Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...