Homeಅಂತರಾಷ್ಟ್ರೀಯ16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಅಸ್ಟ್ರೇಲಿಯದಲ್ಲಿ  ಮಸೂದೆಗೆ ಅಂಗೀಕಾರ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಅಸ್ಟ್ರೇಲಿಯದಲ್ಲಿ  ಮಸೂದೆಗೆ ಅಂಗೀಕಾರ

- Advertisement -
- Advertisement -

ಸಿಡ್ನಿ: 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ನಿಷೇಧಗೊಳಿಸುವ ಮಸೂದೆಗೆ ಅಸ್ಟ್ರೇಲಿಯಾದ ಜನಪ್ರತಿನಿಧಿಗಳ ಸಭೆಯು ಇಂದು ಅಂಗೀಕರಿಸಿದೆ.

ಪ್ರಮುಖ ಜಾಲತಾಣಗಳಾದ ಟಿಕ್‌ಟಾಕ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್ ಮುಂತಾದವುಗಳು ತಮ್ಮ ಜಾಲತಾಣದಲ್ಲಿ ಚಿಕ್ಕ ಮಕ್ಕಳು ಖಾತೆಗಳನ್ನು ಹೊಂದುವುದನ್ನು ನಿಷೇಧಿಸುವುದು ಕಡ್ಡಾಯವಾಗಿದೆ. ಇದಕ್ಕೆ ತಪ್ಪಿದ ಜಾಲತಾಣಗಳಿಗೆ  50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ಗಳವರೆಗೆ ($ 33 ​​ಮಿಲಿಯನ್) ದಂಡ ತೆತ್ತಾಬೇಕಿದೆ.

ಜನ ಪ್ರತಿನಿಧಿಗಳ ಸಭೆಯು ಇದನ್ನು ಮಸೂದೆಗೊಳಿಸಲು ಸೆನೆಟ್‌ಗೆ ವರ್ಗಾಯಿಸಿದೆ.

ಕಾಯ್ದೆಯ ಪರ 102 ಮತಗಳು ಬಿದ್ದರೆ ವಿರುದ್ಧವಾಗಿ 13 ಮತಗಳು ಚಲಾವಣೆಯಾಗಿದ್ದವು.  ಜಾಲತಾಣಗಳಿಗೆ ವಯಸ್ಸಿನ ನಿರ್ಬಂಧವನ್ನು ಹೇಎ ಕಾರ್ಯಾಚರಣೆಗೆ ತರಬೇಕೆಂದು ಖಚಿತಪಡಿಸಲು ಒಂದು ವರ್ಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ ಎಂದು ಜನ ಪ್ರತಿನಿಧಿಗಳ ಸಭೆಯು ಹೇಳಿದೆ.

ಈ ಮಸೂದೆ ಕುರಿತು ಸೆನೆಟ್ ಚರ್ಚಿಸಲಿದೆ ಎಂದು ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಹೇಳಿದ್ದಾರೆ.

ನಿಷೇಧವು ಮಕ್ಕಳನ್ನು ಪ್ರತ್ಯೇಕಿಸುತ್ತದೆ, ಸಾಮಾಜಿಕ ಮಾಧ್ಯಮದ ಸಕಾರಾತ್ಮಕ ಅಂಶಗಳಿಂದ ವಂಚಿತರನ್ನಾಗಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಿದ್ದಾರೆ.

ಆಧುನಿಕತೆ ಹೆಚ್ಚಾಗುತ್ತಾ ಹೋದಂತೆ ಜನರು ಹೊಸ ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಬಳಕೆಯೂ ಅಧಿಕವಾಗಿದ್ದು, ಮಕ್ಕಳು ಆನ್ಲೈನ್ ಪೋರ್ಟಲ್ ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ಸಭೆಯು ಹೇಳಿದೆ.

ಇತ್ತೀಚೆಗಿನ ದಿನಗಳಲ್ಲಿ ಮಕ್ಕಳು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಈ ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಸಾಕಷ್ಟು ಗಂಭೀರ ಪರಿಣಾಮಗಳನ್ನು ಬೀರುತ್ತಿದೆ. ಇದು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಹಿನ್ನಲೆಯಲ್ಲಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ ಎಂದು ಅದು ಹೇಳಿದೆ.

ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ ಆಲ್ಬನೀಸ್ ಈ ಬಗ್ಗೆ ಮಾತನಾಡಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಕಾನೂನು ರೂಪಿಸುತ್ತೇವೆ. ಈ ಹಿನ್ನಲೆಯಲ್ಲಿ ವಯಸ್ಸಿನ ಮಿತಿಯನ್ನು ಪರಿಶೀಲಿಸುತ್ತಿದ್ದೇವೆ. ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿದೆ. ಇದರ ಅತಿಯಾದ ಬಳಕೆಯಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಮೋಸ, ವಂಚನೆ ಸೇರಿದಂತೆ ಮಕ್ಕಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಮಕ್ಕಳನ್ನು ದೂರವಿಡುವ ಸಲುವಾಗಿ ಈ ಮಸೂದೆಗೆ ಅಂಗೀಕರ ನೀಡಲಾಗಿದೆ.. ನಾವು ಅಂಗೀಕರಿಸಿದ 12 ತಿಂಗಳ ನಂತರವೇ ಈ ಕಾನೂನು ಜಾರಿಗೆ ಬರಲಿವೆ ಎಂದು ಜನಪ್ರತಿನಿಧಿ ಸಭೆ ತಿಳಿಸಿದೆ.

ಮಕ್ಕಳು ಜಾಲತಾಣಗಳ ಬಳಕೆ ಮಾಡದಂತೆ ನಿರ್ಬಂಧಿಸುವ ಜವಾಬ್ದಾರಿ ಸಾಮಾಜಿಕ ಜಾಲತಾಣಗಳ ಸಂಸ್ಥೆಗಳ ಮೇಲಿದೆ. ಈ ಜವಾಬ್ದಾರಿ ಪೋಷಕರಾಗಲಿ ಅಥವಾ ಯುವಜನತೆಯ ಮೇಲೆ ಇರುವುದಿಲ್ಲ ಎಂದು ಪ್ರಧಾನಿ ಸ್ಪಷ್ಟ ಪಡಿಸಿದ್ದಾರೆ.

ಕಳೆದ ವರ್ಷ ಫ್ರಾನ್ಸ್ 15 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ ಪ್ರಸ್ತಾಪಿಸಿತ್ತು. ಅಮೆರಿಕದಲ್ಲಿ 13 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಪ್ರವೇಶಿಸಲು ಪೋಷಕರ ಒಪ್ಪಿಗೆಯನ್ನು ಪಡೆಯುವುದು ಕಡ್ಡಾಯವಾಗಿದೆ.

ಇದನ್ನೂ ಓದಿ...ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...