Homeಸಾಮಾಜಿಕಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

ಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

- Advertisement -
- Advertisement -

ಸಾಮಾಜಿಕ ಜಾಲತಾಣವೆಂಬುದು ಸ್ಯಾಡಿಸ್ಟ್‍ಗಳ ಆಡಂಬೋಲದಂತೆ ಆಗಿಹೋಗಿದೆ! ಇದು ಮಾಹಿತಿ ತಂತ್ರಜ್ಞಾನದ ಘೋರ ದುರಂತವೇ ಸರಿ. ಪರರ ಪಡಿಪಾಟಲು, ಆಸಹಾಯಕತೆ, ನೋವು, ನಷ್ಟ ಅಪಹಾಸ್ಯ ಮಾಡಿ ಟ್ರೋಲಿಸುವ ವಿಕೃತ ಸಂತಾನವೇ ಭಾರತದಲ್ಲಿ ಬೆಳೆದುನಿಂತಿದೆ. ಮಹಾ ಮಾನವತಾವಾದಿ ಧೀಮಂತ ಪತ್ರಕರ್ತೆಯೂ ಆಗಿದ್ದ ಗೌರಿಲಂಕೇಶ್‍ರ ಹತ್ಯೆ ಸಂಭ್ರಮಿಸಿದ್ದ ಕುಹಾಕಿಗಳನ್ನು ಈ ದೇಶದ ಪ್ರಧಾನಿ ಮೋದಿ ಮಹಾತ್ಮನೇ ಜಾಲತಾಣದಲ್ಲಿ ಫಾಲೋ ಮಾಡುತ್ತಾರೆ! ಸಿದ್ದು ಸಿಎಂ ಆಗಿದ್ದಾಗ ಮಗನನ್ನು ಕಳಕೊಂಡ ನೋವಿನಲ್ಲಿದ್ದ ಸಂದರ್ಭವನ್ನು ಸಾಮಾಜಿಕ ಜಾಲತಾಣದಲ್ಲಿ ಕುಳಿತು ಖುಷಿಯಿಂದ ಅನುಭವಿಸಿದವರೂ ಇದ್ದಾರೆ. ಇಂಥ ಗಲೀಜು ಸಂಸ್ಕøತಿಯ ಟ್ರೋಲಿಗರ ಕುಚೋದ್ಯದಿಂದ ಈಚೆಗೆ ಕೇರಳದಲ್ಲಿ ತಲ್ಲಣವೇ ಆಗಿಹೋಗಿದೆ. ವಿನಾಕಾರಣ ಬಡ-ಮುಗ್ಧ ಹುಡುಗಿಯೊಬ್ಬಳು ಘಾಸಿಗೊಂಡಿದ್ದಾಳೆ!
ಆಕೆಯ ಹೆಸರು ಹನಾನ್ ಹಮೀದ್. ಕೇರಳದ ತ್ರಿಶೂರ್‍ನ ಇಪ್ಪತ್ತೊಂದರ ಬಾಲಕಿ. ಬದುಕು ಕಟ್ಟಿಕೊಳ್ಳಲು ಹಗಲಿರುಳೂ ಕಷ್ಟಪಟ್ಟು ದುಡಿಯುತ್ತಲೇ ಕಾಲೇಜಿಗೂ ಹೋಗುತ್ತಿದ್ದಾಳೆ; ಕಾಲೇಜು ಮುಗಿಸಿ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನೂ ಮಾರುತ್ತಾಳೆ. ಆಕೆ ಅವಸರದಲ್ಲೊಮ್ಮೆ ಕಾಲೇಜಿನ ಯೂನಿಫಾರ್ಮ್ ತೊಟ್ಟುಕೊಂಡೇ ಮೀನು ಮಾರಾಟಕ್ಕೆ ಕುಳಿತಿದ್ದಳು. ಇದು ಅದ್ಯಾವುದೋ ಕೀಳು ಅಭಿರುಚಿಯ ಟ್ರೋಲಿಗನ ಕಣ್ಣಿಗೆ ಬಿದ್ದಿದೆ. ಆ ಎವಡಾಸ ಅದ್ಭುತ ಸಂಶೋಧನೆ ಮಾಡಿದವನಂತೆ ಯೂನಿಫಾರ್ಮ್‍ನಲ್ಲಿ ಮೀನು ಮಾರುತ್ತಿದ್ದ ಪಾಪದ ಹುಡುಗಿಯ ಫೋಟೋ, ವೀಡಿಯೋ ಜಾಲತಾಣಕ್ಕೆ ಏರಿಸಿ ಬೀಗಿದ್ದಾನೆ.
ಆತನಂಥದೇ ಗುಣ-ಧರ್ಮದ ಜಾಲತಾಣಿಗರು ಆ ವೀಡಿಯೋ ಅಪಹಾಸ್ಯದಿಂದ ವೈರಲ್ ಮಾಡಿ ತೀಟೆ ತೀರಿಸಿಕೊಂಡಿದ್ದಾರೆ. ಆಕೆ ಮರ್ಯಾದೆಯಿಂದ ಜೀವನೋಪಾಯಕ್ಕೆ ಮಾಡುತ್ತಿದ್ದ ಕೆಲಸವನ್ನು ಆಡಿಕೊಂಡು ಕೇಕೆ ಹಾಕಿದ್ದಾರೆ. “…… ಕಾಲೇಜು ಓದೋದು ಬಿಟ್ಟು ಇದೆಂಥ ಕೆಲ್ಸಾ…….?!” ಎಂದು ಗೇಲಿ ಮಾಡಿದ್ದಾರೆ. ಅಸಹಾಯಕ ಹುಡುಗಿಯೊಬ್ಬಳ ಕಾರ್ಪಣ್ಯದ ಜೀವನಕ್ರಮವನ್ನು ಅಣಕಿಸುತ್ತ ಟ್ರೋಲ್‍ಮಾಡಿ ಮಜಾ ತೆಗೆದುಕೊಳ್ಳುವ ಸಂಗತಿಯಾ? ಮನುಷ್ಯರೂಪದ ಮೃಗಗಳಿಗಿದು ನಾಲ್ಕಾರು ದಿನ ಟೈಮ್‍ಪಾಸ್ ಹಾಸ್ಯವಾಗಿರಬಹುದು. ಆದರೆ ಈ ಅಪಮಾನ-ಅಪನಿಂದನೆಯಿಂದ ಸುದ್ದಿಯಾದ ಪಾಪದ ಹುಡುಗಿಯ ಹಿಂದೊಂದು ಕರುಣಾಜನಕ ಕತೆಯೇ ಇದೆ! ವಯಸ್ಸಿಗೆ ಮೀರಿದ ಸಾಂಸಾರಿಕ ಹೊಣೆ ನಿಭಾಯಿಸುತ್ತ ಊಟ-ನಿದ್ದೆ ಬಿಟ್ಟು ರಾತ್ರಿಹಗಲೆನ್ನದೆ ಬದುಕಲು ಆಕೆ ಸೆಣಸಾಡುತ್ತಿದ್ದಾಳೆ.
ಹನಾನ್ ತ್ರಿಶೂರ್‍ನ ಶ್ರೀಮಂತ ಕುಟುಂಬದ ಕೂಸು. ತಂದೆ ಹಮೀದ್, ತಾಯಿ ಜುಹ್ರಾಬಿ. ಒಬ್ಬ ತಮ್ಮನಿದ್ದಾನೆ. ಚಿಕ್ಕವಳಿದ್ದಾಗ ಆಕೆ ಖುಷಿಖುಷಿಯಾಗೇ ಇದ್ದಳು. ಆಕೆ ಪ್ರೈಮರಿಗೆ ಹೋಗುವಾಗ ಅಪ್ಪ ಇದ್ದಕ್ಕಿದ್ದಂತೆ ವಿಪರೀತ ಹೆಂಡ ಕುಡಿಯಲು ಶುರು ಹಚ್ಚಿಕೊಂಡಿದ್ದಾನೆ. ಅಷ್ಟೇ ಅಲ್ಲ, ದಿನವೂ ಕುಡಿದುಬಂದು ಅಮ್ಮನಿಗೆ ಬಡಿಯುತ್ತಿದ್ದ. ಮನೆಯೆಂಬುದು ರೌರವ ನರಕದಂತಾಗಿಹೋಯಿತು. ಹನಾನ್ ಹೈಸ್ಕೂಲಿಗೆ ಹೋಗುವ ಹೊತ್ತಿಗೆ ಆಕೆಯ ತಂದೆ-ತಾಯಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ತಮ್ಮ ತಂದೆಯೊಂದಿಗಿದ್ದರೆ, ಹನಾನ್ ತಾಯಿ ಜತೆ ಉಳಿದಳು. ತನ್ನ ಮತ್ತು ತಾಯಿಯ ತುತ್ತಿನ ಚೀಲ ತುಂಬಿಸುವ ಜವಾಬ್ದಾರಿ ಹನಾನ್ ಮೇಲೆ ಬಿತ್ತು.
ಆ ನತದೃಷ್ಟ ಹುಡುಗಿ ಧೃತಿಗೆಡಲಿಲ್ಲ ದುಡಿಮೆಯ ದಾರಿ ಹುಡುಕಿದಳು ತಾನು ಶಾಲೆಗೆ ಹೋಗುತ್ತಲೇ ಚಿಕ್ಕ ಮಕ್ಕಳಿಗೆ ಟ್ಯೂಶನ್ ಕೊಡಲಾರಂಭಿಸಿದಳು; ಕರಕುಶಲ ವಸ್ತು, ಕಿವಿಯೋಲೆ ತಯಾರಿಸಿ ಬಂದ ಹಣದಲ್ಲಿ ಜೀವನ ಸಾಗಿಸಹತ್ತಿದಳು. ಕೆಲದಿನದ ಬಳಿಕ ಖಾಸಗಿ ಕಂಪನಿಯೊಂದಕ್ಕೆ ಕಾರ್ಮಿಕಳಾಗಿ ಸೇರಿಕೊಂಡಳು. ಹನಾನ್ ಕಷ್ಟಕ್ಕೆ ಹೆದರಲಿಲ್ಲ. ನೈಟ್‍ಶಿಫ್ಟ್, ಮಾರ್ನಿಂಗ್‍ಶಿಫ್ಟ್ ಅಂತಾ ಹಠದಿಂದ ದುಡಿದಳು. ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಯಂತ್ರಗಳ ವಿಪರೀತ ಶಬ್ದ ಇರುತ್ತಿತ್ತು. ಹೀಗಾಗಿ ಹನಾನ್‍ಗೆ ಶ್ರವಣದೋಷ ಬಾಧಿಸಹತ್ತಿತು. ಹಾಗಾಗಿ ಆ ಕೆಲಸ ಆಕೆ ಅನಿವಾರ್ಯವಾಗಿ ಬಿಡಬೇಕಾಗಿಬಂತು. ಬಿಎಸ್ಸಿ ಓದುತ್ತಿದ್ದ ಹನಾನ್‍ಗೆ ಹೇಗಾದರೂ ಮಾಡಿ ಡಾಕ್ಟರ್ ಆಗಬೇಕೆಂಬ ಹಠ. ಕಂಪನಿ ಕೆಲಸ ಅರಸುತ್ತಲೇ ಇದ್ದಳು.
ಕೆಲವು ದಿನಗಳ ನಂತರ ಬೇರೆ ಕಂಪನಿಯಲ್ಲಿ ಉದ್ಯೋಗ ಸಿಕ್ಕಿತು. ಇದು ತಾಯಿ-ಮಗಳ ಬದುಕು ಸಾಗಿಸಲು ಸಾಕಾಗುತ್ತಿರಲಿಲ್ಲ. ಮೀನು ಮಾರಾಟ ಮಾಡಿದರೆ ಒಂದಿಷ್ಟು ಹೆಚ್ಚುವರಿ ಕಾಸು ಸಂಪಾದಿಸಬಹುದೆಂದು ಆಕೆಗೆ ಹೊಳೆಯಿತು. ಕಾಲೇಜು ಕ್ಲಾಸ್ ಮುಗಿಯುತ್ತಿದ್ದಂತೆಯೇ ಮೀನು ಮಾರ್ಕೆಟ್ಟಿಗೆ ಹೋಗಿ ಮೀನು ಮಾರಾಟ ಮಾಡಲು ಆರಂಭಿಸಿದಳು. ಒಮ್ಮೊಮ್ಮೆ ಬೆಳಗಿನ ಜಾವ 3.30ಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಮೀನು ಖರೀದಿಸಿ ಮಾರಾಟ ಮಾಡುತ್ತಿದ್ದಳು. ನಂತರ ಕಾಲೇಜಿನ ಸಮಯಕ್ಕೆ ಸರಿಯಾಗಿ ಅಲ್ಲಿರುತ್ತಿದ್ದಳು. ಇಂಥದೇ ಒಂದು ದಿನ ಆಕೆ ಮೀನು ಮಾರಲು ಹೋಗಿದ್ದಳು. ಗಡಿಬಿಡಿಯಲ್ಲಿ ಯೂನಿಫಾರ್ಮ್ ತೆಗೆಯಲು ಆಕೆಗೆ ಸಾಧ್ಯವಾಗಿರಲಿಲ್ಲ.
ಆಕೆಯ ಚಿತ್ರ ತೆಗೆದ ಅಧಮ ಮಾನÀವನೊಬ್ಬ ಸಾಮಾಜಿಕ ಮಾಧ್ಯಮಕ್ಕೆ ಟ್ರೋಲ್ ಮಾಡುತ್ತಿದ್ದಂತೆಯೇ ಕೇರಳದಲ್ಲಿ ಅಲ್ಲೋಲಕಲ್ಲೋಲವೇ ಆಯ್ತು. ಈ ಚಿತ್ರ ಶೇರ್ ಮಾಡಿ ಕುಣಿದು ಕುಪ್ಪಳಿಸಿದವರಿಗೆ ಜನ ಉಗಿದರು. ಪರ-ವಿರುದ್ಧ ಅಂತರ್ಜಾಲ ಯುದ್ಧ ನಡೆಯಿತು. ಒಪ್ಪತ್ತು ಗಂಜಿಗಾಗಿ ಹೆಣಗಾಡುತ್ತಿದ್ದ ಹನಾನ್ ದೌರ್ಭಾಗ್ಯವನ್ನು ಜೋಕ್ ಮಾಡಿ ನಕ್ಕ ಟ್ರೋಲಿಗರನ್ನು ಕೇರಳದ ಪಿಣರಾಯಿವಿಜಯನ್ ಸರ್ಕಾರ ಛೀಮಾರಿ ಹಾಕಿತು. ಇಷ್ಟಾದರೂ ನೈತಿಕ ಸ್ಥೈರ್ಯದ ಹನಾನ್ ಅಂಜಲಿಲ್ಲ, ಅಳುಕಲಿಲ್ಲ ತನ್ನ ಪಾಡಿಗೆ ತಾನು ಕಾಲೇಜು, ಮೀನು ಮಾರಾಟ, ಕಂಪನಿ ಚಾಕರಿ, ತಾಯಿಯ ದೇಖರೇಖೆಯ ಜೀವನ ಸಂಗ್ರಾಮದಲ್ಲಿ ತೊಡಗಿಕೊಂಡಿದ್ದಳು. ಇದು ಧೂರ್ತರಿಗೆ ನೋಡಲಾಗಲಿಲ್ಲ ಇದು ಹನಾನ್‍ನ ಪ್ರಚಾರದ ತಂತ್ರಗಾರಿ ಎಂದು ಆಲಾಪಿಸಿದರು.
ಇದು ಕೇರಳದಲ್ಲಿ ದೊಡ್ಡ ಸುದ್ದಿ ಸದ್ದು ಮಾಡಿತು. ಸೆಲಿಬ್ರಿಟಿಗಳು ಹನಾನ್ ಪರ ನಿಂತರು. ಸಾಮಾಜಿಕ ಕಾರ್ಯಕರ್ತರು ಸಹಾಯಕ್ಕೆ ಬಂದರು. ಆಕೆಗೆ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶವೂ ಅರಸಿ ಬಂದಿದೆ. ಮೊನ್ನೆ ಹನಾನ್ ತಿರುವನಂತಪುರಂನ ಓಣಮ್, ಬಕ್ರೀದ್ ಖಾದಿ ಎಕ್ಸ್‍ಪೋನಲ್ಲಿ ‘ನಡಿಗೆ’ ಹಾಕಿದ್ದಾಳೆ. ತನ್ಮೂಲಕ ಕುಹಕದ ಕೊಳಕು ಟ್ರೋಲಿಗರಿಗೆ ಕೇರ್ ಮಾಡುವ ಪೈಕಿ ತಾನಲ್ಲವೆಂದು ತೋರಿಸಿಕೊಂಡಿದ್ದಾಳೆ. ಈ ಇಡೀ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕುಳಿತು ಅಮಾಯಕರ ಬದುಕಲ್ಲಿ ಆಟ ಆಡೋರಿಗೆ ಪಾಠ ಕಲಿಸಬೇಕಾದ ಅನಿವಾರ್ಯತೆಯ ಎಚ್ಚರಿಕೆ ಕೊಟ್ಟಿದೆ!

-ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...