Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...