Homeಮುಖಪುಟಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಮಾಧ್ಯಮಗಳಲ್ಲಿ ಮಹಾ ಕುಂಭ ಮೇಳದ ಬಗ್ಗೆ ವದಂತಿ ಹರಡಿದವರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕಳಂಕ ತರುವ ಉದ್ದೇಶದಿಂದ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಪೊಲೀಸರು ಸೋಮವಾರ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ

ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಏಳು ಸಾಮಾಜಿಕ ಮಾಧ್ಯಮ ಖಾತೆದಾರರು/ಬಳಕೆದಾರರ ವಿರುದ್ಧ ಮೇಳ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಎಸ್‌ಪಿ (ಕುಂಭಮೇಳ) ರಾಜೇಶ್ ದ್ವಿವೇದಿ ದೃಢಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದ ತನಿಖೆ ಮತ್ತು ಸೂಕ್ತ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸೈಬರ್ ಅಪರಾಧ ಮತ್ತು ಮೇಳದ ಪೊಲೀಸರ ಜಂಟಿ ತಂಡಕ್ಕೆ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಸಾಮಾಜಿಕ ಮಾಧ್ಯಮಗಳಲ್ಲಿ, ಕುಟುಂಬ ಸದಸ್ಯರು ಮೂರು ಶವಗಳನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂದು ಪ್ರತಿಪಾದಿಸುವ ವಿಡಿಯೊಂದು ವೈರಲ್ ಆಗಿದೆ, ಇದು ತಪ್ಪಾಗಿ ಬಿಂಬಿಸುವ ವೀಡಿಯೊವಾಗಿದ್ದು, ಈ ನಕಲಿ ವೀಡಿಯೊವನ್ನು ಖಾತೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿಕೊಂಡಿದ್ದಾರೆ.

ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಕುಟುಂಬವು ಶವಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಅವರ ಮನೆಗೆ ಶವವನ್ನು ಈ ರೀತಿಯಾಗಿ ಸಾಗಿಸಬೇಕಾಯಿತು ಎಂದು ಬಳಕೆದಾರರು ಆರೋಪಿಸಿದ್ದಾರೆ.

“ಮೌತ್ ಕಾ ಮಹಾಕುಂಭ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಬಳಕೆದಾರರು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ ಶವಗಳನ್ನು ಅವರ ಸ್ವಂತ ಮನೆಗೆ ಸಾಗಿಸಲು ಕನಿಷ್ಠ ಒಂದು ಆಂಬ್ಯುಲೆನ್ಸ್ ಕೂಡಾ ಒದಗಿಸಿಲ್ಲ ಎಂದು ಪ್ರತಿಪಾದಿಸಲಾಗಿದೆ. ಆದಾಗ್ಯೂ, ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದು, ಆ ವೀಡಿಯೊ ವರ್ಷಗಳಷ್ಟು ಹಳೆಯದಾಗಿದ್ದು, ನೇಪಾಳದಲ್ಲಿ ಚಿತ್ರೀಕರಿಸಲಾಗಿದೆ ಎಂದು ಕಂಡುಬಂದಿದೆ.

ಅಪರಿಚಿತ ವ್ಯಕ್ತಿಗಳು ಮೂತ್ರಪಿಂಡವನ್ನು ಹೊರತೆಗೆದು ಶವವನ್ನು ನದಿಗೆ ಎಸೆದಿದ್ದಾರೆ ಎಂದು ಪ್ರತಿಪಾದಿಸುವ ವೀಡಿಯೊವನ್ನು ಮತ್ತೊಬ್ಬ ಸಾಮಾಜಿಕ ಮಾಧ್ಯಮ ಖಾತೆದಾರರ ಅಪ್‌ಲೋಡ್ ಮಾಡಿದ್ದಾರೆ ಎಂದು ಅವರ  ವಿರುದ್ಧ ಮೇಳ ಪೊಲೀಸರು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಖಾತೆದಾರರ ಗುರುತುಗಳು ಮತ್ತು ಕುಂಭಮೇಳವನ್ನು ದೂಷಿಸುವ ಹಿಂದಿನ ಅವರ ಉದ್ದೇಶಗಳನ್ನು ಕಂಡುಹಿಡಿಯಲು ಜಂಟಿ ತಂಡವು ಕೆಲಸ ಮಾಡುತ್ತಿದೆ ಎಂದು ಎಸ್‌ಎಸ್‌ಪಿ ದ್ವಿವೇದಿ ಹೇಳಿದರು. ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಮಾಹಿತಿಗಳನ್ನು ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

“ಮೇಳ ಪೊಲೀಸರು ಎಲ್ಲಾ ಪ್ರಕರಣಗಳನ್ನು ಕೂಲಂಕಷವಾಗಿ ತನಿಖೆ ಮಾಡುತ್ತಾರೆ” ಎಂದು ದ್ವಿವೇದಿ ಹೇಳಿದದ್ದಾರೆ. “ಬಸಂತ್ ಪಂಚಮಿಯ ಮೂರನೇ ಅಮೃತ ಸ್ನಾನಕ್ಕೆ ಮುಂಚಿತವಾಗಿ ಈ ನಕಲಿ ವೀಡಿಯೊಗಳನ್ನು ಏಕೆ ಅಪ್‌ಲೋಡ್ ಮಾಡಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಈ ಪ್ರಕರಣಗಳನ್ನು ತೀವ್ರವಾಗಿ ತನಿಖೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...