Homeಸಾಮಾಜಿಕಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

ಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

- Advertisement -
- Advertisement -

ಸಾಮಾಜಿಕ ಜಾಲತಾಣವೆಂಬುದು ಸ್ಯಾಡಿಸ್ಟ್‍ಗಳ ಆಡಂಬೋಲದಂತೆ ಆಗಿಹೋಗಿದೆ! ಇದು ಮಾಹಿತಿ ತಂತ್ರಜ್ಞಾನದ ಘೋರ ದುರಂತವೇ ಸರಿ. ಪರರ ಪಡಿಪಾಟಲು, ಆಸಹಾಯಕತೆ, ನೋವು, ನಷ್ಟ ಅಪಹಾಸ್ಯ ಮಾಡಿ ಟ್ರೋಲಿಸುವ ವಿಕೃತ ಸಂತಾನವೇ ಭಾರತದಲ್ಲಿ ಬೆಳೆದುನಿಂತಿದೆ. ಮಹಾ ಮಾನವತಾವಾದಿ ಧೀಮಂತ ಪತ್ರಕರ್ತೆಯೂ ಆಗಿದ್ದ ಗೌರಿಲಂಕೇಶ್‍ರ ಹತ್ಯೆ ಸಂಭ್ರಮಿಸಿದ್ದ ಕುಹಾಕಿಗಳನ್ನು ಈ ದೇಶದ ಪ್ರಧಾನಿ ಮೋದಿ ಮಹಾತ್ಮನೇ ಜಾಲತಾಣದಲ್ಲಿ ಫಾಲೋ ಮಾಡುತ್ತಾರೆ! ಸಿದ್ದು ಸಿಎಂ ಆಗಿದ್ದಾಗ ಮಗನನ್ನು ಕಳಕೊಂಡ ನೋವಿನಲ್ಲಿದ್ದ ಸಂದರ್ಭವನ್ನು ಸಾಮಾಜಿಕ ಜಾಲತಾಣದಲ್ಲಿ ಕುಳಿತು ಖುಷಿಯಿಂದ ಅನುಭವಿಸಿದವರೂ ಇದ್ದಾರೆ. ಇಂಥ ಗಲೀಜು ಸಂಸ್ಕøತಿಯ ಟ್ರೋಲಿಗರ ಕುಚೋದ್ಯದಿಂದ ಈಚೆಗೆ ಕೇರಳದಲ್ಲಿ ತಲ್ಲಣವೇ ಆಗಿಹೋಗಿದೆ. ವಿನಾಕಾರಣ ಬಡ-ಮುಗ್ಧ ಹುಡುಗಿಯೊಬ್ಬಳು ಘಾಸಿಗೊಂಡಿದ್ದಾಳೆ!
ಆಕೆಯ ಹೆಸರು ಹನಾನ್ ಹಮೀದ್. ಕೇರಳದ ತ್ರಿಶೂರ್‍ನ ಇಪ್ಪತ್ತೊಂದರ ಬಾಲಕಿ. ಬದುಕು ಕಟ್ಟಿಕೊಳ್ಳಲು ಹಗಲಿರುಳೂ ಕಷ್ಟಪಟ್ಟು ದುಡಿಯುತ್ತಲೇ ಕಾಲೇಜಿಗೂ ಹೋಗುತ್ತಿದ್ದಾಳೆ; ಕಾಲೇಜು ಮುಗಿಸಿ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನೂ ಮಾರುತ್ತಾಳೆ. ಆಕೆ ಅವಸರದಲ್ಲೊಮ್ಮೆ ಕಾಲೇಜಿನ ಯೂನಿಫಾರ್ಮ್ ತೊಟ್ಟುಕೊಂಡೇ ಮೀನು ಮಾರಾಟಕ್ಕೆ ಕುಳಿತಿದ್ದಳು. ಇದು ಅದ್ಯಾವುದೋ ಕೀಳು ಅಭಿರುಚಿಯ ಟ್ರೋಲಿಗನ ಕಣ್ಣಿಗೆ ಬಿದ್ದಿದೆ. ಆ ಎವಡಾಸ ಅದ್ಭುತ ಸಂಶೋಧನೆ ಮಾಡಿದವನಂತೆ ಯೂನಿಫಾರ್ಮ್‍ನಲ್ಲಿ ಮೀನು ಮಾರುತ್ತಿದ್ದ ಪಾಪದ ಹುಡುಗಿಯ ಫೋಟೋ, ವೀಡಿಯೋ ಜಾಲತಾಣಕ್ಕೆ ಏರಿಸಿ ಬೀಗಿದ್ದಾನೆ.
ಆತನಂಥದೇ ಗುಣ-ಧರ್ಮದ ಜಾಲತಾಣಿಗರು ಆ ವೀಡಿಯೋ ಅಪಹಾಸ್ಯದಿಂದ ವೈರಲ್ ಮಾಡಿ ತೀಟೆ ತೀರಿಸಿಕೊಂಡಿದ್ದಾರೆ. ಆಕೆ ಮರ್ಯಾದೆಯಿಂದ ಜೀವನೋಪಾಯಕ್ಕೆ ಮಾಡುತ್ತಿದ್ದ ಕೆಲಸವನ್ನು ಆಡಿಕೊಂಡು ಕೇಕೆ ಹಾಕಿದ್ದಾರೆ. “…… ಕಾಲೇಜು ಓದೋದು ಬಿಟ್ಟು ಇದೆಂಥ ಕೆಲ್ಸಾ…….?!” ಎಂದು ಗೇಲಿ ಮಾಡಿದ್ದಾರೆ. ಅಸಹಾಯಕ ಹುಡುಗಿಯೊಬ್ಬಳ ಕಾರ್ಪಣ್ಯದ ಜೀವನಕ್ರಮವನ್ನು ಅಣಕಿಸುತ್ತ ಟ್ರೋಲ್‍ಮಾಡಿ ಮಜಾ ತೆಗೆದುಕೊಳ್ಳುವ ಸಂಗತಿಯಾ? ಮನುಷ್ಯರೂಪದ ಮೃಗಗಳಿಗಿದು ನಾಲ್ಕಾರು ದಿನ ಟೈಮ್‍ಪಾಸ್ ಹಾಸ್ಯವಾಗಿರಬಹುದು. ಆದರೆ ಈ ಅಪಮಾನ-ಅಪನಿಂದನೆಯಿಂದ ಸುದ್ದಿಯಾದ ಪಾಪದ ಹುಡುಗಿಯ ಹಿಂದೊಂದು ಕರುಣಾಜನಕ ಕತೆಯೇ ಇದೆ! ವಯಸ್ಸಿಗೆ ಮೀರಿದ ಸಾಂಸಾರಿಕ ಹೊಣೆ ನಿಭಾಯಿಸುತ್ತ ಊಟ-ನಿದ್ದೆ ಬಿಟ್ಟು ರಾತ್ರಿಹಗಲೆನ್ನದೆ ಬದುಕಲು ಆಕೆ ಸೆಣಸಾಡುತ್ತಿದ್ದಾಳೆ.
ಹನಾನ್ ತ್ರಿಶೂರ್‍ನ ಶ್ರೀಮಂತ ಕುಟುಂಬದ ಕೂಸು. ತಂದೆ ಹಮೀದ್, ತಾಯಿ ಜುಹ್ರಾಬಿ. ಒಬ್ಬ ತಮ್ಮನಿದ್ದಾನೆ. ಚಿಕ್ಕವಳಿದ್ದಾಗ ಆಕೆ ಖುಷಿಖುಷಿಯಾಗೇ ಇದ್ದಳು. ಆಕೆ ಪ್ರೈಮರಿಗೆ ಹೋಗುವಾಗ ಅಪ್ಪ ಇದ್ದಕ್ಕಿದ್ದಂತೆ ವಿಪರೀತ ಹೆಂಡ ಕುಡಿಯಲು ಶುರು ಹಚ್ಚಿಕೊಂಡಿದ್ದಾನೆ. ಅಷ್ಟೇ ಅಲ್ಲ, ದಿನವೂ ಕುಡಿದುಬಂದು ಅಮ್ಮನಿಗೆ ಬಡಿಯುತ್ತಿದ್ದ. ಮನೆಯೆಂಬುದು ರೌರವ ನರಕದಂತಾಗಿಹೋಯಿತು. ಹನಾನ್ ಹೈಸ್ಕೂಲಿಗೆ ಹೋಗುವ ಹೊತ್ತಿಗೆ ಆಕೆಯ ತಂದೆ-ತಾಯಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ತಮ್ಮ ತಂದೆಯೊಂದಿಗಿದ್ದರೆ, ಹನಾನ್ ತಾಯಿ ಜತೆ ಉಳಿದಳು. ತನ್ನ ಮತ್ತು ತಾಯಿಯ ತುತ್ತಿನ ಚೀಲ ತುಂಬಿಸುವ ಜವಾಬ್ದಾರಿ ಹನಾನ್ ಮೇಲೆ ಬಿತ್ತು.
ಆ ನತದೃಷ್ಟ ಹುಡುಗಿ ಧೃತಿಗೆಡಲಿಲ್ಲ ದುಡಿಮೆಯ ದಾರಿ ಹುಡುಕಿದಳು ತಾನು ಶಾಲೆಗೆ ಹೋಗುತ್ತಲೇ ಚಿಕ್ಕ ಮಕ್ಕಳಿಗೆ ಟ್ಯೂಶನ್ ಕೊಡಲಾರಂಭಿಸಿದಳು; ಕರಕುಶಲ ವಸ್ತು, ಕಿವಿಯೋಲೆ ತಯಾರಿಸಿ ಬಂದ ಹಣದಲ್ಲಿ ಜೀವನ ಸಾಗಿಸಹತ್ತಿದಳು. ಕೆಲದಿನದ ಬಳಿಕ ಖಾಸಗಿ ಕಂಪನಿಯೊಂದಕ್ಕೆ ಕಾರ್ಮಿಕಳಾಗಿ ಸೇರಿಕೊಂಡಳು. ಹನಾನ್ ಕಷ್ಟಕ್ಕೆ ಹೆದರಲಿಲ್ಲ. ನೈಟ್‍ಶಿಫ್ಟ್, ಮಾರ್ನಿಂಗ್‍ಶಿಫ್ಟ್ ಅಂತಾ ಹಠದಿಂದ ದುಡಿದಳು. ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಯಂತ್ರಗಳ ವಿಪರೀತ ಶಬ್ದ ಇರುತ್ತಿತ್ತು. ಹೀಗಾಗಿ ಹನಾನ್‍ಗೆ ಶ್ರವಣದೋಷ ಬಾಧಿಸಹತ್ತಿತು. ಹಾಗಾಗಿ ಆ ಕೆಲಸ ಆಕೆ ಅನಿವಾರ್ಯವಾಗಿ ಬಿಡಬೇಕಾಗಿಬಂತು. ಬಿಎಸ್ಸಿ ಓದುತ್ತಿದ್ದ ಹನಾನ್‍ಗೆ ಹೇಗಾದರೂ ಮಾಡಿ ಡಾಕ್ಟರ್ ಆಗಬೇಕೆಂಬ ಹಠ. ಕಂಪನಿ ಕೆಲಸ ಅರಸುತ್ತಲೇ ಇದ್ದಳು.
ಕೆಲವು ದಿನಗಳ ನಂತರ ಬೇರೆ ಕಂಪನಿಯಲ್ಲಿ ಉದ್ಯೋಗ ಸಿಕ್ಕಿತು. ಇದು ತಾಯಿ-ಮಗಳ ಬದುಕು ಸಾಗಿಸಲು ಸಾಕಾಗುತ್ತಿರಲಿಲ್ಲ. ಮೀನು ಮಾರಾಟ ಮಾಡಿದರೆ ಒಂದಿಷ್ಟು ಹೆಚ್ಚುವರಿ ಕಾಸು ಸಂಪಾದಿಸಬಹುದೆಂದು ಆಕೆಗೆ ಹೊಳೆಯಿತು. ಕಾಲೇಜು ಕ್ಲಾಸ್ ಮುಗಿಯುತ್ತಿದ್ದಂತೆಯೇ ಮೀನು ಮಾರ್ಕೆಟ್ಟಿಗೆ ಹೋಗಿ ಮೀನು ಮಾರಾಟ ಮಾಡಲು ಆರಂಭಿಸಿದಳು. ಒಮ್ಮೊಮ್ಮೆ ಬೆಳಗಿನ ಜಾವ 3.30ಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಮೀನು ಖರೀದಿಸಿ ಮಾರಾಟ ಮಾಡುತ್ತಿದ್ದಳು. ನಂತರ ಕಾಲೇಜಿನ ಸಮಯಕ್ಕೆ ಸರಿಯಾಗಿ ಅಲ್ಲಿರುತ್ತಿದ್ದಳು. ಇಂಥದೇ ಒಂದು ದಿನ ಆಕೆ ಮೀನು ಮಾರಲು ಹೋಗಿದ್ದಳು. ಗಡಿಬಿಡಿಯಲ್ಲಿ ಯೂನಿಫಾರ್ಮ್ ತೆಗೆಯಲು ಆಕೆಗೆ ಸಾಧ್ಯವಾಗಿರಲಿಲ್ಲ.
ಆಕೆಯ ಚಿತ್ರ ತೆಗೆದ ಅಧಮ ಮಾನÀವನೊಬ್ಬ ಸಾಮಾಜಿಕ ಮಾಧ್ಯಮಕ್ಕೆ ಟ್ರೋಲ್ ಮಾಡುತ್ತಿದ್ದಂತೆಯೇ ಕೇರಳದಲ್ಲಿ ಅಲ್ಲೋಲಕಲ್ಲೋಲವೇ ಆಯ್ತು. ಈ ಚಿತ್ರ ಶೇರ್ ಮಾಡಿ ಕುಣಿದು ಕುಪ್ಪಳಿಸಿದವರಿಗೆ ಜನ ಉಗಿದರು. ಪರ-ವಿರುದ್ಧ ಅಂತರ್ಜಾಲ ಯುದ್ಧ ನಡೆಯಿತು. ಒಪ್ಪತ್ತು ಗಂಜಿಗಾಗಿ ಹೆಣಗಾಡುತ್ತಿದ್ದ ಹನಾನ್ ದೌರ್ಭಾಗ್ಯವನ್ನು ಜೋಕ್ ಮಾಡಿ ನಕ್ಕ ಟ್ರೋಲಿಗರನ್ನು ಕೇರಳದ ಪಿಣರಾಯಿವಿಜಯನ್ ಸರ್ಕಾರ ಛೀಮಾರಿ ಹಾಕಿತು. ಇಷ್ಟಾದರೂ ನೈತಿಕ ಸ್ಥೈರ್ಯದ ಹನಾನ್ ಅಂಜಲಿಲ್ಲ, ಅಳುಕಲಿಲ್ಲ ತನ್ನ ಪಾಡಿಗೆ ತಾನು ಕಾಲೇಜು, ಮೀನು ಮಾರಾಟ, ಕಂಪನಿ ಚಾಕರಿ, ತಾಯಿಯ ದೇಖರೇಖೆಯ ಜೀವನ ಸಂಗ್ರಾಮದಲ್ಲಿ ತೊಡಗಿಕೊಂಡಿದ್ದಳು. ಇದು ಧೂರ್ತರಿಗೆ ನೋಡಲಾಗಲಿಲ್ಲ ಇದು ಹನಾನ್‍ನ ಪ್ರಚಾರದ ತಂತ್ರಗಾರಿ ಎಂದು ಆಲಾಪಿಸಿದರು.
ಇದು ಕೇರಳದಲ್ಲಿ ದೊಡ್ಡ ಸುದ್ದಿ ಸದ್ದು ಮಾಡಿತು. ಸೆಲಿಬ್ರಿಟಿಗಳು ಹನಾನ್ ಪರ ನಿಂತರು. ಸಾಮಾಜಿಕ ಕಾರ್ಯಕರ್ತರು ಸಹಾಯಕ್ಕೆ ಬಂದರು. ಆಕೆಗೆ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶವೂ ಅರಸಿ ಬಂದಿದೆ. ಮೊನ್ನೆ ಹನಾನ್ ತಿರುವನಂತಪುರಂನ ಓಣಮ್, ಬಕ್ರೀದ್ ಖಾದಿ ಎಕ್ಸ್‍ಪೋನಲ್ಲಿ ‘ನಡಿಗೆ’ ಹಾಕಿದ್ದಾಳೆ. ತನ್ಮೂಲಕ ಕುಹಕದ ಕೊಳಕು ಟ್ರೋಲಿಗರಿಗೆ ಕೇರ್ ಮಾಡುವ ಪೈಕಿ ತಾನಲ್ಲವೆಂದು ತೋರಿಸಿಕೊಂಡಿದ್ದಾಳೆ. ಈ ಇಡೀ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕುಳಿತು ಅಮಾಯಕರ ಬದುಕಲ್ಲಿ ಆಟ ಆಡೋರಿಗೆ ಪಾಠ ಕಲಿಸಬೇಕಾದ ಅನಿವಾರ್ಯತೆಯ ಎಚ್ಚರಿಕೆ ಕೊಟ್ಟಿದೆ!

-ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...