Homeಅಂತರಾಷ್ಟ್ರೀಯಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು - ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

ಸಾಮಾಜಿಕ ಮಾಧ್ಯಮ ಬಳಸಲು 16 ವರ್ಷ ಆಗಿರಬೇಕು – ಆಸ್ಟ್ರೇಲಿಯಾ ಸರ್ಕಾರದಿಂದ ಕಾನೂನು ಪ್ರಸ್ತಾಪ

- Advertisement -
- Advertisement -

ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸಲು ಪ್ರಾರಂಭಿಸಲು 16 ವರ್ಷಗಳ ವಯಸ್ಸಿನ ಮಿತಿಯನ್ನು ಹೇರುವ ಕಾನೂನು ಪರಿಚಯಿಸಲು ಆಸ್ಟ್ರೇಲಿಯ ಸರ್ಕಾರ ಮುಂದಾಗಿದೆ. ಈ ಕಾನೂನು ಅನುಸರಣೆಯಾಗುತ್ತಿದೆ ಎಂದು ಖಾತ್ರಿಪಡಿಸುವ ಜವಾಬ್ದಾರಿ ಸಾಮಾಜಿಕ ಮಾಧ್ಯಮಗಳಿಗೆ ಹೊರಿಸುತ್ತಿರುವುದಾಗಿ ಆಸ್ಟ್ರೇಲಿಯಾ ಸರ್ಕಾರ ಗುರುವಾರ ಘೋಷಿಸಿತು. ಸಾಮಾಜಿಕ ಮಾಧ್ಯಮ ಬಳಸಲು

“ಸಾಮಾಜಿಕ ಮಾಧ್ಯಮವು ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ. ಇಂತಹ ಕಾನೂನು ಪರಿಚಯಿಸಲು ಇದು ಸಕಾಲ ಎಂದು ನಾನು ಭಾವಿಸುತ್ತಿದ್ದೇನೆ” ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ. ನವೆಂಬರ್ 18 ರಂದು ಪ್ರಾರಂಭವಾಗುವ ಈ ವರ್ಷದ ಅಧಿವೇಶನದ ಕೊನೆಯ ಎರಡು ವಾರಗಳಲ್ಲಿ ಶಾಸನವನ್ನು ಸಂಸತ್ತಿನಲ್ಲಿ ಪರಿಚಯಿಸಲಾಗುವುದು ಎಂದು ಹೇಳಿರುವ ಅವರು, ಕಾನೂನು ಅಂಗೀಕರಿಸಿದ 12 ತಿಂಗಳ ನಂತರ ಸಾಮಾಜಿಕ ಮಾಧ್ಯಮ ಬಳಸಲು ಪ್ರಾರಂಭಿಸುವ ವಯಸ್ಸಿನ ಮಿತಿಯು ಜಾರಿಗೆ ಬರಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಕ್ಸ್‌, ಟಿಕ್‌ಟಾಕ್, ಇನ್ಸ್‌ಟಾಗ್ರಾಮ್ ಮತ್ತು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪೆನಿಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಆಸ್ಟ್ರೇಲಿಯನ್ ಮಕ್ಕಳನ್ನು ಅದರಿಂದ ಹೇಗೆ ಹೊರಗಿಡಬಹುದು ಎಂಬ ಬಗ್ಗೆ ಈ ಒಂದು ವರ್ಷದಲ್ಲಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

“ನಾನು ಸಾವಿರಾರು ಪೋಷಕರು, ಅಜ್ಜಿಯರು, ಅಂಕಲ್ ಮತ್ತು ಆಂಟಿಯರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಅವರು, ನನ್ನಂತೆಯೆ ಆನ್‌ಲೈನ್‌ನಲ್ಲಿ ನಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ. ಸ್ಮಾರ್ಟ್‌ಫೋನ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಂತಹ ತಂತ್ರಜ್ಞಾನಗಳನ್ನು ಬಳಸುತ್ತಿರುವ ಯುವಜನರನ್ನು ಮೇಲ್ವಿಚಾರಣೆ ಮಾಡುವುದು ಹೇಗೆ ಎಂಬುದರ ಕುರಿತು ಪ್ರಪಂಚದಾದ್ಯಂತದ ಸರ್ಕಾರಗಳು ಚಿಂತಿಸುತ್ತಿರುವಾಗ ಆಸ್ಟ್ರೇಲಿಯಾ ಸರ್ಕಾರ ಈ ಪ್ರಸ್ತಾಪ ಮಾಡಿದೆ.

ಆಸ್ಟ್ರೇಲಿಯಾ ಸರ್ಕಾರ ಪ್ರಸ್ತಾಪ ಮಾಡಿರುವ ಕಾನೂನಿನಲ್ಲಿ, ವಯೋಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ದಂಡ ವಿಧಿಸಲಾಗುತ್ತದೆ. ಆದರೆ ಅದರನ್ನು ಬಳಸಿದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಅವರ ಪೋಷಕರಿಗೆ ಯಾವುದೆ ದಂಡವನ್ನು ಕಾನೂನು ಪ್ರಸ್ತಾಪಿಸಿಲ್ಲ. “ಸಾಮಾಜಿಕ ಮಾಧ್ಯಮಗಳಿಗೆ ಪ್ರವೇಶವನ್ನು ತಡೆಗಟ್ಟಲು ಫ್ಲಾಟ್‌ಫಾರ್ಮ್‌ ಅವರೆ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದು ಅವರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿಯು ಪೋಷಕರು ಅಥವಾ ಮಕ್ಕಳ ಮೇಲೆ ಇರುವುದಿಲ್ಲ” ಎಂದು ಪ್ರಧಾನಿ ಅಲ್ಬನೀಸ್ ಹೇಳಿದ್ದಾರೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಸುರಕ್ಷತಾ ಮುಖ್ಯಸ್ಥ ಆಂಟಿಗೋನ್ ಡೇವಿಸ್, ಸರ್ಕಾರವು ಪರಿಚಯಿಸಲು ಬಯಸುವ ಯಾವುದೇ ವಯಸ್ಸಿನ ಮಿತಿಗಳನ್ನು ಕಂಪನಿಯು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಆದರೆ, ಆಸ್ಟ್ರೇಲಿಯಾದಲ್ಲಿ ಡಿಜಿಟಲ್ ಉದ್ಯಮದ ಪರ ವಾದಿಸುವ ಡಿಜಿಟಲ್ ಇಂಡಸ್ಟ್ರಿ ಗ್ರೂಪ್ Inc, ಸರ್ಕಾರ ನೀತಿಯನ್ನು ಟೀಕಿಸಿದ್ದು, “21 ನೇ ಶತಮಾನದ ಸವಾಲುಗಳಿಗೆ 20 ನೇ ಶತಮಾನದ ಪ್ರತಿಕ್ರಿಯೆ” ಎಂದು ಹೇಳಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

ಮಣಿಪುರ ಹಿಂಸಾಚಾರ: ಜಿರಿಬಾಮ್‌ನಲ್ಲಿ ಆರು ಮನೆಗಳಿಗೆ ಬೆಂಕಿ, ಗ್ರಾಮಸ್ಥರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...