Homeಕರ್ನಾಟಕಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್...

ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ

- Advertisement -
- Advertisement -

ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಯಡಿಯೂರಪ್ಪನವರಿಗೆ ಸಿಹಿ-ಕಹಿ ಅನುಭವಗಳಾಗುತ್ತಿವೆ. ಪರಿಹಾರಕ್ಕೆ 5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ ಎಂಬ ಯಡಿಯೂರಪ್ಪನವರ ಮನವಿಗೆ ಬಹಳಷ್ಟು ಜನ ಮಿಡಿದು ಸಹಾಯ ಮಾಡುತ್ತಿದ್ದಾರೆ. ಇನ್ನು ಮತ್ತಷ್ಟು ಜನ ಖಂಡಿ ಸಹಾಯ ಮಾಡುತ್ತೇವೆ ಆದರೆ ಮೊದಲು ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ನಂತರ ರಾಜ್ಯಸರ್ಕಾರ ಘೋಷಿಸಬೇಕು. ಆಗಲು ಸಾಲದಿದ್ದರೆ ನಾಡಿನ ಜನತೆ ಖಂಡಿತ ಶಕ್ತಿ ಮೀರಿ ಸಹಾಯ ಮಾಡುತ್ತಾರೆ. ಮೊದಲು ನಿಮ್ಮ ಕೆಲಸ ಮಾಡಿ ಎಂದು ಸಿಎಂಗೆ ತಾಕೀತು ಮಾಡಿದ್ದಾರೆ.

ಇನ್ನೊಂದಷ್ಟು ಜನ ಜಡಿಮಳೆಯಲ್ಲಿಯೇ ಈ ಸರ್ಕಾರವನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡು ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ ಸುರಿಸಿದ್ದಾರೆ.

‘ಅತೃಪ್ತರಿಗೆ ಖಾಸಗಿ ವಿಮಾನ ತರಿಸಲು ಯೋಗ್ಯತೆ ಇದೆ, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ವಿಮಾನ ತರಸಲು ಯೋಗ್ಯತೆ ಇಲ್ಲವೇ? ಶೇಮ್ ಶೇಮ್’ ಎಂದು ಅರುಣ್ ಕುಮಾರ್ ರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಪವನ್ ಕುಮಾರ್ ಎಂಬುವವರು “ಖಂಡಿತ ಕನ್ನಡಿಗರು ಈ ಪ್ರವಾಹಕ್ಕೆ ಸ್ಪಂದಿಸುತ್ತಾರೆ, ಇದರಲ್ಲಿ ಎರಡು ಮಾತಿಲ್ಲ. ಆದರೆ ನೀವು ಶಾಸಕರನ್ನು ಖರೀದಿಸಲು, ರೆಸಾರ್ಟ್ ಬುಕ್ ಮಾಡಲು ಬಳಸುವ ಹಣವನ್ನು ಈ ಸಂತ್ರಸ್ತರಿಗಾಗಿ ಬಳಸಿ.. ನಿಮ್ಮದೇ ಕೇಂದ್ರ ಸರ್ಕಾರದಿಂದಲೂ ನಿಧಿಗಳನ್ನು ತನ್ನಿ” ಎಂದು ಬರೆದಿದ್ದಾರೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಸರಿಯಾಗಿ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಸರಿಯಾದ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!
#KarnatakaFloods #ಯಡಿಯುರಪ್ಪಎಲ್ಲಿದ್ದಿಯಪ್ಪl ಎಂಬ ಬರಹ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ನಿರಂತರವಾಗಿ ಬಿಜೆಪಿಗರನ್ನು ಚುನಾಯಿಸುತ್ತಿರುವ ಕೊಡಗು ಕುಸಿದಾಗ ಬರಲು ಮೋದಿಯವರಿಗೆ ಬಿಡುವಾಗಲಿಲ್ಲ.
25 ಬಿಜೆಪಿ ಸಂಸದರನ್ನು ಸಂಸತ್ತಿಗೆ ಕಳುಹಿಸಿರುವ ಕರ್ನಾಟಕ ಈಗ ಮುಳುಗಿದೆ;
ಮೋದಿಯವರಿಗೆ ಬಿಡುವಾಗುತ್ತದೋ ನೋಡಬೇಕು. #ಕರ್ನಾಟಕ_ಪ್ರವಾಹ ಎಂದು ಶ್ರೀನಿವಾಸ ಕಾರ್ಕಳರವರು ಬರೆದುಕೊಂಡಿದ್ದಾರೆ.

ಪ್ರಹ್ಲಾದ್ ಜೋಷಿಗೆ ಪ್ರವಾಹದ ಬಗ್ಗೆ ಮಾಹಿತೀನೆ ಇಲ್ವಂತೆ
ಇಂತವರನ್ನು ಸಂಸದರಾಗಿ ಪಡೆದ ಧಾರವಾಡ ಜಿಲ್ಲೆಯ ಜನತೆಯೇ ಧನ್ಯರು ಎಂದು ಶೃತಿ ಶಂಕರ್ ರವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...