Homeಮುಖಪುಟಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

ಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆ” ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮ ಕಂಪನಿಗಳು ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಬಹುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಇವಿಎಂ [ವಿದ್ಯುನ್ಮಾನ ಮತಯಂತ್ರ] ಸುರಕ್ಷಿತವಾಗಿದ್ದರೂ, ಭಾರತೀಯ ಚುನಾವಣೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸಜ್ಜುಗೊಳಿಸಬಹುದು” ಎಂದು ರಾಹುಲ್‌ ಹೇಳಿದ್ದಾರೆ.

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆಯಾಗಿವೆ” ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಪಕ್ಷದ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ಮುಂಬೈನಲ್ಲಿ ನಾಗರಿಕ ಸಮಾಜದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ರಾಹುಲ್‌ ಈ ಹೇಳಿಕೆಗಳನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರದ ಒತ್ತಡದಿಂದಾಗಿ ಜನವರಿಯಲ್ಲಿ ತನ್ನ ಫಾಲೋವರ್ಸ್‌ಗಳನ್ನು ಟ್ವಿಟರ್‌ನಲ್ಲಿ ಸೀಮಿತಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.

ಟ್ವಿಟರ್‌ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಕಚೇರಿ ಪರಾಗ್ ಅಗರವಾಲ್‌ಗೆ ಪತ್ರ ಬರೆದಿದ್ದ ರಾಹುಲ್‌, ತಮ್ಮ ಖಾತೆಯು 2 ಕೋಟಿ ಫಾಲೋವರ್ಸ್ ಹೊಂದಿದೆ. ಪ್ರತಿದಿನ ಸರಾಸರಿ 8,000 ರಿಂದ 10,000 ಫಾಲೋವರ್ಸ್‌ಗಳು ಸೇರುತ್ತಿದ್ದಾರೆ. ನಂತರ ಏನೋ ವಿಚಿತ್ರ ಸಂಭವಿಸಿದೆ” ಎಂದು ತಿಳಿಸಿದ್ದರು.

“ಆಗಸ್ಟ್ 2021ರಿಂದ, ನನ್ನ ಟ್ವಿಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವಿಟ್ಟರ್ ಖಾತೆಯು ಪಾರ್ಶ್ವವಾಯುವಿಗೆ ಒಳಪಟ್ಟಿರುವಂತೆ ತೋರುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಲಿತ ಬಾಲಕಿಯ ಮೇಲಿನ ಅತ್ಯಾಚಾರ, ರೈತರ ಪ್ರತಿಭಟನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಂತಹ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ ನಂತರ ಹೀಗಾಗಿದೆ ಎಂದು ಗಾಂಧಿ ಹೇಳಿಕೊಂಡಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ಕುಟುಂಬದ ಗುರುತನ್ನು ಬಹಿರಂಗಪಡಿಸುವ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ಅವರ ಖಾತೆಯನ್ನು ಲಾಕ್ ಮಾಡಲಾಗಿದೆ. ಒಂದು ವಾರದ ನಂತರ ಖಾತೆಯನ್ನು ಮರುಸ್ಥಾಪಿಸಲಾಯಿತು.

ಸರ್ಕಾರಿ ಕಚೇರಿಗಳು ಸೇರಿದಂತೆ ಇತರ ಟ್ವಿಟರ್ ಹ್ಯಾಂಡಲ್‌ಗಳು ಅದೇ ಫೋಟೋವನ್ನು ಟ್ವೀಟ್ ಮಾಡಿದ್ದರೂ ಅವುಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಗಾಂಧಿ ಆರೋಪಿಸಿದ್ದಾರೆ.

ಬುಧವಾರದ ಸಂವಾದದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಹೆಸರಿಸದೆ ಮಾತನಾಡಿದ ಅವರು, “ಸಮಾಜದಲ್ಲಿ ಸಾಮರಸ್ಯವನ್ನು ಕದಡಲು ಒಂದು ಸಿದ್ಧಾಂತ ಮತ್ತು ಅದರ ನಾಯಕರು ಕೋಮು ಹಿಂಸಾಚಾರವನ್ನು ಕಾರ್ಯತಂತ್ರದ ಅಸ್ತ್ರವಾಗಿ ಭಾರತದಲ್ಲಿ ನೆಡೆಸುತ್ತಾರೆ” ಎಂದು ಗಾಂಧಿ ಹೇಳಿರುವುದಾಗಿ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಈ ಸಮಯದಲ್ಲಿ ಭಾರತವು ಪ್ರಬಲ ನಗರವಾಸಿ ಗಣ್ಯರ ದೃಷ್ಟಿಕೋನಕ್ಕೆ ಅನುಗುಣವಾಗಿದೆ. ಅದನ್ನು ಸರಿಯಾದ ಆಲೋಚನಾ ವಿಧಾನದಿಂದ ಮಾತ್ರ ಒಡೆದುಹಾಕಬಹುದು. ಆ ದೃಷ್ಟಿಯನ್ನು ಪರಿಷ್ಕರಿಸುವುದು ನಮ್ಮ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....