Homeಮುಖಪುಟಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

ಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಯಾವುದೇ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲಿಸಬಹುದು: ರಾಹುಲ್‌

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆ” ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮ ಕಂಪನಿಗಳು ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಚುನಾವಣೆಯಲ್ಲಿ ಗೆಲ್ಲುವಂತೆ ಮಾಡಬಹುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಇವಿಎಂ [ವಿದ್ಯುನ್ಮಾನ ಮತಯಂತ್ರ] ಸುರಕ್ಷಿತವಾಗಿದ್ದರೂ, ಭಾರತೀಯ ಚುನಾವಣೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸಜ್ಜುಗೊಳಿಸಬಹುದು” ಎಂದು ರಾಹುಲ್‌ ಹೇಳಿದ್ದಾರೆ.

“ವ್ಯವಸ್ಥಿತ ಪಕ್ಷಪಾತವನ್ನು ಅಲ್ಲಿ ಮಾಡಲಾಗುತ್ತಿದೆ. ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳೇ ಇದಕ್ಕೆ ಜೀವಂತ ಉದಾಹರಣೆಯಾಗಿವೆ” ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಪಕ್ಷದ ಭಾರತ್ ಜೋಡೋ ಯಾತ್ರೆಯು ಮಹಾರಾಷ್ಟ್ರಕ್ಕೆ ಕಾಲಿಟ್ಟ ಬಳಿಕ ಮುಂಬೈನಲ್ಲಿ ನಾಗರಿಕ ಸಮಾಜದ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ರಾಹುಲ್‌ ಈ ಹೇಳಿಕೆಗಳನ್ನು ನೀಡಿದ್ದಾರೆ.

ಕೇಂದ್ರ ಸರ್ಕಾರದ ಒತ್ತಡದಿಂದಾಗಿ ಜನವರಿಯಲ್ಲಿ ತನ್ನ ಫಾಲೋವರ್ಸ್‌ಗಳನ್ನು ಟ್ವಿಟರ್‌ನಲ್ಲಿ ಸೀಮಿತಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.

ಟ್ವಿಟರ್‌ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಕಚೇರಿ ಪರಾಗ್ ಅಗರವಾಲ್‌ಗೆ ಪತ್ರ ಬರೆದಿದ್ದ ರಾಹುಲ್‌, ತಮ್ಮ ಖಾತೆಯು 2 ಕೋಟಿ ಫಾಲೋವರ್ಸ್ ಹೊಂದಿದೆ. ಪ್ರತಿದಿನ ಸರಾಸರಿ 8,000 ರಿಂದ 10,000 ಫಾಲೋವರ್ಸ್‌ಗಳು ಸೇರುತ್ತಿದ್ದಾರೆ. ನಂತರ ಏನೋ ವಿಚಿತ್ರ ಸಂಭವಿಸಿದೆ” ಎಂದು ತಿಳಿಸಿದ್ದರು.

“ಆಗಸ್ಟ್ 2021ರಿಂದ, ನನ್ನ ಟ್ವಿಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವಿಟ್ಟರ್ ಖಾತೆಯು ಪಾರ್ಶ್ವವಾಯುವಿಗೆ ಒಳಪಟ್ಟಿರುವಂತೆ ತೋರುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಲಿತ ಬಾಲಕಿಯ ಮೇಲಿನ ಅತ್ಯಾಚಾರ, ರೈತರ ಪ್ರತಿಭಟನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಂತಹ ವಿಷಯಗಳ ಬಗ್ಗೆ ಟ್ವೀಟ್ ಮಾಡಿದ ನಂತರ ಹೀಗಾಗಿದೆ ಎಂದು ಗಾಂಧಿ ಹೇಳಿಕೊಂಡಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ಕುಟುಂಬದ ಗುರುತನ್ನು ಬಹಿರಂಗಪಡಿಸುವ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ಅವರ ಖಾತೆಯನ್ನು ಲಾಕ್ ಮಾಡಲಾಗಿದೆ. ಒಂದು ವಾರದ ನಂತರ ಖಾತೆಯನ್ನು ಮರುಸ್ಥಾಪಿಸಲಾಯಿತು.

ಸರ್ಕಾರಿ ಕಚೇರಿಗಳು ಸೇರಿದಂತೆ ಇತರ ಟ್ವಿಟರ್ ಹ್ಯಾಂಡಲ್‌ಗಳು ಅದೇ ಫೋಟೋವನ್ನು ಟ್ವೀಟ್ ಮಾಡಿದ್ದರೂ ಅವುಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಗಾಂಧಿ ಆರೋಪಿಸಿದ್ದಾರೆ.

ಬುಧವಾರದ ಸಂವಾದದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಹೆಸರಿಸದೆ ಮಾತನಾಡಿದ ಅವರು, “ಸಮಾಜದಲ್ಲಿ ಸಾಮರಸ್ಯವನ್ನು ಕದಡಲು ಒಂದು ಸಿದ್ಧಾಂತ ಮತ್ತು ಅದರ ನಾಯಕರು ಕೋಮು ಹಿಂಸಾಚಾರವನ್ನು ಕಾರ್ಯತಂತ್ರದ ಅಸ್ತ್ರವಾಗಿ ಭಾರತದಲ್ಲಿ ನೆಡೆಸುತ್ತಾರೆ” ಎಂದು ಗಾಂಧಿ ಹೇಳಿರುವುದಾಗಿ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಈ ಸಮಯದಲ್ಲಿ ಭಾರತವು ಪ್ರಬಲ ನಗರವಾಸಿ ಗಣ್ಯರ ದೃಷ್ಟಿಕೋನಕ್ಕೆ ಅನುಗುಣವಾಗಿದೆ. ಅದನ್ನು ಸರಿಯಾದ ಆಲೋಚನಾ ವಿಧಾನದಿಂದ ಮಾತ್ರ ಒಡೆದುಹಾಕಬಹುದು. ಆ ದೃಷ್ಟಿಯನ್ನು ಪರಿಷ್ಕರಿಸುವುದು ನಮ್ಮ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....