Homeಮುಖಪುಟಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!

- Advertisement -
- Advertisement -

ಇದೇ ಭಾನುವಾರ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ‘ಸೋಶಿಯಲಿಸಂ’ ಎಂಬ ಯುವಕ ಮತ್ತು ‘ಮಮತಾ ಬ್ಯಾನರ್ಜಿ’ ಎಂಬ ಯುವತಿಯ ನಡುವೆ ಸರಳ ವಿವಾಹ ನಡೆಯಲಿದೆ. ಈ ಇಬ್ಬರ ಹೆಸರುಗಳು ವಿಶೇಷವಾದ ಕಾರಣಕ್ಕೆ ಈ ವಿವಾಹದ ಸುದ್ದಿ ಈಗ ದೇಶಾದ್ಯಂತ ವೈರಲ್ ಆಗಿವೆ. ವರನ ತಂದೆ ಅಪ್ಪಟ ಕಮ್ಯುನಿಷ್ಟ್ ಸಿದ್ದಾಂತ ಪ್ರೇಮಿಯಾದುದ್ದೇ ಈ ವಿವಾಹ ಇಂದು ದೇಶಾದ್ಯಂತ ಚರ್ಚೆಗೊಳಗಾಗಲು ಕಾರಣವಾಗಿವೆ.

ತಮಿಳುನಾಡಿನ ಸೇಲಂ ನಗರದ CPI ಕಾರ್ಯಕರ್ತರಾದ 52 ವರ್ಷದ ಮೋಹನ್ ಎಂಬುವವರು ಅಪ್ಪಟ ಕಮ್ಯುನಿಷ್ಟ್ ಹೋರಾಟಗಾರರು. ಅವರ ತಂದೆ ಮತ್ತು ತಾತ ಕೂಡ ಕಮ್ಯುನಿಷ್ಟರೆ.. ಅದೇ ಹಾದಿಯಲ್ಲಿ ಬೆಳೆದ ಮೋಹನ್ ಸೋವಿಯತ್ ರಷ್ಯಾ ವಿಭಜನೆ ಸಂದರ್ಭದಲ್ಲಿ ಕಮ್ಯುನಿಷ್ಟ್ ಸಿದ್ದಾಂತ ಮುಗಿದ ಅಧ್ಯಾಯ ಎಂಬ ಟೀಕೆಗಳನ್ನು ಕೇಳಿ ಬೇಸರಗೊಂಡಿದ್ದರು. ಆಗ ಅವರು ತಮ್ಮ ಮಕ್ಕಳಿಗೆ ತಾನು ನಂಬಿದ್ದ ಸಿದ್ದಾಂತದ ಹೆಸರಿಡಲು ದೃಢ ನಿರ್ಧಾರ ಮಾಡಿದರು. ಅಂತೆಯೇ ತಮ್ಮ ಮೂರು ಜನ ಮಕ್ಕಳಿಗೆ ಕಮ್ಯುನಿಸಂ, ಲೆನಿನಿಸಂ ಹಾಗೂ ಸೋಶಿಯಲಿಸಂ ಎಂದು ಹೆಸರಿಟ್ಟಿದ್ದಾರೆ. “ನಾವು ಒಂದು ದಿನ ಸಾಯಬಹುದು. ಆದರೆ ಈ ಹೆಸರುಗಳು ನಮ್ಮ ಸಿದ್ದಾಂತವನ್ನು ಯಾವಾಗಲೂ ಪ್ರತಿಬಿಂಬಿಸುತ್ತವೆ” ಎಂದು ಮೋಹನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಈಗ ಸೋಶಿಯಲಿಸಂ ಎಂಬ ಹೆಸರಿನ ಮೂರನೇ ಮಗನಿಗೆ ಮದುವೆ ನಿಶ್ಚಯವಾಗಿದೆ. ಆದರೆ ಅದರಲ್ಲೂ ವಿಶೇಷವಿದೆ. ಅದೇನೆಂದರೆ ಆತ ಮದುವೆಯಾಗುತ್ತಿರುವ ಮದುಮಗಳ ಹೆಸರು ಮಮತಾ ಬ್ಯಾನರ್ಜಿ!. ಈ ಮಮತಾ ಬ್ಯಾನರ್ಜಿಯ ಕುಟುಂಬ ಸದಸ್ಯರೆಲ್ಲರೂ ಅನಾದಿ ಕಾಲದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಂತೆ. ಪಶ್ಚಿಮ ಬಂಗಾಳದ ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರು 20 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು ತುಂಬಾ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದನ್ನು ಗಮನಿಸಿ, ಅಭಿಮಾನದಿಂದ ಈ ತಮಿಳುನಾಡಿನ ಕಾಂಗ್ರೆಸ್ ಕುಟುಂಬ ತಮ್ಮ ಮನೆಯಲ್ಲಿ ಜನಿಸಿದ ಹೆಣ್ಣು ಮಗುವಿಗೆ ಮಮತಾ ಬ್ಯಾನರ್ಜಿ ಎಂದು ಹೆಸರಿಟ್ಟಿದ್ದರಂತೆ. ಆ ಹೆಣ್ಣು ಮಗು ಸದ್ಯದ ಮದುಮಗಳು.. ಇವರಿಬ್ಬರ ಮದುವೆಯ ಆಮಂತ್ರಣ ಪತ್ರಿಕೆ ಈಗ ಇಡೀ ದೇಶದಲ್ಲಿ ವೈರಲ್ ಆಗುತ್ತಿದೆ!

ಇವರಿಬ್ಬರ ಮದುವೆ ಭಾನುವಾರದಂದು ಸೇಲಂನಲ್ಲಿ ಜರುಗಲಿದೆ. ತಮಿಳುನಾಡಿನ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್.ಮುಥಾರಸನ್ ಪಾಲ್ಗೊಳ್ಳಿದ್ದಾರೆ. ಈ ವಿವಾಹಕ್ಕೆ ನೂರಾರು ಜನ ಶುಭ ಹಾರೈಸಿದ್ದಾರೆ. ಇನ್ನು ಕೊನೆಯದಾಗಿ ಒಂದು ವಿಷಯವೆಂದರೆ ಮೋಹನ್ ರವರ ಎರಡನೇ ಮಗ ಲೆನಿನಿಸಂ ಕೂಡ ತನ್ನ ತಂದೆಯ ಹಾದಿಯಲ್ಲಿಯೇ ನಡೆದಿದ್ದು ತನ್ನ ಮಗನಿಗೆ ಮಾರ್ಕ್ಸಿಸಂ ಎಂದು ಹೆಸರಿಟ್ಟಿದ್ದಾರೆ!!!


ಇದನ್ನೂ ಓದಿ; 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...