Homeಕರ್ನಾಟಕಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್...

ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ

- Advertisement -
- Advertisement -

ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಯಡಿಯೂರಪ್ಪನವರಿಗೆ ಸಿಹಿ-ಕಹಿ ಅನುಭವಗಳಾಗುತ್ತಿವೆ. ಪರಿಹಾರಕ್ಕೆ 5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ ಎಂಬ ಯಡಿಯೂರಪ್ಪನವರ ಮನವಿಗೆ ಬಹಳಷ್ಟು ಜನ ಮಿಡಿದು ಸಹಾಯ ಮಾಡುತ್ತಿದ್ದಾರೆ. ಇನ್ನು ಮತ್ತಷ್ಟು ಜನ ಖಂಡಿ ಸಹಾಯ ಮಾಡುತ್ತೇವೆ ಆದರೆ ಮೊದಲು ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ನಂತರ ರಾಜ್ಯಸರ್ಕಾರ ಘೋಷಿಸಬೇಕು. ಆಗಲು ಸಾಲದಿದ್ದರೆ ನಾಡಿನ ಜನತೆ ಖಂಡಿತ ಶಕ್ತಿ ಮೀರಿ ಸಹಾಯ ಮಾಡುತ್ತಾರೆ. ಮೊದಲು ನಿಮ್ಮ ಕೆಲಸ ಮಾಡಿ ಎಂದು ಸಿಎಂಗೆ ತಾಕೀತು ಮಾಡಿದ್ದಾರೆ.

ಇನ್ನೊಂದಷ್ಟು ಜನ ಜಡಿಮಳೆಯಲ್ಲಿಯೇ ಈ ಸರ್ಕಾರವನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡು ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ ಸುರಿಸಿದ್ದಾರೆ.

‘ಅತೃಪ್ತರಿಗೆ ಖಾಸಗಿ ವಿಮಾನ ತರಿಸಲು ಯೋಗ್ಯತೆ ಇದೆ, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ವಿಮಾನ ತರಸಲು ಯೋಗ್ಯತೆ ಇಲ್ಲವೇ? ಶೇಮ್ ಶೇಮ್’ ಎಂದು ಅರುಣ್ ಕುಮಾರ್ ರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಪವನ್ ಕುಮಾರ್ ಎಂಬುವವರು “ಖಂಡಿತ ಕನ್ನಡಿಗರು ಈ ಪ್ರವಾಹಕ್ಕೆ ಸ್ಪಂದಿಸುತ್ತಾರೆ, ಇದರಲ್ಲಿ ಎರಡು ಮಾತಿಲ್ಲ. ಆದರೆ ನೀವು ಶಾಸಕರನ್ನು ಖರೀದಿಸಲು, ರೆಸಾರ್ಟ್ ಬುಕ್ ಮಾಡಲು ಬಳಸುವ ಹಣವನ್ನು ಈ ಸಂತ್ರಸ್ತರಿಗಾಗಿ ಬಳಸಿ.. ನಿಮ್ಮದೇ ಕೇಂದ್ರ ಸರ್ಕಾರದಿಂದಲೂ ನಿಧಿಗಳನ್ನು ತನ್ನಿ” ಎಂದು ಬರೆದಿದ್ದಾರೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಸರಿಯಾಗಿ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಸರಿಯಾದ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!
#KarnatakaFloods #ಯಡಿಯುರಪ್ಪಎಲ್ಲಿದ್ದಿಯಪ್ಪl ಎಂಬ ಬರಹ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ನಿರಂತರವಾಗಿ ಬಿಜೆಪಿಗರನ್ನು ಚುನಾಯಿಸುತ್ತಿರುವ ಕೊಡಗು ಕುಸಿದಾಗ ಬರಲು ಮೋದಿಯವರಿಗೆ ಬಿಡುವಾಗಲಿಲ್ಲ.
25 ಬಿಜೆಪಿ ಸಂಸದರನ್ನು ಸಂಸತ್ತಿಗೆ ಕಳುಹಿಸಿರುವ ಕರ್ನಾಟಕ ಈಗ ಮುಳುಗಿದೆ;
ಮೋದಿಯವರಿಗೆ ಬಿಡುವಾಗುತ್ತದೋ ನೋಡಬೇಕು. #ಕರ್ನಾಟಕ_ಪ್ರವಾಹ ಎಂದು ಶ್ರೀನಿವಾಸ ಕಾರ್ಕಳರವರು ಬರೆದುಕೊಂಡಿದ್ದಾರೆ.

ಪ್ರಹ್ಲಾದ್ ಜೋಷಿಗೆ ಪ್ರವಾಹದ ಬಗ್ಗೆ ಮಾಹಿತೀನೆ ಇಲ್ವಂತೆ
ಇಂತವರನ್ನು ಸಂಸದರಾಗಿ ಪಡೆದ ಧಾರವಾಡ ಜಿಲ್ಲೆಯ ಜನತೆಯೇ ಧನ್ಯರು ಎಂದು ಶೃತಿ ಶಂಕರ್ ರವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...