Homeಕರೋನಾ ತಲ್ಲಣಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

ಕೊರೊನಾ ಸೋಂಕಿತರು ಚೇತರಿಸಿಕೊಳ್ಳಲು ಸಾಮಾಜಿಕ ಕಳಂಕವೇ ಅಡ್ಡಿ!

ನನ್ನನ್ನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿರಲು ಸೂಚಿಸಲಾಯಿತು. ಆದರೆ ಮೊದಲಿಗೆ ನೆರೆಹೊರೆಯವರಿಂದ ಸಮಸ್ಯೆ ಇರಲಿಲ್ಲ.

- Advertisement -
- Advertisement -

ಕೊರೊನಾಗೆ ತುತ್ತಾಗ ರೋಗಿಗಳನ್ನು ಸಾಮಾಜಿಕ ಕಳಂಕದಿಂದ ನೋಡುವುದು ಮತ್ತು ಅದೇ ರೀತಿ ವ್ಯವಹರಿಸುವುದರಿಂದ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರುವ ರೋಗಿಗಳ ಚೇತರಿಕೆ ಕಷ್ಟಕರವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸುಮಾರು 70 ರಿಂದ 80 ರಷ್ಟು ಸೋಂಕಿತ ಜನರು ತೆಲಂಗಾಣದಾದ್ಯಂತ ಮನೆಯಲ್ಲಿಯೇ ಐಸೋಲೇಷನ್ ನಲ್ಲಿರುವುದರಿಂದ, ಹಲವು ರೋಗಿಗಳು ನೆರೆಹೊರೆಯವರಿಂದ ಕಿರುಕುಳಕ್ಕೊಳಗಾಗುತ್ತಿದ್ದಾರೆ ಎಂದು ನ್ಯೂಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಬೇಕೆಂದು ನೆರೆಹೊರೆಯವರು ಒತ್ತಾಯಿಸುತ್ತಾರೆ. ಆದರೆ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆಗಳು ಇಲ್ಲದ ಕಾರಣ ರೋಗ ಲಕ್ಷಣಗಳಿಲ್ಲದವರು ಮನೆಯಲ್ಲಿಯೇ ಇದ್ದು ಚೇತರಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಇವೆರಡರ ನಡುವೆ ರೋಗಿಗಳು ಕಂಗಾಲಾಗಿದ್ದಾರೆ.

ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ನೆರೆಹೊರೆಯವರು ಬಯಸುತ್ತಾರೆ. ಈ ಕುರಿತು ಕೆಲವೊಮ್ಮೆ ರೋಗಿಗಳು ತಮ್ಮ ನೆರೆಹೊರೆಯವರೊಂದಿಗೆ ವಾದಕ್ಕಿಳಿದಾಗ, ಪರಿಸ್ಥಿತಿಯು ತುಂಬಾ ಗಂಭೀರವಾಗುವುದರಿಂದ  ಪೊಲೀಸರ ಸಹಾಯವನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಒದಗಿಬಂದಿವೆ.

“ಜೂನ್‌ನಲ್ಲಿ ಕೊರೊನಾ ಪರೀಕ್ಷೆ ಮಾಡಿದಾಗ, ನನಗೆ ಸೋಂಕು ತಗುಲಿರುವುದು ದೃಢಪಟ್ಟಿತು. ಆದರೂ ಅಷ್ಟೇನೂ ಅಪಾಯವಲ್ಲದ ರೋಗಲಕ್ಷಣಗಳನ್ನು ಹೊಂದಿದ್ದರಿಂದ, ನನ್ನನ್ನು ಮನೆಯಲ್ಲಿಯೇ ಐಸೋಲೇಷನ್ ನಲ್ಲಿರಲು ಸೂಚಿಸಲಾಯಿತು. ಆದರೆ ಮೊದಲಿಗೆ ನೆರೆಹೊರೆಯವರಿಂದ ಸಮಸ್ಯೆ ಇರಲಿಲ್ಲ. ಆದರೆ ನಾನು ಆಮ್ಲಜನಕ ಸಿಲಿಂಡರ್‌ ತರಿಸಿಕೊಂಡಾಗ ಅವರಿಗೆ ಅನುಮಾನ ಹೆಚ್ಚಾಯಿತು. ನೆರೆಹೊರೆಯವರು ವೈರಸ್‌ಗೆ ತುತ್ತಾಗಬಹುದೆಂಬ ಭಯದಿಂದ ನನ್ನನ್ನು ಆಸ್ಪತ್ರೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು” ಎಂದು ಕಾಯಿಲೆಯಿಂದ ಚೇತರಿಸಿಕೊಂಡ ಕಬೀರ್ ಖಾನ್ ಹೇಳಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ “ನನ್ನ ಮಾಲೀಕರು, ಕುಟುಂಬದೊಂದಿಗೆ ಫ್ಲಾಟ್‌ನಿಂದ ಹೊರಹೋಗಬೇಕೆಂದು ಹೇಳಿದ್ದರು. ನಾನು ಬೇರೆ ಎಲ್ಲಿಗೂ ಹೋಗುವ ಅವಕಾಶವಿರಲಿಲ್ಲ. ಇಂತಹ ಸಂದರ್ಭದಲ್ಲಿ ಇದು ನನ್ನ ಜೀವಕ್ಕೆ ಅಪಾಯವೆಂದು ತಿಳಿದು ಪೊಲೀಸರಿಗೆ ದೂರು ನೀಡಿದೆ” ಎಂದು ಚೇತರಿಸಿಕೊಂಡಿರುವ ರೋಗಿ ಹೇಳಿದರು.

ಹೀಗೆ ಹಲವಾರು ದೂರುಗಳು ಬಂದಿವೆ. ಎಷ್ಟೋ ರೋಗಿಗಳಿಗೆ ಈ ಕಳಂಕವು ಖಿನ್ನತೆ, ಉದ್ವಿಗ್ನತೆಯನ್ನು ಉಂಟುಮಾಡಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಐಸೋಲೇಷನ್ ಕೊಠಡಿಗಳಿಲ್ಲದ ಕಾರಣ 80 ಪ್ರತಿಶತ ರೋಗಿಗಳಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಆದರೆ ಇದಕ್ಕೂ ನೆರಹೊರೆಯವರಿಂದ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ಇಂದಿನಿಂದ ಸಿಎಂ ಯಡಿಯೂರಪ್ಪ ವರ್ಕ್‌ ಫ್ರಂ ಹೋಮ್‌: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...