Homeಮುಖಪುಟಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

ಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆ” ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮ ಕಂಪನಿಗಳು ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಬಹುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಇವಿಎಂ [ವಿದ್ಯುನ್ಮಾನ ಮತಯಂತ್ರ] ಸುರಕ್ಷಿತವಾಗಿದ್ದರೂ, ಭಾರತೀಯ ಚುನಾವಣೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸಜ್ಜುಗೊಳಿಸಬಹುದು” ಎಂದು ರಾಹುಲ್‌ ಹೇಳಿದ್ದಾರೆ.

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆಯಾಗಿವೆ” ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಪಕ್ಷದ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ಮುಂಬೈನಲ್ಲಿ ನಾಗರಿಕ ಸಮಾಜದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ರಾಹುಲ್‌ ಈ ಹೇಳಿಕೆಗಳನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರದ ಒತ್ತಡದಿಂದಾಗಿ ಜನವರಿಯಲ್ಲಿ ತನ್ನ ಫಾಲೋವರ್ಸ್‌ಗಳನ್ನು ಟ್ವಿಟರ್‌ನಲ್ಲಿ ಸೀಮಿತಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.

ಟ್ವಿಟರ್‌ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಕಚೇರಿ ಪರಾಗ್ ಅಗರವಾಲ್‌ಗೆ ಪತ್ರ ಬರೆದಿದ್ದ ರಾಹುಲ್‌, ತಮ್ಮ ಖಾತೆಯು 2 ಕೋಟಿ ಫಾಲೋವರ್ಸ್ ಹೊಂದಿದೆ. ಪ್ರತಿದಿನ ಸರಾಸರಿ 8,000 ರಿಂದ 10,000 ಫಾಲೋವರ್ಸ್‌ಗಳು ಸೇರುತ್ತಿದ್ದಾರೆ. ನಂತರ ಏನೋ ವಿಚಿತ್ರ ಸಂಭವಿಸಿದೆ” ಎಂದು ತಿಳಿಸಿದ್ದರು.

“ಆಗಸ್ಟ್ 2021ರಿಂದ, ನನ್ನ ಟ್ವಿಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವಿಟ್ಟರ್ ಖಾತೆಯು ಪಾರ್ಶ್ವವಾಯುವಿಗೆ ಒಳಪಟ್ಟಿರುವಂತೆ ತೋರುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಲಿತ ಬಾಲಕಿಯ ಮೇಲಿನ ಅತ್ಯಾಚಾರ, ರೈತರ ಪ್ರತಿಭಟನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಂತಹ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ ನಂತರ ಹೀಗಾಗಿದೆ ಎಂದು ಗಾಂಧಿ ಹೇಳಿಕೊಂಡಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ಕುಟುಂಬದ ಗುರುತನ್ನು ಬಹಿರಂಗಪಡಿಸುವ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ಅವರ ಖಾತೆಯನ್ನು ಲಾಕ್ ಮಾಡಲಾಗಿದೆ. ಒಂದು ವಾರದ ನಂತರ ಖಾತೆಯನ್ನು ಮರುಸ್ಥಾಪಿಸಲಾಯಿತು.

ಸರ್ಕಾರಿ ಕಚೇರಿಗಳು ಸೇರಿದಂತೆ ಇತರ ಟ್ವಿಟರ್ ಹ್ಯಾಂಡಲ್‌ಗಳು ಅದೇ ಫೋಟೋವನ್ನು ಟ್ವೀಟ್ ಮಾಡಿದ್ದರೂ ಅವುಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಗಾಂಧಿ ಆರೋಪಿಸಿದ್ದಾರೆ.

ಬುಧವಾರದ ಸಂವಾದದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಹೆಸರಿಸದೆ ಮಾತನಾಡಿದ ಅವರು, “ಸಮಾಜದಲ್ಲಿ ಸಾಮರಸ್ಯವನ್ನು ಕದಡಲು ಒಂದು ಸಿದ್ಧಾಂತ ಮತ್ತು ಅದರ ನಾಯಕರು ಕೋಮು ಹಿಂಸಾಚಾರವನ್ನು ಕಾರ್ಯತಂತ್ರದ ಅಸ್ತ್ರವಾಗಿ ಭಾರತದಲ್ಲಿ ನೆಡೆಸುತ್ತಾರೆ” ಎಂದು ಗಾಂಧಿ ಹೇಳಿರುವುದಾಗಿ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಈ ಸಮಯದಲ್ಲಿ ಭಾರತವು ಪ್ರಬಲ ನಗರವಾಸಿ ಗಣ್ಯರ ದೃಷ್ಟಿಕೋನಕ್ಕೆ ಅನುಗುಣವಾಗಿದೆ. ಅದನ್ನು ಸರಿಯಾದ ಆಲೋಚನಾ ವಿಧಾನದಿಂದ ಮಾತ್ರ ಒಡೆದುಹಾಕಬಹುದು. ಆ ದೃಷ್ಟಿಯನ್ನು ಪರಿಷ್ಕರಿಸುವುದು ನಮ್ಮ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...