Homeಕರ್ನಾಟಕ'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..'; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಹಕ್ಕಿಗಾಗಿ ಹೋರಾಟದ ಜೊತೆಗೆ ಕಾನೂನು ಸಂಘರ್ಷವನ್ನೂ ಮುಂದುವರೆಸುತ್ತೇವೆ'

- Advertisement -
- Advertisement -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ಶೇ.1 ಒಳಮೀಸಲಾತಿಯಂತೂ ಇಲ್ಲ, ಮುಖ್ಯಮಂತ್ರಿ ಈ ಹಿಂದೆ ಭರವಸೆ ಕೊಟ್ಟಂತೆ ಪ್ರತ್ಯೇಕ ನಿಗಮವೂ ಇಲ್ಲ, ಸಬಲೀಕರಣದ ವಿಶೇಷ ಪ್ಯಾಕೇಜೂ ಇಲ್ಲ. ಆಯವ್ಯಯದಲ್ಲಿ 4 ವಸತಿ ಶಾಲೆಗಳನ್ನು ಬಿಟ್ಟರೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಯಾವ ಬೇಡಿಕೆಗಳನ್ನೂ ಈಡೇರಿಸಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಬಲಾಢ್ಯ ಪರಿಶಿಷ್ಟ ಜಾತಿಗಳ ಲಾಬಿಗೆ ಮಣಿದು 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯೋಚಿತ ಪಾಲನ್ನು ಕರ್ನಾಟಕ ಸರ್ಕಾರ ನೀಡಲಿಲ್ಲ. ಪ್ರತಿಭಟನಾ ಸಮಾವೇಶ ನಡೆಸಿದರೂ ನಮ್ಮ ಅಹವಾಲನ್ನು ಸ್ವೀಕರಿಸಲು ಸರಕಾರದ ಯಾವ ಪ್ರತಿನಿಧಿಯೂ ನಮ್ಮ ಬಳಿ ಸುಳಿಯಲ್ಲಿ. ಆಗ ನಾವು ಅಕ್ಟೋಬರ್ 2ರಂದು ದೆಹಲಿಗೆ ತೆರಳಿ ಜಂತರ್ ಮಂತರ್‌ನಲ್ಲಿ ಮತ್ತು ಎಐಸಿಸಿ ಕಛೇರಿಯ ಬಳಿ ಧರಣಿ ನಡೆಸಿದೆವು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ‘ಅಲೆಮಾರಿಗಳಿಗೆ ಶೇ.1 ರಷ್ಟು ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ, ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ’ ಎಂದು ಭರವಸೆ ನೀಡಿ ದೆಹಲಿಯಿಂದ ನಮ್ಮನ್ನು ವಾಪಸ್ ಕರೆಯಿಸಿಕೊಂಡಿದ್ದರು. ನಂತರ ಅಕ್ಟೋಬರ್ 31ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಮಾನ್ಯ ಮುಖ್ಯಮಂತ್ರಿಗಳು ಸಭೆ ಕರೆದು ಶೇ.1 ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡುವ ಭರವಸೆಯನ್ನು ಸಭೆಯಲ್ಲಿ ನೀಡಿದ್ದರು. ಫೆ.5ರಂದು ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳನ್ನು ಕರೆದು 2026-27ನೇ ಸಾಲಿನ ಅಯವ್ಯಯದಲ್ಲಿ ಅಲೆಮಾರಿ ಸಮುದಾಯಗಳಿಗೆ ನೀಡಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಕುರಿತು ಚರ್ಚಿಸಿದರು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್, ರಾಕೇಶ್ ಕುಮಾರ್, ವೆಂಕಟಯ್ಯ ಮತ್ತು ಇತರೆ ಅಧಿಕಾರಿಗಳು ಇದ್ದರು” ಎಂದು ಹೇಳಿದ್ದಾರೆ.

ಅಲೆಮಾರಿ ಒಕ್ಕೂಟದ ಬೇಡಿಕೆಗಳು:

  1. ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಅನುಸಾರ 49 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ `ಎ’ನಲ್ಲಿ ಇರಿಸಿ ಶೇ 1%ರಷ್ಟು ಮೀಸಲಾತಿಯನ್ನು ನೀಡಬೇಕು.
  2. 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡಬೇಕು
  3. ಕರ್ನಾಟಕ ಸರಕಾರವು ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ 500 ಕೋಟಿಗಳನ್ನು ಮೀಸಲಾಗಿಟ್ಟು ಅಭಿವೃದ್ಧಿಯ ವಿಶೇಷ ಪ್ಯಾಕೇಜನ್ನು ರೂಪಿಸಬೇಕು.
  4. ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿಗಳಿಗೆ ತನ್ನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆಯ ಒಟ್ಟು ಮೊತ್ತದಲ್ಲಿ ಶೇ.5 ರಷ್ಟು ಹಣವನ್ನು 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಮೀಸಲಾಗಿಡಬೇಕು.
  5. ವಸತಿ: ಪ್ರತಿ ಜಿಲ್ಲೆಗೆ 500 ಮನೆಗಳಂತೆ 31 ಜಿಲ್ಲೆಗಳಿಗೆ 15,500 ಮನೆಗಳನ್ನು ನಿರ್ಮಾಣ ಮಾಡಬೇಕು. ಇದನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿ ಒಟ್ಟು 46,500 ಮನೆಗಳನ್ನು ಅಲೆಮಾರಿ ಸಮುದಾಯಗಳಿಗೆ ನಿರ್ಮಿಸಬೇಕು.
  6. ಭೂಒಡೆತನ ಯೋಜನೆ: ಅಲೆಮಾರಿ ಸಮುದಾಯಗಳಿಗೆ ಸರಕಾರವು ಕೃಷಿಭೂಮಿಯನ್ನು ನೀಡಿ ಅವರಿಗೆ ನಿರ್ದಿಷ್ಟ ಆರ್ಥಿಕ ಮೂಲವನ್ನು ಕಲ್ಪಿಸಬೇಕು. ಭೂಒಡೆತನ ಯೋಜನೆಯಲ್ಲಿ ಪ್ರತಿ ಜಿಲ್ಲೆಗೆ 100 ಎಕರೆ ಕೃಷಿ ಜಮೀನನ್ನು ಅಲೆಮಾರಿ ಸಮುದಾಯಗಳಿಗೆ ಮೀಸಲಾಗಿಡಬೇಕು.
  7. ಶಿಕ್ಷಣ : ಅಲೆಮಾರಿ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನವೋದಯ ವಿದ್ಯಾಲಯ’ ಮತ್ತುಮೊರಾರ್ಜಿ ವಸತಿ ಶಾಲೆ’ಗಳ ಮಾದರಿಯಲ್ಲಿ ಎರಡು ಜಿಲ್ಲೆಗ ಒಂದರAತೆ ಒಟ್ಟು 15 ವಸತಿ ಶಾಲೆಗಳನ್ನು ನಿರ್ಮಾಣ ಮಾಡಬೇಕು. ಸರಕಾರದ ವಸತಿ ನಿಲಯಗಳಲ್ಲಿ (ಹಾಸ್ಟೆಲ್) ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ 15%ರಷ್ಟು ಸ್ಥಾನಗಳನ್ನು ಉಚಿತವಾಗಿ ಕಲ್ಪಿಸಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂಶೋಧನೆಯನ್ನು (ಪಿಎಚ್, ಡಿ ಅಥವಾ ತತ್ಸಮಾನ ಸಂಶೋಧನೆಗಾಗಿ) ಕೈಗೊಳ್ಳುವ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ಪ್ರತಿ ತಿಂಗಳು ರೂ 25,000/-ಗಳ ಶಿಷ್ಯವೇತನವನ್ನು ನೀಡಬೇಕು. ಇದಲ್ಲದೆ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ತೆರಳುವ ಅಲೆಮಾರಿ ಸಮುದಾಯಗಳ ಯುವಕರಿಗೆ ಸೂಕ್ತ ಹಣಕಾಸಿನ ನೆರವನ್ನು ನೀಡಬೇಕು.
  8. ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳಿಗೆ ಸೇರಿದ ಹಲವು ಸಮುದಾಯಗಳ ಪಾರಂಪರಿಕ ಕೌಶಲ್ಯ ಮತ್ತು ಕಲೆಗಳನ್ನು ಆಧುನಿಕಗೊಳಿಸಲು ಈ ಸಮುದಾಯಗಳಿಗೆ ತರಬೇತಿ ನೀಡಬೇಕು. ಪ್ರತಿ ವ್ಯಕ್ತಿಗೆ 10 ಲಕ್ಷಗಳ ರೂಪಾಯಿಗಳ ಸಾಲ ಸೌಲಭ್ಯವನ್ನು ನೀಡಬೇಕು. ಇದಲ್ಲದೆ, ಸ್ವಯಂಸಾರಥಿ ಯೋಜನೆಯಲ್ಲಿ ಸಾಲ ಸೌಲಭ್ಯವನ್ನು ನೀಡುವ ಅನುದಾನ ಹೆಚ್ಚಿಸಿ, ಜಿಲ್ಲೆಯೊಂದರಲ್ಲಿ ಅಲೆಮಾರಿ ಸಮುದಾಯಗಳಿಗೆ ಸೇರಿದ ಕನಿಷ್ಟ 100 ಜನರಿಗೆ ಸಾಲ ಸೌಲಭ್ಯಗಳು ಸಿಗುವಂತೆ ಮಾಡಬೇಕು.
  9. ಸಂಸ್ಕೃತಿ, ಕಲೆಗಳ ರಕ್ಷಣೆ: ಅಲೆಮಾರಿ ಸಮುದಾಯಗಳ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಸಲುವಾಗಿ ಅಲೆಮಾರಿ ಸಮುದಾಯಗಳ ಭಾಷೆ, ಕಲೆ ಮತ್ತು ಸಂಸ್ಕೃತಿ ಅಕಾಡೆಮಿ’ಯನ್ನು, ಅಲೆಮಾರಿ ಸಮುದಾಯಗಳ ಅಧ್ಯಯನಕ್ಕಾಗಿಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಸಂಶೋಧನಾ ಕೇಂದ್ರ’ವನ್ನು ಸ್ಥಾಪಿಸಬೇಕು.
  10. `ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಆಯೋಗ’ವನ್ನು ರಾಜ್ಯದಲ್ಲಿ ಸ್ಥಾಪಿಸಬೇಕು. ಅಲೆಮಾರಿ ಮತ್ತು ವಿಮುಕ್ತ ಸಮುದಾಗಳಿಗೆ ಸೇರಿದ ವ್ಯಕ್ತಿಗಳು ಈ ಆಯೋಗಕ್ಕೆ ಅಧ್ಯಕ್ಷ ಮತ್ತು ಪದಾಧಿಕಾರಿಗಳಾಗಬೇಕು.

    “ಈ ಮೇಲಿನ ಹತ್ತು ಬೇಡಿಕೆಗಳನ್ನು ನಾವು ಮಾನ್ಯ ಮುಖ್ಯಮಂತ್ರಿಗಳ ಮತ್ತು ಸಮಾಜ ಕಲ್ಯಾಣ ಸಚಿವರ ಬಜೆಟ್‌ಪೂರ್ವ ಸಭೆಯಲ್ಲಿ ಮಂಡಿಸಿದ್ದೆವು. ಈ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳು ಮಂಡಿಸಿದ ಅಯವ್ಯಯದಲ್ಲಿ ನಮ್ಮ ಯಾವ ಬೇಡಿಕೆಗಳನ್ನೂ ಈಡೇರಿಸದೆ ಅಲೆಮಾರಿಗಳಿಗೆ ಅನ್ಯಾಯವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

    “ನಮ್ಮ ಹಕ್ಕುಗಳಿಗಾಗಿನ ಹೋರಾಟವು ನಿಲ್ಲುವುದಿಲ್ಲ. ನಾವು ಸಂಖ್ಯೆಯಲ್ಲಿ ಕಡಿಮೆ ಇರಬಹುದು. ನಿಮ್ಮನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಬೇಕಾದ ಸಂಖ್ಯೆ ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ, ನೀವು ಮಾಡುತ್ತಿರುವ ಬಲಾಢ್ಯರ ಪರವಾದ ರಾಜಕಾರಣವನ್ನು ನಾವು ರಾಜ್ಯದ ಜನರ ಮುಂದೆ ಬಯಲುಗೊಳಿಸುವ ಶಕ್ತಿ ನಮಗಿದೆ. ಒಳಮೀಸಲಾತಿಯಲ್ಲಿ ಸರಿಯಾದ ಪಾಲನ್ನು ಪಡೆಯಲು ನಾವು ಬೀದಿ ಹೋರಾಟಗಳನ್ನು ಮುಂದುವರೆಸುತ್ತೇವೆ. ಹಾಗೆಯೇ ನ್ಯಾಯಾಲಯದಲ್ಲಿ ನಮ್ಮ ನ್ಯಾಯಬದ್ಧ ಹಕ್ಕಿಗಾಗಿ ಹೋರಡುತ್ತಲೇ ಇರುತ್ತೇವೆ. ಕರ್ನಾಟಕದಲ್ಲಿನ ನ್ಯಾಯಪ್ರಜ್ಞೆಯುಳ್ಳ ಜನ ನಮ್ಮ ಸಹಾಯಕ್ಕೆ ಬರುತ್ತಾರೆ ಎಂಬ ವಿಶ್ವಾಸದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ಹಾಗೇಯೇ ಎಲ್ಲಾ ಪಕ್ಷದಲ್ಲಿರುವ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಶಾಸಕರು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳ ಪರ ದನಿ ಎತ್ತಬೇಕೆಂದು ಕೋರುತ್ತೇವೆ” ಎಂದು ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...