Homeಮುಖಪುಟಸಾಮಾಜಿಕ ಮಾಧ್ಯಮಗಳು ಭಯೋತ್ಪಾದಕರಿಗೆ ಸಾಧನವಾಗಿವೆ: ವಿದೇಶಾಂಗ ಸಚಿವ ಜೈಶಂಕರ್‌‌

ಸಾಮಾಜಿಕ ಮಾಧ್ಯಮಗಳು ಭಯೋತ್ಪಾದಕರಿಗೆ ಸಾಧನವಾಗಿವೆ: ವಿದೇಶಾಂಗ ಸಚಿವ ಜೈಶಂಕರ್‌‌

- Advertisement -
- Advertisement -

ಭಯೋತ್ಪಾದಕರು ತಮ್ಮ ಯೋಜಿತ ಪ್ರಚಾರಗಳನ್ನು ಮಾಡಲು, ನಾಗರಿಕರನ್ನು ತೀವ್ರಗಾಮಿಗೊಳಿಸಲು ಪ್ರಬಲ ಸಾಧನವಾಗಿ ಇಂಟರ್‌ನೆಟ್‌‌ ಮತ್ತು ಸಾಮಾಜಿಕ ಮಾಧ್ಯಮಗಳು ಬಳಕೆಯಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ‘ಭಯೋತ್ಪಾದನಾ ನಿಗ್ರಹ ಸಮಿತಿಯ ವಿಶೇಷ ಸಭೆ’ಯ ಸರ್ವಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಹಲವಾರು ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಗೆ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್‌ಗಳು ಮತ್ತು ಎನ್‌ಕ್ರಿಪ್ಟೆಡ್ ಮೆಸೇಜಿಂಗ್ ಸೇವೆಗಳಂತಹ ತಂತ್ರಜ್ಞಾನಗಳು ಭರವಸೆಯ ಭವಿಷ್ಯವನ್ನು ನೀಡುತ್ತವೆ. ಆದರೆ ಅವು ಸರ್ಕಾರಗಳಿಗೆ ಹೊಸ ಸವಾಲುಗಳನ್ನೂ ಒಡ್ಡುತ್ತವೆ ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ಗುಂಪುಗಳು, ಅವರ ಸೈದ್ಧಾಂತಿಕ ಒಡನಾಡಿಗಳು ಈ ತಂತ್ರಜ್ಞಾನಗಳಿಗೆ ಪ್ರವೇಶವನ್ನು ಪಡೆಯುವ ಮೂಲಕ ತಮ್ಮ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದಾರೆ” ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. “ಭಯೋತ್ಪಾದಕರು ತಂತ್ರಜ್ಞಾನ ಮತ್ತು ಹಣವನ್ನು ಸಮಾಜಗಳ ನೀತಿ, ಸ್ವಾತಂತ್ರ್ಯ, ಸಹಿಷ್ಣುತೆ ಮತ್ತು ಪ್ರಗತಿಯ ಮೇಲೆ ದಾಳಿ ಮಾಡಲು ಬಳಸುತ್ತಿದ್ದಾರೆ” ಎಂದಿದ್ದಾರೆ.

ಭಯೋತ್ಪಾದನೆಯು ಮಾನವೀಯತೆಗೆ ಬಹುದೊಡ್ಡ ಬೆದರಿಕೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಬಣ್ಣಿಸಿದ್ದಾರೆ.

“ವಿಶ್ವಸಂಸ್ಥೆಯ ಸೆಕ್ಯುರಿಟಿ ಕೌನ್ಸಿಲ್ ಕಳೆದ ಎರಡು ದಶಕಗಳಲ್ಲಿ ಈ ಬೆದರಿಕೆಗಳ ನಿರ್ಮೂಲನೆಗೆ ಕ್ರಮಗಳನ್ನು ಜರುಗಿಸಿದೆ. ಭಯೋತ್ಪಾದನೆಯನ್ನು ಸರ್ಕಾರಿ-ಅನುದಾನಿತ ಉದ್ಯಮವಾಗಿ ಪರಿವರ್ತಿಸಿದ ಆ ದೇಶಗಳನ್ನು ಗಮನಕ್ಕೆ ತರುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಯೋತ್ಪಾದಕರು ಮಾನವರಹಿತ ವೈಮಾನಿಕ ವ್ಯವಸ್ಥೆಗಳನ್ನು ಬಳಸುತ್ತಿದ್ದಾರೆ. ಇದು ವಿಶ್ವದಾದ್ಯಂತ ಸರ್ಕಾರಗಳಿಗೆ ಹೆಚ್ಚುವರಿ ಚಿಂತೆಯಾಗಿ ಪರಿಣಮಿಸಿದೆ ಎಂದು ಜೈಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ಗುಂಪುಗಳು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಗಡಿಯಾಚೆಗೆ ಕಳ್ಳಸಾಗಣೆ ಮಾಡಲು ಡ್ರೋನ್‌ಗಳು ಮತ್ತು ಕ್ವಾಡ್‌ಕಾಪ್ಟರ್‌ಗಳನ್ನು ಬಳಸುತ್ತಿವೆ ಎಂದು ಜೈಶಂಕರ್ ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳನ್ನು, ವಿಶ್ವಸಂಸ್ಥೆಯ ಶಾಂತಿಪಾಲಕರ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಅಂತಹ ಸಂಘಟನೆಗಳು ಡ್ರೋನ್‌ಗಳನ್ನು ಆಫ್ರಿಕಾದಲ್ಲಿ ಬಳಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವರು ಭಯೋತ್ಪಾದನಾ ನಿಗ್ರಹ ಸಮಿತಿ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದರು. “ರಾಷ್ಟ್ರೀಯ ಸಂಘಟಿತ ಅಪರಾಧ, ಅಕ್ರಮ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯೊಂದಿಗೆ ಭಯೋತ್ಪಾದನೆಯ ನಂಟು ಈಗ ಉತ್ತಮವಾಗಿ ಸ್ಥಾಪಿತವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತೂ a ಸತ್ಯ ಒಪ್ಪಿದ ಕಮಲ ನಾಯಕ. ಆದ್ರೆ ನೇರವಾಗಿ ಒಪ್ಪಿಕೊಳ್ಳಲಿಲ್ಲ. ಬಿಜೆಪಿ rss ನವರು ಕೂಡಾ ಬಾಯೋತ್ಪದಕರು ಅಂತ ಒಳ್ಳೆ ಬೆಳವಣಿಗೆ ಹಾಗಾಗಿ ಈ ಬಾಯೋತ್ಪದಕ ಸಂಘಟನೆ ಆರೆಸಸ್ ಅನ್ನೂ ನಿಕ್ಷೇದ ಮಾಡಿ ಅಂತ ಪ್ರಧಾನಿ ಅವರಿಗೆ ಹೇಳಿ ಜೈ ಶಂಕರ್ ಅವರೇ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...