Homeಸಾಮಾಜಿಕಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

ಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

- Advertisement -
- Advertisement -

ಸಾಮಾಜಿಕ ಜಾಲತಾಣವೆಂಬುದು ಸ್ಯಾಡಿಸ್ಟ್‍ಗಳ ಆಡಂಬೋಲದಂತೆ ಆಗಿಹೋಗಿದೆ! ಇದು ಮಾಹಿತಿ ತಂತ್ರಜ್ಞಾನದ ಘೋರ ದುರಂತವೇ ಸರಿ. ಪರರ ಪಡಿಪಾಟಲು, ಆಸಹಾಯಕತೆ, ನೋವು, ನಷ್ಟ ಅಪಹಾಸ್ಯ ಮಾಡಿ ಟ್ರೋಲಿಸುವ ವಿಕೃತ ಸಂತಾನವೇ ಭಾರತದಲ್ಲಿ ಬೆಳೆದುನಿಂತಿದೆ. ಮಹಾ ಮಾನವತಾವಾದಿ ಧೀಮಂತ ಪತ್ರಕರ್ತೆಯೂ ಆಗಿದ್ದ ಗೌರಿಲಂಕೇಶ್‍ರ ಹತ್ಯೆ ಸಂಭ್ರಮಿಸಿದ್ದ ಕುಹಾಕಿಗಳನ್ನು ಈ ದೇಶದ ಪ್ರಧಾನಿ ಮೋದಿ ಮಹಾತ್ಮನೇ ಜಾಲತಾಣದಲ್ಲಿ ಫಾಲೋ ಮಾಡುತ್ತಾರೆ! ಸಿದ್ದು ಸಿಎಂ ಆಗಿದ್ದಾಗ ಮಗನನ್ನು ಕಳಕೊಂಡ ನೋವಿನಲ್ಲಿದ್ದ ಸಂದರ್ಭವನ್ನು ಸಾಮಾಜಿಕ ಜಾಲತಾಣದಲ್ಲಿ ಕುಳಿತು ಖುಷಿಯಿಂದ ಅನುಭವಿಸಿದವರೂ ಇದ್ದಾರೆ. ಇಂಥ ಗಲೀಜು ಸಂಸ್ಕøತಿಯ ಟ್ರೋಲಿಗರ ಕುಚೋದ್ಯದಿಂದ ಈಚೆಗೆ ಕೇರಳದಲ್ಲಿ ತಲ್ಲಣವೇ ಆಗಿಹೋಗಿದೆ. ವಿನಾಕಾರಣ ಬಡ-ಮುಗ್ಧ ಹುಡುಗಿಯೊಬ್ಬಳು ಘಾಸಿಗೊಂಡಿದ್ದಾಳೆ!
ಆಕೆಯ ಹೆಸರು ಹನಾನ್ ಹಮೀದ್. ಕೇರಳದ ತ್ರಿಶೂರ್‍ನ ಇಪ್ಪತ್ತೊಂದರ ಬಾಲಕಿ. ಬದುಕು ಕಟ್ಟಿಕೊಳ್ಳಲು ಹಗಲಿರುಳೂ ಕಷ್ಟಪಟ್ಟು ದುಡಿಯುತ್ತಲೇ ಕಾಲೇಜಿಗೂ ಹೋಗುತ್ತಿದ್ದಾಳೆ; ಕಾಲೇಜು ಮುಗಿಸಿ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನೂ ಮಾರುತ್ತಾಳೆ. ಆಕೆ ಅವಸರದಲ್ಲೊಮ್ಮೆ ಕಾಲೇಜಿನ ಯೂನಿಫಾರ್ಮ್ ತೊಟ್ಟುಕೊಂಡೇ ಮೀನು ಮಾರಾಟಕ್ಕೆ ಕುಳಿತಿದ್ದಳು. ಇದು ಅದ್ಯಾವುದೋ ಕೀಳು ಅಭಿರುಚಿಯ ಟ್ರೋಲಿಗನ ಕಣ್ಣಿಗೆ ಬಿದ್ದಿದೆ. ಆ ಎವಡಾಸ ಅದ್ಭುತ ಸಂಶೋಧನೆ ಮಾಡಿದವನಂತೆ ಯೂನಿಫಾರ್ಮ್‍ನಲ್ಲಿ ಮೀನು ಮಾರುತ್ತಿದ್ದ ಪಾಪದ ಹುಡುಗಿಯ ಫೋಟೋ, ವೀಡಿಯೋ ಜಾಲತಾಣಕ್ಕೆ ಏರಿಸಿ ಬೀಗಿದ್ದಾನೆ.
ಆತನಂಥದೇ ಗುಣ-ಧರ್ಮದ ಜಾಲತಾಣಿಗರು ಆ ವೀಡಿಯೋ ಅಪಹಾಸ್ಯದಿಂದ ವೈರಲ್ ಮಾಡಿ ತೀಟೆ ತೀರಿಸಿಕೊಂಡಿದ್ದಾರೆ. ಆಕೆ ಮರ್ಯಾದೆಯಿಂದ ಜೀವನೋಪಾಯಕ್ಕೆ ಮಾಡುತ್ತಿದ್ದ ಕೆಲಸವನ್ನು ಆಡಿಕೊಂಡು ಕೇಕೆ ಹಾಕಿದ್ದಾರೆ. “…… ಕಾಲೇಜು ಓದೋದು ಬಿಟ್ಟು ಇದೆಂಥ ಕೆಲ್ಸಾ…….?!” ಎಂದು ಗೇಲಿ ಮಾಡಿದ್ದಾರೆ. ಅಸಹಾಯಕ ಹುಡುಗಿಯೊಬ್ಬಳ ಕಾರ್ಪಣ್ಯದ ಜೀವನಕ್ರಮವನ್ನು ಅಣಕಿಸುತ್ತ ಟ್ರೋಲ್‍ಮಾಡಿ ಮಜಾ ತೆಗೆದುಕೊಳ್ಳುವ ಸಂಗತಿಯಾ? ಮನುಷ್ಯರೂಪದ ಮೃಗಗಳಿಗಿದು ನಾಲ್ಕಾರು ದಿನ ಟೈಮ್‍ಪಾಸ್ ಹಾಸ್ಯವಾಗಿರಬಹುದು. ಆದರೆ ಈ ಅಪಮಾನ-ಅಪನಿಂದನೆಯಿಂದ ಸುದ್ದಿಯಾದ ಪಾಪದ ಹುಡುಗಿಯ ಹಿಂದೊಂದು ಕರುಣಾಜನಕ ಕತೆಯೇ ಇದೆ! ವಯಸ್ಸಿಗೆ ಮೀರಿದ ಸಾಂಸಾರಿಕ ಹೊಣೆ ನಿಭಾಯಿಸುತ್ತ ಊಟ-ನಿದ್ದೆ ಬಿಟ್ಟು ರಾತ್ರಿಹಗಲೆನ್ನದೆ ಬದುಕಲು ಆಕೆ ಸೆಣಸಾಡುತ್ತಿದ್ದಾಳೆ.
ಹನಾನ್ ತ್ರಿಶೂರ್‍ನ ಶ್ರೀಮಂತ ಕುಟುಂಬದ ಕೂಸು. ತಂದೆ ಹಮೀದ್, ತಾಯಿ ಜುಹ್ರಾಬಿ. ಒಬ್ಬ ತಮ್ಮನಿದ್ದಾನೆ. ಚಿಕ್ಕವಳಿದ್ದಾಗ ಆಕೆ ಖುಷಿಖುಷಿಯಾಗೇ ಇದ್ದಳು. ಆಕೆ ಪ್ರೈಮರಿಗೆ ಹೋಗುವಾಗ ಅಪ್ಪ ಇದ್ದಕ್ಕಿದ್ದಂತೆ ವಿಪರೀತ ಹೆಂಡ ಕುಡಿಯಲು ಶುರು ಹಚ್ಚಿಕೊಂಡಿದ್ದಾನೆ. ಅಷ್ಟೇ ಅಲ್ಲ, ದಿನವೂ ಕುಡಿದುಬಂದು ಅಮ್ಮನಿಗೆ ಬಡಿಯುತ್ತಿದ್ದ. ಮನೆಯೆಂಬುದು ರೌರವ ನರಕದಂತಾಗಿಹೋಯಿತು. ಹನಾನ್ ಹೈಸ್ಕೂಲಿಗೆ ಹೋಗುವ ಹೊತ್ತಿಗೆ ಆಕೆಯ ತಂದೆ-ತಾಯಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ತಮ್ಮ ತಂದೆಯೊಂದಿಗಿದ್ದರೆ, ಹನಾನ್ ತಾಯಿ ಜತೆ ಉಳಿದಳು. ತನ್ನ ಮತ್ತು ತಾಯಿಯ ತುತ್ತಿನ ಚೀಲ ತುಂಬಿಸುವ ಜವಾಬ್ದಾರಿ ಹನಾನ್ ಮೇಲೆ ಬಿತ್ತು.
ಆ ನತದೃಷ್ಟ ಹುಡುಗಿ ಧೃತಿಗೆಡಲಿಲ್ಲ ದುಡಿಮೆಯ ದಾರಿ ಹುಡುಕಿದಳು ತಾನು ಶಾಲೆಗೆ ಹೋಗುತ್ತಲೇ ಚಿಕ್ಕ ಮಕ್ಕಳಿಗೆ ಟ್ಯೂಶನ್ ಕೊಡಲಾರಂಭಿಸಿದಳು; ಕರಕುಶಲ ವಸ್ತು, ಕಿವಿಯೋಲೆ ತಯಾರಿಸಿ ಬಂದ ಹಣದಲ್ಲಿ ಜೀವನ ಸಾಗಿಸಹತ್ತಿದಳು. ಕೆಲದಿನದ ಬಳಿಕ ಖಾಸಗಿ ಕಂಪನಿಯೊಂದಕ್ಕೆ ಕಾರ್ಮಿಕಳಾಗಿ ಸೇರಿಕೊಂಡಳು. ಹನಾನ್ ಕಷ್ಟಕ್ಕೆ ಹೆದರಲಿಲ್ಲ. ನೈಟ್‍ಶಿಫ್ಟ್, ಮಾರ್ನಿಂಗ್‍ಶಿಫ್ಟ್ ಅಂತಾ ಹಠದಿಂದ ದುಡಿದಳು. ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಯಂತ್ರಗಳ ವಿಪರೀತ ಶಬ್ದ ಇರುತ್ತಿತ್ತು. ಹೀಗಾಗಿ ಹನಾನ್‍ಗೆ ಶ್ರವಣದೋಷ ಬಾಧಿಸಹತ್ತಿತು. ಹಾಗಾಗಿ ಆ ಕೆಲಸ ಆಕೆ ಅನಿವಾರ್ಯವಾಗಿ ಬಿಡಬೇಕಾಗಿಬಂತು. ಬಿಎಸ್ಸಿ ಓದುತ್ತಿದ್ದ ಹನಾನ್‍ಗೆ ಹೇಗಾದರೂ ಮಾಡಿ ಡಾಕ್ಟರ್ ಆಗಬೇಕೆಂಬ ಹಠ. ಕಂಪನಿ ಕೆಲಸ ಅರಸುತ್ತಲೇ ಇದ್ದಳು.
ಕೆಲವು ದಿನಗಳ ನಂತರ ಬೇರೆ ಕಂಪನಿಯಲ್ಲಿ ಉದ್ಯೋಗ ಸಿಕ್ಕಿತು. ಇದು ತಾಯಿ-ಮಗಳ ಬದುಕು ಸಾಗಿಸಲು ಸಾಕಾಗುತ್ತಿರಲಿಲ್ಲ. ಮೀನು ಮಾರಾಟ ಮಾಡಿದರೆ ಒಂದಿಷ್ಟು ಹೆಚ್ಚುವರಿ ಕಾಸು ಸಂಪಾದಿಸಬಹುದೆಂದು ಆಕೆಗೆ ಹೊಳೆಯಿತು. ಕಾಲೇಜು ಕ್ಲಾಸ್ ಮುಗಿಯುತ್ತಿದ್ದಂತೆಯೇ ಮೀನು ಮಾರ್ಕೆಟ್ಟಿಗೆ ಹೋಗಿ ಮೀನು ಮಾರಾಟ ಮಾಡಲು ಆರಂಭಿಸಿದಳು. ಒಮ್ಮೊಮ್ಮೆ ಬೆಳಗಿನ ಜಾವ 3.30ಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಮೀನು ಖರೀದಿಸಿ ಮಾರಾಟ ಮಾಡುತ್ತಿದ್ದಳು. ನಂತರ ಕಾಲೇಜಿನ ಸಮಯಕ್ಕೆ ಸರಿಯಾಗಿ ಅಲ್ಲಿರುತ್ತಿದ್ದಳು. ಇಂಥದೇ ಒಂದು ದಿನ ಆಕೆ ಮೀನು ಮಾರಲು ಹೋಗಿದ್ದಳು. ಗಡಿಬಿಡಿಯಲ್ಲಿ ಯೂನಿಫಾರ್ಮ್ ತೆಗೆಯಲು ಆಕೆಗೆ ಸಾಧ್ಯವಾಗಿರಲಿಲ್ಲ.
ಆಕೆಯ ಚಿತ್ರ ತೆಗೆದ ಅಧಮ ಮಾನÀವನೊಬ್ಬ ಸಾಮಾಜಿಕ ಮಾಧ್ಯಮಕ್ಕೆ ಟ್ರೋಲ್ ಮಾಡುತ್ತಿದ್ದಂತೆಯೇ ಕೇರಳದಲ್ಲಿ ಅಲ್ಲೋಲಕಲ್ಲೋಲವೇ ಆಯ್ತು. ಈ ಚಿತ್ರ ಶೇರ್ ಮಾಡಿ ಕುಣಿದು ಕುಪ್ಪಳಿಸಿದವರಿಗೆ ಜನ ಉಗಿದರು. ಪರ-ವಿರುದ್ಧ ಅಂತರ್ಜಾಲ ಯುದ್ಧ ನಡೆಯಿತು. ಒಪ್ಪತ್ತು ಗಂಜಿಗಾಗಿ ಹೆಣಗಾಡುತ್ತಿದ್ದ ಹನಾನ್ ದೌರ್ಭಾಗ್ಯವನ್ನು ಜೋಕ್ ಮಾಡಿ ನಕ್ಕ ಟ್ರೋಲಿಗರನ್ನು ಕೇರಳದ ಪಿಣರಾಯಿವಿಜಯನ್ ಸರ್ಕಾರ ಛೀಮಾರಿ ಹಾಕಿತು. ಇಷ್ಟಾದರೂ ನೈತಿಕ ಸ್ಥೈರ್ಯದ ಹನಾನ್ ಅಂಜಲಿಲ್ಲ, ಅಳುಕಲಿಲ್ಲ ತನ್ನ ಪಾಡಿಗೆ ತಾನು ಕಾಲೇಜು, ಮೀನು ಮಾರಾಟ, ಕಂಪನಿ ಚಾಕರಿ, ತಾಯಿಯ ದೇಖರೇಖೆಯ ಜೀವನ ಸಂಗ್ರಾಮದಲ್ಲಿ ತೊಡಗಿಕೊಂಡಿದ್ದಳು. ಇದು ಧೂರ್ತರಿಗೆ ನೋಡಲಾಗಲಿಲ್ಲ ಇದು ಹನಾನ್‍ನ ಪ್ರಚಾರದ ತಂತ್ರಗಾರಿ ಎಂದು ಆಲಾಪಿಸಿದರು.
ಇದು ಕೇರಳದಲ್ಲಿ ದೊಡ್ಡ ಸುದ್ದಿ ಸದ್ದು ಮಾಡಿತು. ಸೆಲಿಬ್ರಿಟಿಗಳು ಹನಾನ್ ಪರ ನಿಂತರು. ಸಾಮಾಜಿಕ ಕಾರ್ಯಕರ್ತರು ಸಹಾಯಕ್ಕೆ ಬಂದರು. ಆಕೆಗೆ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶವೂ ಅರಸಿ ಬಂದಿದೆ. ಮೊನ್ನೆ ಹನಾನ್ ತಿರುವನಂತಪುರಂನ ಓಣಮ್, ಬಕ್ರೀದ್ ಖಾದಿ ಎಕ್ಸ್‍ಪೋನಲ್ಲಿ ‘ನಡಿಗೆ’ ಹಾಕಿದ್ದಾಳೆ. ತನ್ಮೂಲಕ ಕುಹಕದ ಕೊಳಕು ಟ್ರೋಲಿಗರಿಗೆ ಕೇರ್ ಮಾಡುವ ಪೈಕಿ ತಾನಲ್ಲವೆಂದು ತೋರಿಸಿಕೊಂಡಿದ್ದಾಳೆ. ಈ ಇಡೀ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕುಳಿತು ಅಮಾಯಕರ ಬದುಕಲ್ಲಿ ಆಟ ಆಡೋರಿಗೆ ಪಾಠ ಕಲಿಸಬೇಕಾದ ಅನಿವಾರ್ಯತೆಯ ಎಚ್ಚರಿಕೆ ಕೊಟ್ಟಿದೆ!

-ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...