Homeಕರ್ನಾಟಕಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್...

ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ

- Advertisement -
- Advertisement -

ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಯಡಿಯೂರಪ್ಪನವರಿಗೆ ಸಿಹಿ-ಕಹಿ ಅನುಭವಗಳಾಗುತ್ತಿವೆ. ಪರಿಹಾರಕ್ಕೆ 5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ ಎಂಬ ಯಡಿಯೂರಪ್ಪನವರ ಮನವಿಗೆ ಬಹಳಷ್ಟು ಜನ ಮಿಡಿದು ಸಹಾಯ ಮಾಡುತ್ತಿದ್ದಾರೆ. ಇನ್ನು ಮತ್ತಷ್ಟು ಜನ ಖಂಡಿ ಸಹಾಯ ಮಾಡುತ್ತೇವೆ ಆದರೆ ಮೊದಲು ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ನಂತರ ರಾಜ್ಯಸರ್ಕಾರ ಘೋಷಿಸಬೇಕು. ಆಗಲು ಸಾಲದಿದ್ದರೆ ನಾಡಿನ ಜನತೆ ಖಂಡಿತ ಶಕ್ತಿ ಮೀರಿ ಸಹಾಯ ಮಾಡುತ್ತಾರೆ. ಮೊದಲು ನಿಮ್ಮ ಕೆಲಸ ಮಾಡಿ ಎಂದು ಸಿಎಂಗೆ ತಾಕೀತು ಮಾಡಿದ್ದಾರೆ.

ಇನ್ನೊಂದಷ್ಟು ಜನ ಜಡಿಮಳೆಯಲ್ಲಿಯೇ ಈ ಸರ್ಕಾರವನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡು ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ ಸುರಿಸಿದ್ದಾರೆ.

‘ಅತೃಪ್ತರಿಗೆ ಖಾಸಗಿ ವಿಮಾನ ತರಿಸಲು ಯೋಗ್ಯತೆ ಇದೆ, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ವಿಮಾನ ತರಸಲು ಯೋಗ್ಯತೆ ಇಲ್ಲವೇ? ಶೇಮ್ ಶೇಮ್’ ಎಂದು ಅರುಣ್ ಕುಮಾರ್ ರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಪವನ್ ಕುಮಾರ್ ಎಂಬುವವರು “ಖಂಡಿತ ಕನ್ನಡಿಗರು ಈ ಪ್ರವಾಹಕ್ಕೆ ಸ್ಪಂದಿಸುತ್ತಾರೆ, ಇದರಲ್ಲಿ ಎರಡು ಮಾತಿಲ್ಲ. ಆದರೆ ನೀವು ಶಾಸಕರನ್ನು ಖರೀದಿಸಲು, ರೆಸಾರ್ಟ್ ಬುಕ್ ಮಾಡಲು ಬಳಸುವ ಹಣವನ್ನು ಈ ಸಂತ್ರಸ್ತರಿಗಾಗಿ ಬಳಸಿ.. ನಿಮ್ಮದೇ ಕೇಂದ್ರ ಸರ್ಕಾರದಿಂದಲೂ ನಿಧಿಗಳನ್ನು ತನ್ನಿ” ಎಂದು ಬರೆದಿದ್ದಾರೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಸರಿಯಾಗಿ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಸರಿಯಾದ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!
#KarnatakaFloods #ಯಡಿಯುರಪ್ಪಎಲ್ಲಿದ್ದಿಯಪ್ಪl ಎಂಬ ಬರಹ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ನಿರಂತರವಾಗಿ ಬಿಜೆಪಿಗರನ್ನು ಚುನಾಯಿಸುತ್ತಿರುವ ಕೊಡಗು ಕುಸಿದಾಗ ಬರಲು ಮೋದಿಯವರಿಗೆ ಬಿಡುವಾಗಲಿಲ್ಲ.
25 ಬಿಜೆಪಿ ಸಂಸದರನ್ನು ಸಂಸತ್ತಿಗೆ ಕಳುಹಿಸಿರುವ ಕರ್ನಾಟಕ ಈಗ ಮುಳುಗಿದೆ;
ಮೋದಿಯವರಿಗೆ ಬಿಡುವಾಗುತ್ತದೋ ನೋಡಬೇಕು. #ಕರ್ನಾಟಕ_ಪ್ರವಾಹ ಎಂದು ಶ್ರೀನಿವಾಸ ಕಾರ್ಕಳರವರು ಬರೆದುಕೊಂಡಿದ್ದಾರೆ.

ಪ್ರಹ್ಲಾದ್ ಜೋಷಿಗೆ ಪ್ರವಾಹದ ಬಗ್ಗೆ ಮಾಹಿತೀನೆ ಇಲ್ವಂತೆ
ಇಂತವರನ್ನು ಸಂಸದರಾಗಿ ಪಡೆದ ಧಾರವಾಡ ಜಿಲ್ಲೆಯ ಜನತೆಯೇ ಧನ್ಯರು ಎಂದು ಶೃತಿ ಶಂಕರ್ ರವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...