Homeಮುಖಪುಟಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

ಇಂದು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ ಜನ್ಮ ದಿನಾಚರಣೆ

 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಜಯಪ್ರಕಾಶ್ ನಾರಾಯಣ ಪ್ರಮುಖ ಪಾತ್ರ ವಹಿಸಿದ್ದರು.

- Advertisement -
- Advertisement -

ಇಂದು ಭಾರತೀಯರು ಪ್ರೀತಿಯಿಂದ ಜೆ.ಪಿ. ಎಂದು ಕರೆಯಲ್ಪಡುವ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರು, ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು  ಸೇರಿದಂತೆ ಹಲವು ಗಣ್ಯರು ಜೆ.ಪಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಲೋಕ ನಾಯಕ ಮತ್ತು ಜೆ.ಪಿ ಎಂದು ಪ್ರಸಿದ್ಧರಾಗಿರುವ ಜಯಪ್ರಕಾಶ್‌ ನಾರಾಯಣ‌ ಅವರು ಬಿಹಾರದ ಸರಾನ್‌ನಲ್ಲಿ 1902ರ ಅಕ್ಟೋಬರ್‌ 11ರಂದು ಜನಿಸಿದರು. ಅಪ್ರತಿಮ ದೇಶಪ್ರೇಮಿ, ಅನ್ಯಾಯದ ವಿರುದ್ಧ ಸತತವಾಗಿ ಹೋರಾಟ ನಡೆಸಿದವರು. ಸ್ವಾತಂತ್ರ ಚಳುವಳಿಯಲ್ಲಿ ಪಾತ್ರವಹಿಸಿದ ಇವರು ಮಹಾತ್ಮ ಗಾಂಧಿ ಮತ್ತು ಎಂ.ಎನ್.ರಾಯ್ ಅವರ ವಿಚಾರಗಳಿಂದ ಪ್ರಭಾವಿತರಾಗಿದ್ದರು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಜೆ.ಪಿ ಅವರು ಅಮೆರಿಕದಲ್ಲಿ ಸತತ ಎಂಟು ವರ್ಷಗಳವರೆಗೆ ನೆಲೆಸಿದ್ದು, ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ಸಮಾಜವಿಜ್ಞಾನಗಳ ಅಧ್ಯಯನ ಮಾಡಿದ್ದಾರೆ. ಪ್ರತಿಭಾಶಾಲಿ ವಿದ್ಯಾರ್ಥಿಯಾಗಿದ್ದ ಜಯಪ್ರಕಾಶರು ಅಮೆರಿಕದಲ್ಲಿ ಮ್ಮ ಜೀವನ ಮತ್ತು ಶಿಕ್ಷಣದ ವೆಚ್ಚವನ್ನು ನಿರ್ವಹಿಸಲು ಕಾರ್ಖಾನೆಗಳಲ್ಲಿ, ಹೋಟೆಲುಗಳಲ್ಲಿ, ಹೊಲಗಳಲ್ಲಿ ದುಡಿದಿದ್ದರು.

ಅಮೆರಿಕವನ್ನು ಬಿಡುವ ಹೊತ್ತಿಗೆ ಜಯಪ್ರಕಾಶರು ಮಾರ್ಕ್ಸ್‌ವಾದಿಯಾಗಿದ್ದರು. ಎಂ. ಎನ್.ರಾಯರ ವಿಚಾರಧಾರೆ ಇವರ ರಾಜಕೀಯ ಪ್ರಜ್ಞೆಯ ಮೇಲೆ ಪ್ರಭಾವ ಬೀರಿತು. 1970 ರ ದಶಕದಲ್ಲಿ ಅವರು ಜೆಪಿ ಚಳವಳಿ ಅಥವಾ ಬಿಹಾರ ಚಳವಳಿ ಎಂದೂ ಕರೆಯಲ್ಪಡುವ ಜನಪ್ರಿಯ ಜನರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

1965 ರಲ್ಲಿ ಜಯಪ್ರಕಾಶ್ ನಾರಾಯಣ್  ಅವರಿಗೆ ಸಾರ್ವಜನಿಕ ಸೇವೆಗಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನೀಡಲಾಯಿತು. ಮರಣೋತ್ತರವಾಗಿ 1999ರಲ್ಲಿ ಭಾರತ್ ರತ್ನ ನೀಡಿ ಗೌರವಿಸಲಾಗಿದೆ.

ಸಮಾಜವಾದಿ ನಾಯಕರ ಜನ್ಮದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿ ’ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಪ್ರಜಾಪ್ರಭುತ್ವದ ನೀತಿಗಳು ಆಕ್ರಮಣಕ್ಕೊಳಗಾದಾಗ, ಅದನ್ನು ರಕ್ಷಿಸಲು ಅವರು ಬಲವಾದ ಜನಾಂದೋಲನವನ್ನು ನಡೆಸಿದರು. ಅವರಿಗೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣಕ್ಕಿಂತ ಮುಖ್ಯವಾದದ್ದು ಏನೂ ಇರಲಿಲ್ಲ’ ಎಂದು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ:  ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕೂಡ ಜೆ.ಪಿ.ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.’ಜಯಪ್ರಕಾಶ್ ನಾರಾಯಣ್ ಜನರ ನಾಯಕರಾಗಿದ್ದರು. ಇಂದಿಗೂ ಅವರ ಆಲೋಚನೆಗಳು ಲಕ್ಷಾಂತರ ಜನರನ್ನು ಪ್ರೇರೆಪಿಸುತ್ತಿವೆ’ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಲೋಕನಾಯಕ ಜಯಪ್ರಕಾಶ್ ನಾರಾಯಣ‌ ಅವರ ಜನ್ಮ ದಿನಾಚರಣೆಯಂದು ಗೌರವ ಅರ್ಪಿಸಿದ್ದಾರೆ. ’ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಭ್ರಷ್ಟಾಚಾರದ ವಿರುದ್ಧದ ಅವರ ಹೋರಾಟವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಹೋರಾಟವು ಜನರ ಮನಸ್ಸಿನಲ್ಲಿ ಅಳಿಸಲಾಗದೆ ಉಳಿದಿದೆ ಎಂದು ನಾಯ್ಡು ಅವರು ಬಣ್ಣಿಸಿದ್ದಾರೆ’ ಎಂದು ಉಪರಾಷ್ಟ್ರಪತಿ ಸಚಿವಾಲಯ ಟ್ವೀಟ್‌ ಮಾಡಿದೆ.


ಇದನ್ನೂಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...