Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...