Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...