Homeಮುಖಪುಟಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ 'ಇಲಿನಾ ಸೇನ್' ನಿಧನ

ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ‘ಇಲಿನಾ ಸೇನ್’ ನಿಧನ

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದರು.

- Advertisement -
- Advertisement -

ಹಲವಾರು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಇಲಿನಾ ಸೇನ್ ಆಗಸ್ಟ್ 9 ರಂದು ನಿಧನರಾದರು. ಅವರಿಗೆ ಪತಿ ಡಾ. ಬಿನಾಯಕ್ ಸೇನ್ ಮತ್ತು ಇಬ್ಬರು ಹೆಣ್ಣುಮಕ್ಕಳಾದ ಪ್ರಹ್ನಿತಾ ಮತ್ತು ಅಪರಾಜಿತಾ ಇದ್ದಾರೆ.

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದ್ದಾರೆ.

ಕಾರ್ಮಿಕ ಸಂಘಗಳು, ದೀನದಲಿತರು ಮತ್ತು ಆದಿವಾಸಿ ಸಮುದಾಯದೊಂದಿಗೆ ಕೆಲಸ ಮಾಡಲು ಸೇನ್ ಚತ್ತೀಸ್‌ಘಡದಲ್ಲಿ ಹಲವು ವರ್ಷ ಉಳಿದುಕೊಂಡಿದ್ದರು. ಅವರು ಇನ್ಸೈಡ್ ಚತ್ತೀಸ್‌ಘಡ: ಎ ಪೊಲಿಟಿಕಲ್ ಮೆಮೋಯಿರ್ ಅಂಡ್ ಸುಖವಾಸಿನ್ ಮತ್ತು ದಿ ಮೈಗ್ರಂಟ್ ವುಮನ್ ಆಫ್ ಚತ್ತೀಸ್‌ಘಡ ಎರಡು ಪುಸ್ತಕಗಳನ್ನು ಬರೆದಿದ್ದಾರೆ.

ಇವರು ಮಹಾರಾಷ್ಟ್ರದ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಮುಂಬೈಗೆ ತೆರಳಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ಮಹಿಳಾ ಅಧ್ಯಯನಕ್ಕಾಗಿ ಸುಧಾರಿತ ಕೇಂದ್ರಕ್ಕೆ ಸೇರಿದ್ದರು.

ವೈದ್ಯರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆಯಾಗಿದ್ದ ಅವರ ಪತಿ ಬಿನಾಯಕ್ ಸೇನ್ ಗೆ 2010 ರಲ್ಲಿ ಛತ್ತೀಸ್ ಗಡದ ವಿಚಾರಣಾ ನ್ಯಾಯಾಲಯವು ದೇಶದ್ರೋಹಕ್ಕೆ ಸಂಚು ರೂಪಿಸಿದ ಆರೋಪ ಮತ್ತು ಮಾವೋವಾದಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ರಾಯಪುರ ಸೆಷನ್ಸ್ ನ್ಯಾಯಾಲಯವು ದೇಶದ್ರೋಹದ ಆರೋಪದ ಮೇಲೆ ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಶಿಕ್ಷೆಗೊಳಪಡಿಸಿತು

ಇಲಿನಾ ಪತಿಯ ಬಿಡುಗಡೆಗಾಗಿ ಕಾನೂನು ಹೋರಾಟಕ್ಕೆ ಮುಂದಾದರು. ಮಧ್ಯ ಭಾರತದ ಆದಿವಾಸಿ ಸಮುದಾಯದ ಹಲವಾರು ಯುವಕರನ್ನು ಕಾರಣವಿಲ್ಲದೇ ಬಂಧಿಸುವುದರ ವಿರುದ್ಧ ಪ್ರಚಾರ ನಡೆಸಿದ್ದರು. 2011 ರಲ್ಲಿ ಸುಪ್ರೀಂ ಕೋರ್ಟ್ ಬಿನಾಯಕ್ ಅವರಿಗೆ ಜಾಮೀನು ನೀಡಿ, ಇವರ ವಿರುದ್ಧ ದೇಶದ್ರೋಹದ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದಿತ್ತು.

ಇಲಿನಾ ಸಾವಿನ ಸುದ್ದಿ ಪ್ರಕಟವಾದ ತಕ್ಷಣ, ಹಲವಾರು ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತಮ್ಮ ದುಃಖವನ್ನು ವ್ಯಕ್ತಪಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಛತ್ತೀಸ್ ಗಡದಲ್ಲಿ ಅತಿಯಾದ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಇಲಿನಾ ತೀವ್ರವಾಗಿ ಟೀಕಿಸಿದ್ದರು.

ದೆಹಲಿಯ ಸ್ವತಂತ್ರ ಸ್ತ್ರೀಸಮಾನತಾವಾದಿ ಪ್ರಕಾಶನ ಕೇಂದ್ರವಾದ ಜುಬಾನ್ ಪ್ರಕಟಿಸಿದ ಎ ಸ್ಪೇಸ್ ವಿಥಾನ್ ದಿ ಸ್ಟ್ರಗಲ್ ಎಂಬ ಪುಸ್ತಕದಲ್ಲಿ, ಇಲಿನಾ ಸಾಮಾಜಿಕ ಚಳುವಳಿಗಳಲ್ಲಿ ಹಲವಾರು ಮಹಿಳೆಯರ ಬಗ್ಗೆ ಮತ್ತು ಅವರೊಳಗಿನ ಪಿತೃಪ್ರಭುತ್ವವನ್ನು ಪ್ರಶ್ನಿಸಿದ್ದರು.

1970 ರ ದಶಕದ ಉತ್ತರಾರ್ಧ ಮತ್ತು 80 ರ ದಶಕದ ಆರಂಭದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ,  ವರದಕ್ಷಿಣೆ ಸಾವು ಮತ್ತು ಮಥುರಾ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇಬ್ಬರೂ ಸೇರಿ ರೂಪಾಂತರ್ ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿದರು. ಇದರ ಕಾರ್ಯಗಳು ಲಿಂಗ ಸಮಸ್ಯೆಗಳು ಮತ್ತು ತರಬೇತಿಗಳು ಮತ್ತು ಕೃಷಿ ಜೀವವೈವಿಧ್ಯತೆಯ ಮೇಲೆ ಕೇಂದ್ರೀಕರಿಸಿತ್ತು.

ಆರೋಗ್ಯವು ಹದಗೆಟ್ಟಾಗಲೂ, ಇಲಿನಾ ಹಲವಾರು ಜನರ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಹೆಚ್ಚಾಗಿ ಬಂಧಿಸುತ್ತಿರುವ ಬಗ್ಗೆ ತನ್ನ ಭಿನ್ನಾಭಿಪ್ರಾಯ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...