Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...