Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...