Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....