Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...