Homeಸಾಮಾಜಿಕಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

ಮೀನು ಮಾರುವ ಹುಡುಗಿಯೂ ವಿಕೃತ ಟ್ರೋಲಿಗರೂ!!

- Advertisement -
- Advertisement -

ಸಾಮಾಜಿಕ ಜಾಲತಾಣವೆಂಬುದು ಸ್ಯಾಡಿಸ್ಟ್‍ಗಳ ಆಡಂಬೋಲದಂತೆ ಆಗಿಹೋಗಿದೆ! ಇದು ಮಾಹಿತಿ ತಂತ್ರಜ್ಞಾನದ ಘೋರ ದುರಂತವೇ ಸರಿ. ಪರರ ಪಡಿಪಾಟಲು, ಆಸಹಾಯಕತೆ, ನೋವು, ನಷ್ಟ ಅಪಹಾಸ್ಯ ಮಾಡಿ ಟ್ರೋಲಿಸುವ ವಿಕೃತ ಸಂತಾನವೇ ಭಾರತದಲ್ಲಿ ಬೆಳೆದುನಿಂತಿದೆ. ಮಹಾ ಮಾನವತಾವಾದಿ ಧೀಮಂತ ಪತ್ರಕರ್ತೆಯೂ ಆಗಿದ್ದ ಗೌರಿಲಂಕೇಶ್‍ರ ಹತ್ಯೆ ಸಂಭ್ರಮಿಸಿದ್ದ ಕುಹಾಕಿಗಳನ್ನು ಈ ದೇಶದ ಪ್ರಧಾನಿ ಮೋದಿ ಮಹಾತ್ಮನೇ ಜಾಲತಾಣದಲ್ಲಿ ಫಾಲೋ ಮಾಡುತ್ತಾರೆ! ಸಿದ್ದು ಸಿಎಂ ಆಗಿದ್ದಾಗ ಮಗನನ್ನು ಕಳಕೊಂಡ ನೋವಿನಲ್ಲಿದ್ದ ಸಂದರ್ಭವನ್ನು ಸಾಮಾಜಿಕ ಜಾಲತಾಣದಲ್ಲಿ ಕುಳಿತು ಖುಷಿಯಿಂದ ಅನುಭವಿಸಿದವರೂ ಇದ್ದಾರೆ. ಇಂಥ ಗಲೀಜು ಸಂಸ್ಕøತಿಯ ಟ್ರೋಲಿಗರ ಕುಚೋದ್ಯದಿಂದ ಈಚೆಗೆ ಕೇರಳದಲ್ಲಿ ತಲ್ಲಣವೇ ಆಗಿಹೋಗಿದೆ. ವಿನಾಕಾರಣ ಬಡ-ಮುಗ್ಧ ಹುಡುಗಿಯೊಬ್ಬಳು ಘಾಸಿಗೊಂಡಿದ್ದಾಳೆ!
ಆಕೆಯ ಹೆಸರು ಹನಾನ್ ಹಮೀದ್. ಕೇರಳದ ತ್ರಿಶೂರ್‍ನ ಇಪ್ಪತ್ತೊಂದರ ಬಾಲಕಿ. ಬದುಕು ಕಟ್ಟಿಕೊಳ್ಳಲು ಹಗಲಿರುಳೂ ಕಷ್ಟಪಟ್ಟು ದುಡಿಯುತ್ತಲೇ ಕಾಲೇಜಿಗೂ ಹೋಗುತ್ತಿದ್ದಾಳೆ; ಕಾಲೇಜು ಮುಗಿಸಿ ಮೀನು ಮಾರುಕಟ್ಟೆಯಲ್ಲಿ ಕುಳಿತು ಮೀನೂ ಮಾರುತ್ತಾಳೆ. ಆಕೆ ಅವಸರದಲ್ಲೊಮ್ಮೆ ಕಾಲೇಜಿನ ಯೂನಿಫಾರ್ಮ್ ತೊಟ್ಟುಕೊಂಡೇ ಮೀನು ಮಾರಾಟಕ್ಕೆ ಕುಳಿತಿದ್ದಳು. ಇದು ಅದ್ಯಾವುದೋ ಕೀಳು ಅಭಿರುಚಿಯ ಟ್ರೋಲಿಗನ ಕಣ್ಣಿಗೆ ಬಿದ್ದಿದೆ. ಆ ಎವಡಾಸ ಅದ್ಭುತ ಸಂಶೋಧನೆ ಮಾಡಿದವನಂತೆ ಯೂನಿಫಾರ್ಮ್‍ನಲ್ಲಿ ಮೀನು ಮಾರುತ್ತಿದ್ದ ಪಾಪದ ಹುಡುಗಿಯ ಫೋಟೋ, ವೀಡಿಯೋ ಜಾಲತಾಣಕ್ಕೆ ಏರಿಸಿ ಬೀಗಿದ್ದಾನೆ.
ಆತನಂಥದೇ ಗುಣ-ಧರ್ಮದ ಜಾಲತಾಣಿಗರು ಆ ವೀಡಿಯೋ ಅಪಹಾಸ್ಯದಿಂದ ವೈರಲ್ ಮಾಡಿ ತೀಟೆ ತೀರಿಸಿಕೊಂಡಿದ್ದಾರೆ. ಆಕೆ ಮರ್ಯಾದೆಯಿಂದ ಜೀವನೋಪಾಯಕ್ಕೆ ಮಾಡುತ್ತಿದ್ದ ಕೆಲಸವನ್ನು ಆಡಿಕೊಂಡು ಕೇಕೆ ಹಾಕಿದ್ದಾರೆ. “…… ಕಾಲೇಜು ಓದೋದು ಬಿಟ್ಟು ಇದೆಂಥ ಕೆಲ್ಸಾ…….?!” ಎಂದು ಗೇಲಿ ಮಾಡಿದ್ದಾರೆ. ಅಸಹಾಯಕ ಹುಡುಗಿಯೊಬ್ಬಳ ಕಾರ್ಪಣ್ಯದ ಜೀವನಕ್ರಮವನ್ನು ಅಣಕಿಸುತ್ತ ಟ್ರೋಲ್‍ಮಾಡಿ ಮಜಾ ತೆಗೆದುಕೊಳ್ಳುವ ಸಂಗತಿಯಾ? ಮನುಷ್ಯರೂಪದ ಮೃಗಗಳಿಗಿದು ನಾಲ್ಕಾರು ದಿನ ಟೈಮ್‍ಪಾಸ್ ಹಾಸ್ಯವಾಗಿರಬಹುದು. ಆದರೆ ಈ ಅಪಮಾನ-ಅಪನಿಂದನೆಯಿಂದ ಸುದ್ದಿಯಾದ ಪಾಪದ ಹುಡುಗಿಯ ಹಿಂದೊಂದು ಕರುಣಾಜನಕ ಕತೆಯೇ ಇದೆ! ವಯಸ್ಸಿಗೆ ಮೀರಿದ ಸಾಂಸಾರಿಕ ಹೊಣೆ ನಿಭಾಯಿಸುತ್ತ ಊಟ-ನಿದ್ದೆ ಬಿಟ್ಟು ರಾತ್ರಿಹಗಲೆನ್ನದೆ ಬದುಕಲು ಆಕೆ ಸೆಣಸಾಡುತ್ತಿದ್ದಾಳೆ.
ಹನಾನ್ ತ್ರಿಶೂರ್‍ನ ಶ್ರೀಮಂತ ಕುಟುಂಬದ ಕೂಸು. ತಂದೆ ಹಮೀದ್, ತಾಯಿ ಜುಹ್ರಾಬಿ. ಒಬ್ಬ ತಮ್ಮನಿದ್ದಾನೆ. ಚಿಕ್ಕವಳಿದ್ದಾಗ ಆಕೆ ಖುಷಿಖುಷಿಯಾಗೇ ಇದ್ದಳು. ಆಕೆ ಪ್ರೈಮರಿಗೆ ಹೋಗುವಾಗ ಅಪ್ಪ ಇದ್ದಕ್ಕಿದ್ದಂತೆ ವಿಪರೀತ ಹೆಂಡ ಕುಡಿಯಲು ಶುರು ಹಚ್ಚಿಕೊಂಡಿದ್ದಾನೆ. ಅಷ್ಟೇ ಅಲ್ಲ, ದಿನವೂ ಕುಡಿದುಬಂದು ಅಮ್ಮನಿಗೆ ಬಡಿಯುತ್ತಿದ್ದ. ಮನೆಯೆಂಬುದು ರೌರವ ನರಕದಂತಾಗಿಹೋಯಿತು. ಹನಾನ್ ಹೈಸ್ಕೂಲಿಗೆ ಹೋಗುವ ಹೊತ್ತಿಗೆ ಆಕೆಯ ತಂದೆ-ತಾಯಿ ವಿವಾಹ ವಿಚ್ಛೇದನ ಪಡೆದುಕೊಂಡಿದ್ದರು. ತಮ್ಮ ತಂದೆಯೊಂದಿಗಿದ್ದರೆ, ಹನಾನ್ ತಾಯಿ ಜತೆ ಉಳಿದಳು. ತನ್ನ ಮತ್ತು ತಾಯಿಯ ತುತ್ತಿನ ಚೀಲ ತುಂಬಿಸುವ ಜವಾಬ್ದಾರಿ ಹನಾನ್ ಮೇಲೆ ಬಿತ್ತು.
ಆ ನತದೃಷ್ಟ ಹುಡುಗಿ ಧೃತಿಗೆಡಲಿಲ್ಲ ದುಡಿಮೆಯ ದಾರಿ ಹುಡುಕಿದಳು ತಾನು ಶಾಲೆಗೆ ಹೋಗುತ್ತಲೇ ಚಿಕ್ಕ ಮಕ್ಕಳಿಗೆ ಟ್ಯೂಶನ್ ಕೊಡಲಾರಂಭಿಸಿದಳು; ಕರಕುಶಲ ವಸ್ತು, ಕಿವಿಯೋಲೆ ತಯಾರಿಸಿ ಬಂದ ಹಣದಲ್ಲಿ ಜೀವನ ಸಾಗಿಸಹತ್ತಿದಳು. ಕೆಲದಿನದ ಬಳಿಕ ಖಾಸಗಿ ಕಂಪನಿಯೊಂದಕ್ಕೆ ಕಾರ್ಮಿಕಳಾಗಿ ಸೇರಿಕೊಂಡಳು. ಹನಾನ್ ಕಷ್ಟಕ್ಕೆ ಹೆದರಲಿಲ್ಲ. ನೈಟ್‍ಶಿಫ್ಟ್, ಮಾರ್ನಿಂಗ್‍ಶಿಫ್ಟ್ ಅಂತಾ ಹಠದಿಂದ ದುಡಿದಳು. ಆಕೆ ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿ ಯಂತ್ರಗಳ ವಿಪರೀತ ಶಬ್ದ ಇರುತ್ತಿತ್ತು. ಹೀಗಾಗಿ ಹನಾನ್‍ಗೆ ಶ್ರವಣದೋಷ ಬಾಧಿಸಹತ್ತಿತು. ಹಾಗಾಗಿ ಆ ಕೆಲಸ ಆಕೆ ಅನಿವಾರ್ಯವಾಗಿ ಬಿಡಬೇಕಾಗಿಬಂತು. ಬಿಎಸ್ಸಿ ಓದುತ್ತಿದ್ದ ಹನಾನ್‍ಗೆ ಹೇಗಾದರೂ ಮಾಡಿ ಡಾಕ್ಟರ್ ಆಗಬೇಕೆಂಬ ಹಠ. ಕಂಪನಿ ಕೆಲಸ ಅರಸುತ್ತಲೇ ಇದ್ದಳು.
ಕೆಲವು ದಿನಗಳ ನಂತರ ಬೇರೆ ಕಂಪನಿಯಲ್ಲಿ ಉದ್ಯೋಗ ಸಿಕ್ಕಿತು. ಇದು ತಾಯಿ-ಮಗಳ ಬದುಕು ಸಾಗಿಸಲು ಸಾಕಾಗುತ್ತಿರಲಿಲ್ಲ. ಮೀನು ಮಾರಾಟ ಮಾಡಿದರೆ ಒಂದಿಷ್ಟು ಹೆಚ್ಚುವರಿ ಕಾಸು ಸಂಪಾದಿಸಬಹುದೆಂದು ಆಕೆಗೆ ಹೊಳೆಯಿತು. ಕಾಲೇಜು ಕ್ಲಾಸ್ ಮುಗಿಯುತ್ತಿದ್ದಂತೆಯೇ ಮೀನು ಮಾರ್ಕೆಟ್ಟಿಗೆ ಹೋಗಿ ಮೀನು ಮಾರಾಟ ಮಾಡಲು ಆರಂಭಿಸಿದಳು. ಒಮ್ಮೊಮ್ಮೆ ಬೆಳಗಿನ ಜಾವ 3.30ಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಮೀನು ಖರೀದಿಸಿ ಮಾರಾಟ ಮಾಡುತ್ತಿದ್ದಳು. ನಂತರ ಕಾಲೇಜಿನ ಸಮಯಕ್ಕೆ ಸರಿಯಾಗಿ ಅಲ್ಲಿರುತ್ತಿದ್ದಳು. ಇಂಥದೇ ಒಂದು ದಿನ ಆಕೆ ಮೀನು ಮಾರಲು ಹೋಗಿದ್ದಳು. ಗಡಿಬಿಡಿಯಲ್ಲಿ ಯೂನಿಫಾರ್ಮ್ ತೆಗೆಯಲು ಆಕೆಗೆ ಸಾಧ್ಯವಾಗಿರಲಿಲ್ಲ.
ಆಕೆಯ ಚಿತ್ರ ತೆಗೆದ ಅಧಮ ಮಾನÀವನೊಬ್ಬ ಸಾಮಾಜಿಕ ಮಾಧ್ಯಮಕ್ಕೆ ಟ್ರೋಲ್ ಮಾಡುತ್ತಿದ್ದಂತೆಯೇ ಕೇರಳದಲ್ಲಿ ಅಲ್ಲೋಲಕಲ್ಲೋಲವೇ ಆಯ್ತು. ಈ ಚಿತ್ರ ಶೇರ್ ಮಾಡಿ ಕುಣಿದು ಕುಪ್ಪಳಿಸಿದವರಿಗೆ ಜನ ಉಗಿದರು. ಪರ-ವಿರುದ್ಧ ಅಂತರ್ಜಾಲ ಯುದ್ಧ ನಡೆಯಿತು. ಒಪ್ಪತ್ತು ಗಂಜಿಗಾಗಿ ಹೆಣಗಾಡುತ್ತಿದ್ದ ಹನಾನ್ ದೌರ್ಭಾಗ್ಯವನ್ನು ಜೋಕ್ ಮಾಡಿ ನಕ್ಕ ಟ್ರೋಲಿಗರನ್ನು ಕೇರಳದ ಪಿಣರಾಯಿವಿಜಯನ್ ಸರ್ಕಾರ ಛೀಮಾರಿ ಹಾಕಿತು. ಇಷ್ಟಾದರೂ ನೈತಿಕ ಸ್ಥೈರ್ಯದ ಹನಾನ್ ಅಂಜಲಿಲ್ಲ, ಅಳುಕಲಿಲ್ಲ ತನ್ನ ಪಾಡಿಗೆ ತಾನು ಕಾಲೇಜು, ಮೀನು ಮಾರಾಟ, ಕಂಪನಿ ಚಾಕರಿ, ತಾಯಿಯ ದೇಖರೇಖೆಯ ಜೀವನ ಸಂಗ್ರಾಮದಲ್ಲಿ ತೊಡಗಿಕೊಂಡಿದ್ದಳು. ಇದು ಧೂರ್ತರಿಗೆ ನೋಡಲಾಗಲಿಲ್ಲ ಇದು ಹನಾನ್‍ನ ಪ್ರಚಾರದ ತಂತ್ರಗಾರಿ ಎಂದು ಆಲಾಪಿಸಿದರು.
ಇದು ಕೇರಳದಲ್ಲಿ ದೊಡ್ಡ ಸುದ್ದಿ ಸದ್ದು ಮಾಡಿತು. ಸೆಲಿಬ್ರಿಟಿಗಳು ಹನಾನ್ ಪರ ನಿಂತರು. ಸಾಮಾಜಿಕ ಕಾರ್ಯಕರ್ತರು ಸಹಾಯಕ್ಕೆ ಬಂದರು. ಆಕೆಗೆ ಚಲನಚಿತ್ರದಲ್ಲಿ ಅಭಿನಯಿಸುವ ಅವಕಾಶವೂ ಅರಸಿ ಬಂದಿದೆ. ಮೊನ್ನೆ ಹನಾನ್ ತಿರುವನಂತಪುರಂನ ಓಣಮ್, ಬಕ್ರೀದ್ ಖಾದಿ ಎಕ್ಸ್‍ಪೋನಲ್ಲಿ ‘ನಡಿಗೆ’ ಹಾಕಿದ್ದಾಳೆ. ತನ್ಮೂಲಕ ಕುಹಕದ ಕೊಳಕು ಟ್ರೋಲಿಗರಿಗೆ ಕೇರ್ ಮಾಡುವ ಪೈಕಿ ತಾನಲ್ಲವೆಂದು ತೋರಿಸಿಕೊಂಡಿದ್ದಾಳೆ. ಈ ಇಡೀ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಕುಳಿತು ಅಮಾಯಕರ ಬದುಕಲ್ಲಿ ಆಟ ಆಡೋರಿಗೆ ಪಾಠ ಕಲಿಸಬೇಕಾದ ಅನಿವಾರ್ಯತೆಯ ಎಚ್ಚರಿಕೆ ಕೊಟ್ಟಿದೆ!

-ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...