Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...