಲವನ್ನು ಕಲ್ಪಿಸಬೇಕು. ಭೂಒಡೆತನ ಯೋಜನೆಯಲ್ಲಿ ಪ್ರತಿ ಜಿಲ್ಲೆಗೆ 100 ಎಕರೆ ಕೃಷಿ ಜಮೀನನ್ನು ಅಲೆಮಾರಿ ಸಮುದಾಯಗಳಿಗೆ ಮೀಸಲಾಗಿಡಬೇಕು.
  7. ಶಿಕ್ಷಣ : ಅಲೆಮಾರಿ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನವೋದಯ ವಿದ್ಯಾಲಯ’ ಮತ್ತುಮೊರಾರ್ಜಿ ವಸತಿ ಶಾಲೆ’ಗಳ ಮಾದರಿಯಲ್ಲಿ ಎರಡು ಜಿಲ್ಲೆಗ ಒಂದರAತೆ ಒಟ್ಟು 15 ವಸತಿ ಶಾಲೆಗಳನ್ನು ನಿರ್ಮಾಣ ಮಾಡಬೇಕು. ಸರಕಾರದ ವಸತಿ ನಿಲಯಗಳಲ್ಲಿ (ಹಾಸ್ಟೆಲ್) ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ 15%ರಷ್ಟು ಸ್ಥಾನಗಳನ್ನು ಉಚಿತವಾಗಿ ಕಲ್ಪಿಸಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂಶೋಧನೆಯನ್ನು (ಪಿಎಚ್, ಡಿ ಅಥವಾ ತತ್ಸಮಾನ ಸಂಶೋಧನೆಗಾಗಿ) ಕೈಗೊಳ್ಳುವ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ಪ್ರತಿ ತಿಂಗಳು ರೂ 25,000/-ಗಳ ಶಿಷ್ಯವೇತನವನ್ನು ನೀಡಬೇಕು. ಇದಲ್ಲದೆ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ತೆರಳುವ ಅಲೆಮಾರಿ ಸಮುದಾಯಗಳ ಯುವಕರಿಗೆ ಸೂಕ್ತ ಹಣಕಾಸಿನ ನೆರವನ್ನು ನೀಡಬೇಕು.
  8. ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳಿಗೆ ಸೇರಿದ ಹಲವು ಸಮುದಾಯಗಳ ಪಾರಂಪರಿಕ ಕೌಶಲ್ಯ ಮತ್ತು ಕಲೆಗಳನ್ನು ಆಧುನಿಕಗೊಳಿಸಲು ಈ ಸಮುದಾಯಗಳಿಗೆ ತರಬೇತಿ ನೀಡಬೇಕು. ಪ್ರತಿ ವ್ಯಕ್ತಿಗೆ 10 ಲಕ್ಷಗಳ ರೂಪಾಯಿಗಳ ಸಾಲ ಸೌಲಭ್ಯವನ್ನು ನೀಡಬೇಕು. ಇದಲ್ಲದೆ, ಸ್ವಯಂಸಾರಥಿ ಯೋಜನೆಯಲ್ಲಿ ಸಾಲ ಸೌಲಭ್ಯವನ್ನು ನೀಡುವ ಅನುದಾನ ಹೆಚ್ಚಿಸಿ, ಜಿಲ್ಲೆಯೊಂದರಲ್ಲಿ ಅಲೆಮಾರಿ ಸಮುದಾಯಗಳಿಗೆ ಸೇರಿದ ಕನಿಷ್ಟ 100 ಜನರಿಗೆ ಸಾಲ ಸೌಲಭ್ಯಗಳು ಸಿಗುವಂತೆ ಮಾಡಬೇಕು.
  9. ಸಂಸ್ಕೃತಿ, ಕಲೆಗಳ ರಕ್ಷಣೆ: ಅಲೆಮಾರಿ ಸಮುದಾಯಗಳ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಸಲುವಾಗಿ ಅಲೆಮಾರಿ ಸಮುದಾಯಗಳ ಭಾಷೆ, ಕಲೆ ಮತ್ತು ಸಂಸ್ಕೃತಿ ಅಕಾಡೆಮಿ’ಯನ್ನು, ಅಲೆಮಾರಿ ಸಮುದಾಯಗಳ ಅಧ್ಯಯನಕ್ಕಾಗಿಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಸಂಶೋಧನಾ ಕೇಂದ್ರ’ವನ್ನು ಸ್ಥಾಪಿಸಬೇಕು.
  10. `ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಆಯೋಗ’ವನ್ನು ರಾಜ್ಯದಲ್ಲಿ ಸ್ಥಾಪಿಸಬೇಕು. ಅಲೆಮಾರಿ ಮತ್ತು ವಿಮುಕ್ತ ಸಮುದಾಗಳಿಗೆ ಸೇರಿದ ವ್ಯಕ್ತಿಗಳು ಈ ಆಯೋಗಕ್ಕೆ ಅಧ್ಯಕ್ಷ ಮತ್ತು ಪದಾಧಿಕಾರಿಗಳಾಗಬೇಕು.

    “ಈ ಮೇಲಿನ ಹತ್ತು ಬೇಡಿಕೆಗಳನ್ನು ನಾವು ಮಾನ್ಯ ಮುಖ್ಯಮಂತ್ರಿಗಳ ಮತ್ತು ಸಮಾಜ ಕಲ್ಯಾಣ ಸಚಿವರ ಬಜೆಟ್‌ಪೂರ್ವ ಸಭೆಯಲ್ಲಿ ಮಂಡಿಸಿದ್ದೆವು. ಈ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳು ಮಂಡಿಸಿದ ಅಯವ್ಯಯದಲ್ಲಿ ನಮ್ಮ ಯಾವ ಬೇಡಿಕೆಗಳನ್ನೂ ಈಡೇರಿಸದೆ ಅಲೆಮಾರಿಗಳಿಗೆ ಅನ್ಯಾಯವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

    “ನಮ್ಮ ಹಕ್ಕುಗಳಿಗಾಗಿನ ಹೋರಾಟವು ನಿಲ್ಲುವುದಿಲ್ಲ. ನಾವು ಸಂಖ್ಯೆಯಲ್ಲಿ ಕಡಿಮೆ ಇರಬಹುದು. ನಿಮ್ಮನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಬೇಕಾದ ಸಂಖ್ಯೆ ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ, ನೀವು ಮಾಡುತ್ತಿರುವ ಬಲಾಢ್ಯರ ಪರವಾದ ರಾಜಕಾರಣವನ್ನು ನಾವು ರಾಜ್ಯದ ಜನರ ಮುಂದೆ ಬಯಲುಗೊಳಿಸುವ ಶಕ್ತಿ ನಮಗಿದೆ. ಒಳಮೀಸಲಾತಿಯಲ್ಲಿ ಸರಿಯಾದ ಪಾಲನ್ನು ಪಡೆಯಲು ನಾವು ಬೀದಿ ಹೋರಾಟಗಳನ್ನು ಮುಂದುವರೆಸುತ್ತೇವೆ. ಹಾಗೆಯೇ ನ್ಯಾಯಾಲಯದಲ್ಲಿ ನಮ್ಮ ನ್ಯಾಯಬದ್ಧ ಹಕ್ಕಿಗಾಗಿ ಹೋರಡುತ್ತಲೇ ಇರುತ್ತೇವೆ. ಕರ್ನಾಟಕದಲ್ಲಿನ ನ್ಯಾಯಪ್ರಜ್ಞೆಯುಳ್ಳ ಜನ ನಮ್ಮ ಸಹಾಯಕ್ಕೆ ಬರುತ್ತಾರೆ ಎಂಬ ವಿಶ್ವಾಸದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ಹಾಗೇಯೇ ಎಲ್ಲಾ ಪಕ್ಷದಲ್ಲಿರುವ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಶಾಸಕರು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳ ಪರ ದನಿ ಎತ್ತಬೇಕೆಂದು ಕೋರುತ್ತೇವೆ” ಎಂದು ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...