Homeಮುಖಪುಟಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ 'ಇಲಿನಾ ಸೇನ್' ನಿಧನ

ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ‘ಇಲಿನಾ ಸೇನ್’ ನಿಧನ

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದರು.

- Advertisement -
- Advertisement -

ಹಲವಾರು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಇಲಿನಾ ಸೇನ್ ಆಗಸ್ಟ್ 9 ರಂದು ನಿಧನರಾದರು. ಅವರಿಗೆ ಪತಿ ಡಾ. ಬಿನಾಯಕ್ ಸೇನ್ ಮತ್ತು ಇಬ್ಬರು ಹೆಣ್ಣುಮಕ್ಕಳಾದ ಪ್ರಹ್ನಿತಾ ಮತ್ತು ಅಪರಾಜಿತಾ ಇದ್ದಾರೆ.

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದ್ದಾರೆ.

ಕಾರ್ಮಿಕ ಸಂಘಗಳು, ದೀನದಲಿತರು ಮತ್ತು ಆದಿವಾಸಿ ಸಮುದಾಯದೊಂದಿಗೆ ಕೆಲಸ ಮಾಡಲು ಸೇನ್ ಚತ್ತೀಸ್‌ಘಡದಲ್ಲಿ ಹಲವು ವರ್ಷ ಉಳಿದುಕೊಂಡಿದ್ದರು. ಅವರು ಇನ್ಸೈಡ್ ಚತ್ತೀಸ್‌ಘಡ: ಎ ಪೊಲಿಟಿಕಲ್ ಮೆಮೋಯಿರ್ ಅಂಡ್ ಸುಖವಾಸಿನ್ ಮತ್ತು ದಿ ಮೈಗ್ರಂಟ್ ವುಮನ್ ಆಫ್ ಚತ್ತೀಸ್‌ಘಡ ಎರಡು ಪುಸ್ತಕಗಳನ್ನು ಬರೆದಿದ್ದಾರೆ.

ಇವರು ಮಹಾರಾಷ್ಟ್ರದ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಮುಂಬೈಗೆ ತೆರಳಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ಮಹಿಳಾ ಅಧ್ಯಯನಕ್ಕಾಗಿ ಸುಧಾರಿತ ಕೇಂದ್ರಕ್ಕೆ ಸೇರಿದ್ದರು.

ವೈದ್ಯರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆಯಾಗಿದ್ದ ಅವರ ಪತಿ ಬಿನಾಯಕ್ ಸೇನ್ ಗೆ 2010 ರಲ್ಲಿ ಛತ್ತೀಸ್ ಗಡದ ವಿಚಾರಣಾ ನ್ಯಾಯಾಲಯವು ದೇಶದ್ರೋಹಕ್ಕೆ ಸಂಚು ರೂಪಿಸಿದ ಆರೋಪ ಮತ್ತು ಮಾವೋವಾದಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ರಾಯಪುರ ಸೆಷನ್ಸ್ ನ್ಯಾಯಾಲಯವು ದೇಶದ್ರೋಹದ ಆರೋಪದ ಮೇಲೆ ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಶಿಕ್ಷೆಗೊಳಪಡಿಸಿತು

ಇಲಿನಾ ಪತಿಯ ಬಿಡುಗಡೆಗಾಗಿ ಕಾನೂನು ಹೋರಾಟಕ್ಕೆ ಮುಂದಾದರು. ಮಧ್ಯ ಭಾರತದ ಆದಿವಾಸಿ ಸಮುದಾಯದ ಹಲವಾರು ಯುವಕರನ್ನು ಕಾರಣವಿಲ್ಲದೇ ಬಂಧಿಸುವುದರ ವಿರುದ್ಧ ಪ್ರಚಾರ ನಡೆಸಿದ್ದರು. 2011 ರಲ್ಲಿ ಸುಪ್ರೀಂ ಕೋರ್ಟ್ ಬಿನಾಯಕ್ ಅವರಿಗೆ ಜಾಮೀನು ನೀಡಿ, ಇವರ ವಿರುದ್ಧ ದೇಶದ್ರೋಹದ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದಿತ್ತು.

ಇಲಿನಾ ಸಾವಿನ ಸುದ್ದಿ ಪ್ರಕಟವಾದ ತಕ್ಷಣ, ಹಲವಾರು ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತಮ್ಮ ದುಃಖವನ್ನು ವ್ಯಕ್ತಪಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಛತ್ತೀಸ್ ಗಡದಲ್ಲಿ ಅತಿಯಾದ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಇಲಿನಾ ತೀವ್ರವಾಗಿ ಟೀಕಿಸಿದ್ದರು.

ದೆಹಲಿಯ ಸ್ವತಂತ್ರ ಸ್ತ್ರೀಸಮಾನತಾವಾದಿ ಪ್ರಕಾಶನ ಕೇಂದ್ರವಾದ ಜುಬಾನ್ ಪ್ರಕಟಿಸಿದ ಎ ಸ್ಪೇಸ್ ವಿಥಾನ್ ದಿ ಸ್ಟ್ರಗಲ್ ಎಂಬ ಪುಸ್ತಕದಲ್ಲಿ, ಇಲಿನಾ ಸಾಮಾಜಿಕ ಚಳುವಳಿಗಳಲ್ಲಿ ಹಲವಾರು ಮಹಿಳೆಯರ ಬಗ್ಗೆ ಮತ್ತು ಅವರೊಳಗಿನ ಪಿತೃಪ್ರಭುತ್ವವನ್ನು ಪ್ರಶ್ನಿಸಿದ್ದರು.

1970 ರ ದಶಕದ ಉತ್ತರಾರ್ಧ ಮತ್ತು 80 ರ ದಶಕದ ಆರಂಭದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ,  ವರದಕ್ಷಿಣೆ ಸಾವು ಮತ್ತು ಮಥುರಾ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇಬ್ಬರೂ ಸೇರಿ ರೂಪಾಂತರ್ ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿದರು. ಇದರ ಕಾರ್ಯಗಳು ಲಿಂಗ ಸಮಸ್ಯೆಗಳು ಮತ್ತು ತರಬೇತಿಗಳು ಮತ್ತು ಕೃಷಿ ಜೀವವೈವಿಧ್ಯತೆಯ ಮೇಲೆ ಕೇಂದ್ರೀಕರಿಸಿತ್ತು.

ಆರೋಗ್ಯವು ಹದಗೆಟ್ಟಾಗಲೂ, ಇಲಿನಾ ಹಲವಾರು ಜನರ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಹೆಚ್ಚಾಗಿ ಬಂಧಿಸುತ್ತಿರುವ ಬಗ್ಗೆ ತನ್ನ ಭಿನ್ನಾಭಿಪ್ರಾಯ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...