Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...