Homeಕರ್ನಾಟಕಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ 'ಸಹಯೋಗ್‌ ಪೋರ್ಟಲ್‌' ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿದೆ.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದಾರೆ.

“ಮಾಹಿತಿಯನ್ನು ಎಲ್ಲಾ ಸಂದರ್ಭಗಳಲ್ಲಿಯೂ ನಿಯಂತ್ರಿಸಲಾಗಿದೆ. ಆರಂಭಿಕ ದಿನಗಳಲ್ಲಿ ಸಂದೇಶವಾಹಕರ ಮೂಲಕವಾಗಲಿ, ಅಂಚೆಯ ಮೂಲಕವಾಗಲಿ ಅಥವಾ ಇಂದಿನ ಡಿಜಿಟಲ್ ಯುಗದಲ್ಲಿ ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ವೇದಿಕೆಗಳ ಮೂಲಕವಾಗಲಿ, ಎಲ್ಲಾ ರೀತಿಯ ಮಾಹಿತಿಯನ್ನು ವಿಶ್ವದಾದ್ಯಂತ ಮತ್ತು ಸ್ಥಳೀಯವಾಗಿ ವಿವಿಧ ಆಡಳಿತ ವ್ಯವಸ್ಥೆಗಳಿಂದ ನಿಯಂತ್ರಿಸಲಾಗಿದೆ ಎಂದಿದ್ದಾರೆ.

ಸಂವಿಧಾನದ ವಿಧಿ 19(1)(ಎ) ಅಡಿ ಅರ್ಜಿದಾರರು ಮಂಡಿಸಿದ್ದ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕು ವಿಧಿ 19(2) ಅಡಿ ಕೆಲವು ನಿರ್ಬಂಧಗಳೊಂದಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

“19(1)(ಎ) ವಿಧಿಯು ತನ್ನ ಭರವಸೆಯಲ್ಲಿ ಪ್ರಕಾಶಮಾನವಾಗಿದೆ. ಆದರೆ, ನಾಗರಿಕರಿಗೆ ಮಾತ್ರ ನೀಡಲಾದ ಹಕ್ಕುಗಳ ಸನ್ನದಾಗಿ ಉಳಿದಿದೆ. ನಾಗರಿಕನಲ್ಲದ ಅರ್ಜಿದಾರರು ಅದರ ಅಡಿಯಲ್ಲಿ ಆಶ್ರಯ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

‘ಸಹಯೋಗ್’ ಪೋರ್ಟಲ್ ಎನ್ನುವುದು ನಾಗರಿಕರ ಮತ್ತು ಮಧ್ಯವರ್ತಿಗಳ (ಸಾಮಾಜಿಕ ಮಾಧ್ಯಮ ವೇದಿಕೆಗಳ) ನಡುವಿನ ಸಹಕಾರದ ದೀಪಸ್ತಂಭವಾಗಿದೆ. ಇದು ರಾಜ್ಯವು ಸೈಬರ್ ಅಪರಾಧಗಳ ಹೆಚ್ಚುತ್ತಿರುವ ಬೆದರಿಕೆಯನ್ನು ಎದುರಿಸಲು ರೂಪಿಸಿದ ಒಂದು ಕಾರ್ಯವಿಧಾನವಾಗಿದೆ. ಈ ಪೋರ್ಟಲ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸುವುದು ಎಂದರೆ ಅದರ ಉದ್ದೇಶವನ್ನು ತಪ್ಪಾಗಿ ಅರ್ಥೈಸಿಕೊಳ್ಳುವುದಾಗಿದೆ” ಎಂದು ಹೇಳಿದ್ದಾರೆ.

“ಆಧುನಿಕ ವಿಚಾರಗಳ ಆಡುಂಬೊಲವಾಗಿರುವ ಸಾಮಾಜಿಕ ಮಾಧ್ಯಮವನ್ನು ಅರಾಜಕ ಸ್ವಾತಂತ್ರ್ಯದ ಸ್ಥಿತಿಯಲ್ಲಿ ಬಿಡಲಾಗುವುದಿಲ್ಲ” ಎಂದಿರುವ ನ್ಯಾಯಾಲಯವು, ವಿಷಯದ ನಿಯಂತ್ರಣವು ಘನತೆಯನ್ನು ರಕ್ಷಿಸಲು ಮತ್ತು ಮಹಿಳೆಯರ ವಿರುದ್ಧದ ಅಪರಾಧ ನಿರ್ಬಂಧಿಸಲು ಅಗತ್ಯವಾಗಿದೆ ಎಂದಿದೆ.

ತನ್ನ ಮೂಲಸ್ಥಾನವಾದ ಅಮೆರಿಕಾದಲ್ಲಿ ಎಕ್ಸ್‌ ಕಾರ್ಪ್‌ ನಿಯಂತ್ರಣ ವ್ಯವಸ್ಥೆಗೆ ಒಳಪಟ್ಟಿದೆ. ಅಲ್ಲಿನ ವ್ಯಾಪ್ತಿಯಲ್ಲಿರುವ ಟ್ವೀಟ್‌ ತೆಗೆಯುವ ಕಾನೂನಿನ ಅಡಿ ಅದನ್ನು ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಕೃತ್ಯ ಎಂದು ನಿರ್ಧರಿಸಲಾಗುತ್ತದೆ. ಅದು ಅಲ್ಲಿ ಆದೇಶ ಪಾಲಿಸುತ್ತಿದೆ. ಆದರೆ, ನಮ್ಮ ದೇಶದಲ್ಲಿ ಆ ದೇಶವನ್ನು ಪಾಲಿಸಲು ಎಕ್ಸ್‌ ಕಾರ್ಪ್‌ ನಿರಾಕರಿಸುತ್ತದೆ. ಇದಕ್ಕೆ ಸಾಧಾರವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಮ್ಮ ರಾಷ್ಟ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಬಯಸುವ ಪ್ರತಿಯೊಂದು ವೇದಿಕೆಯು ಸ್ವಾತಂತ್ರ್ಯವನ್ನು ಜವಾಬ್ದಾರಿಯೊಂದಿಗೆ ತೆಗೆದುಕೊಳ್ಳಬೇಕು ಮತ್ತು ಪ್ರವೇಶದ ಸವಲತ್ತು ಅದರೊಂದಿಗೆ ಹೊಣೆಗಾರಿಕೆಯ ಗಂಭೀರ ಕರ್ತವ್ಯವನ್ನು ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಬೇಕು” ಎಂದು ತಿಳಿಸಿದೆ.

ನಿಯಂತ್ರಣವಿಲ್ಲದ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಹೆಸರಿನಲ್ಲಿ ಅನುಮತಿಸಿದರೆ ಅದು ಕಾನೂನುಬಾಹಿರತೆಗೆ ದಾರಿಮಾಡಿಕೊಡುತ್ತದೆ ಎಂದ ನ್ಯಾಯಾಲಯ, ಇದಕ್ಕೆ ವಿರುದ್ಧವಾಗಿ, ನಿಯಂತ್ರಿತ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸುವ್ಯವಸ್ಥೆ ಎರಡನ್ನೂ ಕಾಪಾಡುತ್ತದೆ ಎಂದು ಹೇಳಿದೆ. ಈ ಎರಡೂ ಗುಣಗಳು ಪ್ರಜಾಪ್ರಭುತ್ವದ ಎರಡು ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ಹೇಳಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಗೃಹ ಸಚಿವಾಲಯವು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪರಿಚಯಿಸಿದ ‘ಸಹಯೋಗ್ ಪೋರ್ಟಲ್’, ಸರ್ಕಾರ ಅಥವಾ ಅದರ ಯಾವುದೇ ಏಜೆನ್ಸಿಗಳು ಮಧ್ಯವರ್ತಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಯಾವುದೇ ವಿಷಯವನ್ನು ಮೂರನೇ ವ್ಯಕ್ತಿಯಿಂದ ತೆಗೆದುಹಾಕಲು ಆದೇಶಿಸಲು ಅನುಮತಿಸುತ್ತದೆ. ತೆಗೆದುಹಾಕುವಿಕೆಯ ಆದೇಶವನ್ನು ಪಾಲಿಸಲು ನಿರಾಕರಿಸಿದರೆ ಮಧ್ಯವರ್ತಿಯು ಅಂತಹ ವಿಷಯಕ್ಕೆ ವೈಯಕ್ತಿಕವಾಗಿ ಹೊಣೆಗಾರರಾಗಿರುತ್ತಾರೆ.

ಭಾರತದ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, 2000ರ ಸೆಕ್ಷನ್ 2(1)(w) ಪ್ರಕಾರ, “ಮಧ್ಯವರ್ತಿ” ಎಂದರೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಾಗಿದ್ದು, ಅವರು ಬೇರೊಬ್ಬರ ಪರವಾಗಿ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸ್ವೀಕರಿಸುತ್ತಾರೆ, ಶೇಖರಿಸುತ್ತಾರೆ, ಅಥವಾ ರವಾನಿಸುತ್ತಾರೆ, ಅಥವಾ ಈ ದಾಖಲೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುತ್ತಾರೆ. ಉದಾಹರಣೆಗೆ, ಸಾಮಾಜಿಕ ಮಾಧ್ಯಮ ವೇದಿಕೆಗಳು, ಇ-ಕಾಮರ್ಸ್ ವೇದಿಕೆಗಳು ಮತ್ತು ಟೆಲಿಕಾಂ ಸೇವಾ ಒದಗಿಸುವವರು.

ಸರಳವಾಗಿ ಹೇಳುವುದಾದರೆ, ಮಧ್ಯವರ್ತಿಗಳು ಎಂದರೆ ಇತರರ ಎಲೆಕ್ಟ್ರಾನಿಕ್ ಮಾಹಿತಿಯನ್ನು ನಿರ್ವಹಿಸುವ ಅಥವಾ ಸಂಬಂಧಿತ ಸೇವೆಗಳನ್ನು ನೀಡುವ ವ್ಯಕ್ತಿಗಳು ಅಥವಾ ಕಂಪನಿಗಳು, ಉದಾಹರಣೆಗೆ ಫೇಸ್‌ಬುಕ್, ಅಮೆಜಾನ್, ಅಥವಾ ಏರ್‌ಟೆಲ್‌ನಂತಹ ಟೆಲಿಕಾಂ ಕಂಪನಿಗಳು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...