Homeಅಂತರಾಷ್ಟ್ರೀಯಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು - ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

ಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು – ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

- Advertisement -
- Advertisement -

ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸಲು ಪ್ರಾರಂಭಿಸಲು 16 ವರ್ಷಗಳ ವಯಸ್ಸಿನ ಮಿತಿಯನ್ನು ಹೇರುವ ಕಾನೂನು ಪರಿಚಯಿಸಲು ಆಸ್ಟ್ರೇಲಿಯ ಸರ್ಕಾರ ಮುಂದಾಗಿದೆ. ಈ ಕಾನೂನು ಅನುಸರಣೆಯಾಗುತ್ತಿದೆ ಎಂದು ಖಾತ್ರಿಪಡಿಸುವ ಜವಾಬ್ದಾರಿ ಸಾಮಾಜಿಕ ಮಾಧ್ಯಮಗಳಿಗೆ ಹೊರಿಸುತ್ತಿರುವುದಾಗಿ ಆಸ್ಟ್ರೇಲಿಯಾ ಸರ್ಕಾರ ಗುರುವಾರ ಘೋಷಿಸಿತು. ಸಾಮಾಜಿಕ ಮಾಧ್ಯಮ ಬಳಸಲು

“ಸಾಮಾಜಿಕ ಮಾಧ್ಯಮವು ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ. ಇಂತಹ ಕಾನೂನು ಪರಿಚಯಿಸಲು ಇದು ಸಕಾಲ ಎಂದು ನಾನು ಭಾವಿಸುತ್ತಿದ್ದೇನೆ” ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ನವೆಂಬರ್ 18 ರಂದು ಪ್ರಾರಂಭವಾಗುವ ಈ ವರ್ಷದ ಅಧಿವೇಶನದ ಕೊನೆಯ ಎರಡು ವಾರಗಳಲ್ಲಿ ಶಾಸನವನ್ನು ಸಂಸತ್ತಿನಲ್ಲಿ ಪರಿಚಯಿಸಲಾಗುವುದು ಎಂದು ಹೇಳಿರುವ ಅವರು, ಕಾನೂನು ಅಂಗೀಕರಿಸಿದ 12 ತಿಂಗಳ ನಂತರ ಸಾಮಾಜಿಕ ಮಾಧ್ಯಮ ಬಳಸಲು ಪ್ರಾರಂಭಿಸುವ ವಯಸ್ಸಿನ ಮಿತಿಯು ಜಾರಿಗೆ ಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌, ಟಿಕ್‌ಟಾಕ್, ಇನ್ಸ್‌ಟಾಗ್ರಾಮ್ ಮತ್ತು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪೆನಿಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಸ್ಟ್ರೇಲಿಯನ್ ಮಕ್ಕಳನ್ನು ಅದರಿಂದ ಹೇಗೆ ಹೊರಗಿಡಬಹುದು ಎಂಬ ಬಗ್ಗೆ ಈ ಒಂದು ವರ್ಷದಲ್ಲಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

“ನಾನು ಸಾವಿರಾರು ಪೋಷಕರು, ಅಜ್ಜಿಯರು, ಅಂಕಲ್ ಮತ್ತು ಆಂಟಿಯರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಅವರು, ನನ್ನಂತೆಯೆ ಆನ್‌ಲೈನ್‌ನಲ್ಲಿ ನಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ. ಸ್ಮಾರ್ಟ್‌ಫೋನ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಂತಹ ತಂತ್ರಜ್ಞಾನಗಳನ್ನು ಬಳಸುತ್ತಿರುವ ಯುವಜನರನ್ನು ಮೇಲ್ವಿಚಾರಣೆ ಮಾಡುವುದು ಹೇಗೆ ಎಂಬುದರ ಕುರಿತು ಪ್ರಪಂಚದಾದ್ಯಂತದ ಸರ್ಕಾರಗಳು ಚಿಂತಿಸುತ್ತಿರುವಾಗ ಆಸ್ಟ್ರೇಲಿಯಾ ಸರ್ಕಾರ ಈ ಪ್ರಸ್ತಾಪ ಮಾಡಿದೆ.

ಆಸ್ಟ್ರೇಲಿಯಾ ಸರ್ಕಾರ ಪ್ರಸ್ತಾಪ ಮಾಡಿರುವ ಕಾನೂನಿನಲ್ಲಿ, ವಯೋಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ದಂಡ ವಿಧಿಸಲಾಗುತ್ತದೆ. ಆದರೆ ಅದರನ್ನು ಬಳಸಿದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಅವರ ಪೋಷಕರಿಗೆ ಯಾವುದೆ ದಂಡವನ್ನು ಕಾನೂನು ಪ್ರಸ್ತಾಪಿಸಿಲ್ಲ. “ಸಾಮಾಜಿಕ ಮಾಧ್ಯಮಗಳಿಗೆ ಪ್ರವೇಶವನ್ನು ತಡೆಗಟ್ಟಲು ಫ್ಲಾಟ್‌ಫಾರ್ಮ್‌ ಅವರೆ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದು ಅವರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿಯು ಪೋಷಕರು ಅಥವಾ ಮಕ್ಕಳ ಮೇಲೆ ಇರುವುದಿಲ್ಲ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸುರಕ್ಷತಾ ಮುಖ್ಯಸ್ಥ ಆಂಟಿಗೋನ್ ಡೇವಿಸ್, ಸರ್ಕಾರವು ಪರಿಚಯಿಸಲು ಬಯಸುವ ಯಾವುದೇ ವಯಸ್ಸಿನ ಮಿತಿಗಳನ್ನು ಕಂಪನಿಯು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಆದರೆ, ಆಸ್ಟ್ರೇಲಿಯಾದಲ್ಲಿ ಡಿಜಿಟಲ್ ಉದ್ಯಮದ ಪರ ವಾದಿಸುವ ಡಿಜಿಟಲ್ ಇಂಡಸ್ಟ್ರಿ ಗ್ರೂಪ್ Inc, ಸರ್ಕಾರ ನೀತಿಯನ್ನು ಟೀಕಿಸಿದ್ದು, “21 ನೇ ಶತಮಾನದ ಸವಾಲುಗಳಿಗೆ 20 ನೇ ಶತಮಾನದ ಪ್ರತಿಕ್ರಿಯೆ” ಎಂದು ಹೇಳಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...